<p><strong>ಮುಂಬೈ</strong>: ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ಅಜಿತ್ ವಾಡೇಕರ್ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರ ಹೆಸರುಗಳನ್ನು ವಾಂಖೆಡೆ ಕ್ರೀಡಾಂಗಣದ ಸ್ಟ್ಯಾಂಡ್ಗಳಿಗೆ ಇಡಲು ನಿರ್ಧರಿಸಲಾಗಿದೆ. </p>.<p>ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. </p>.<p>ರೋಹಿತ್ ಶರ್ಮಾ ಅವರ ಹೆಸರನ್ನು ಕ್ರೀಡಾಂಗಣದ ದಿವೇಚಾ ಪೆವಿಲಿಯನ್ (ಲೆವೆಲ್ 3) ಸ್ಟ್ಯಾಂಡ್ಗೆ ನೀಡಲಾಗುವುದು. ಗ್ರ್ಯಾಂಡ್ ಸ್ಟ್ಯಾಂಡ್ಗೆ (ಲೆವೆಲ್ 3) ಪವಾರ್ ಹಾಗೂ ಗ್ರ್ಯಾಂಡ್ ಸ್ಟ್ಯಾಂಡ್ಗೆ (ಲೆವೆಲ್ 4) ವಾಡೇಕರ್ ಅವರ ಹೆಸರುಗಳನ್ನು ಇಡಲಾಗುವುದು. </p>.<p>ವಾಡೇಕರ್ ಅವರು 1966–1974ರ ಅವಧಿಯಲ್ಲಿ ಭಾರತ ತಂಡದಲ್ಲಿ 37 ಟೆಸ್ಟ್ ಮತ್ತು 2 ಏಕದಿನ ಪಂದ್ಯಗಳನ್ನು ಆಡಿದ್ದರು. 2018ರ ಆಗಸ್ಟ್ನಲ್ಲಿ ಅವರು ನಿಧನರಾದರು. </p>.<p>‘ಮುಂಬೈ ಕ್ರಿಕೆಟ್ನ ಆಧಾರಸ್ತಂಭದಂತಿರುವ ಈ ಮಹನೀಯರನ್ನು ಗೌರವಿಸುವುದು ನಮ್ಮ ಕರ್ತವ್ಯ. ಭವಿಷ್ಯದ ಪೀಳಿಗೆಗೆ ಇವರು ಪ್ರೇರಣೆಯಾಗುತ್ತಾರೆ’ ಎಂದು ಎಂಸಿಎ ಅಧ್ಯಕ್ಷ ಅಜಿಂಕ್ಯ ನಾಯ್ಕ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ಅಜಿತ್ ವಾಡೇಕರ್ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರ ಹೆಸರುಗಳನ್ನು ವಾಂಖೆಡೆ ಕ್ರೀಡಾಂಗಣದ ಸ್ಟ್ಯಾಂಡ್ಗಳಿಗೆ ಇಡಲು ನಿರ್ಧರಿಸಲಾಗಿದೆ. </p>.<p>ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. </p>.<p>ರೋಹಿತ್ ಶರ್ಮಾ ಅವರ ಹೆಸರನ್ನು ಕ್ರೀಡಾಂಗಣದ ದಿವೇಚಾ ಪೆವಿಲಿಯನ್ (ಲೆವೆಲ್ 3) ಸ್ಟ್ಯಾಂಡ್ಗೆ ನೀಡಲಾಗುವುದು. ಗ್ರ್ಯಾಂಡ್ ಸ್ಟ್ಯಾಂಡ್ಗೆ (ಲೆವೆಲ್ 3) ಪವಾರ್ ಹಾಗೂ ಗ್ರ್ಯಾಂಡ್ ಸ್ಟ್ಯಾಂಡ್ಗೆ (ಲೆವೆಲ್ 4) ವಾಡೇಕರ್ ಅವರ ಹೆಸರುಗಳನ್ನು ಇಡಲಾಗುವುದು. </p>.<p>ವಾಡೇಕರ್ ಅವರು 1966–1974ರ ಅವಧಿಯಲ್ಲಿ ಭಾರತ ತಂಡದಲ್ಲಿ 37 ಟೆಸ್ಟ್ ಮತ್ತು 2 ಏಕದಿನ ಪಂದ್ಯಗಳನ್ನು ಆಡಿದ್ದರು. 2018ರ ಆಗಸ್ಟ್ನಲ್ಲಿ ಅವರು ನಿಧನರಾದರು. </p>.<p>‘ಮುಂಬೈ ಕ್ರಿಕೆಟ್ನ ಆಧಾರಸ್ತಂಭದಂತಿರುವ ಈ ಮಹನೀಯರನ್ನು ಗೌರವಿಸುವುದು ನಮ್ಮ ಕರ್ತವ್ಯ. ಭವಿಷ್ಯದ ಪೀಳಿಗೆಗೆ ಇವರು ಪ್ರೇರಣೆಯಾಗುತ್ತಾರೆ’ ಎಂದು ಎಂಸಿಎ ಅಧ್ಯಕ್ಷ ಅಜಿಂಕ್ಯ ನಾಯ್ಕ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>