‘ಕೊರೊನಾ ವೈರಾಣುವಿನ ಉಪಟಳದಿಂದಾಗಿ ಇಡೀ ಜಗತ್ತೇ ತಲ್ಲಣಗೊಂಡಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಮೊಹಮ್ಮದ್ ಶಮಿ ಅವರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 24ರ ಮೂಲಕ ತಮ್ಮ ಊರುಗಳಿಗೆ ಹೋಗುತ್ತಿರುವವರಿಗೆ ಆಹಾರ, ನೀರು ಮತ್ತು ಮುಖಗವಸು ವಿತರಿಸುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ’ ಎಂದು ಬಿಸಿಸಿಐ ಬರೆದುಕೊಂಡಿದೆ.