<p><strong>ಹೈದರಾಬಾದ್</strong>: ಇಂಗ್ಲೆಂಡ್ ವಿರುದ್ಧ ಸಮಬಲಗೊಂಡ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಬುಧವಾರ ತವರಿಗೆ ಮರಳಿದ್ದು, ವಿಮಾನ ನಿಲ್ದಾಣದಲ್ಲಿ ಅವರಿಗೆ ಅಭಿಮಾನಿಗಳು ಆತ್ಮೀಯ ಸ್ವಾಗತ ನೀಡಿದರು.</p>.<p>ಸರಣಿಯ ಎಲ್ಲ ಐದೂ ಪಂದ್ಯಗಳಲ್ಲಿ ಆಡಿದ 31 ವರ್ಷ ವಯಸ್ಸಿನ ಸಿರಾಜ್ 185.3 ಓವರುಗಳನ್ನು ಮಾಡಿದ್ದರು. 23 ವಿಕೆಟ್ಗಳನ್ನು ಕಬಳಿಸಿದ್ದರು.</p>.<p>ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಜೊತೆ ಲಂಡನ್ನಿಂದ ಮೊದಲು ಮುಂಬೈಗೆ ಬಂದಿಳಿದ ಸಿರಾಜ್ ಅವರಿಗೆ ಅಭಿಮಾನಿಗಳ ಸಣ್ಣ ಗುಂಪು ಅವರಿಗೆ ಸಂಭ್ರಮದ ಸ್ವಾಗತ ನೀಡಿತು. ಅಲ್ಲಿಂದ ಅವರು ಕಾರುಹತ್ತಿ ಡೊಮೆಸ್ಟಿಕ್ ಟರ್ಮಿನಲ್ಗೆ ತೆರಳಿ ಅಲ್ಲಿಂದ ಹೈದರಾಬಾದಿಗೆ ತೆರಳಿದರು. ಅಲ್ಲಿ ಅಭಿಮಾನಿಗಳು ನೆರೆದಿದ್ದರು.</p>.<p>‘ನಾವು ಅವರ ಜೊತೆ ಇನ್ನೂ ಮಾತನಾಡಿಲ್ಲ. ಆದರೆ ನಾವು ಅವರಿಗೆ ಅಭಿನಂದಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ದೇಶ ಹೆಮ್ಮೆಪಡುವಂತೆ ಮಾಡಿದ ಸಾಧನೆ ನಮಗೆಲ್ಲಾ ಅಭಿಮಾನದ ವಿಷಯ’ ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಪದಾಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.</p>.ಕ್ರೀಡಾ ಆಡಳಿತ ಮಸೂದೆ: ನಿಯಮಕ್ಕೆ ತಿದ್ದುಪಡಿ; ಬಿಸಿಸಿಐಗೆ ಕೊಂಚ ನೆಮ್ಮದಿ.2027ರ ಏಕದಿನ ವಿಶ್ವಕಪ್ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅನುಮಾನ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಇಂಗ್ಲೆಂಡ್ ವಿರುದ್ಧ ಸಮಬಲಗೊಂಡ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಬುಧವಾರ ತವರಿಗೆ ಮರಳಿದ್ದು, ವಿಮಾನ ನಿಲ್ದಾಣದಲ್ಲಿ ಅವರಿಗೆ ಅಭಿಮಾನಿಗಳು ಆತ್ಮೀಯ ಸ್ವಾಗತ ನೀಡಿದರು.</p>.<p>ಸರಣಿಯ ಎಲ್ಲ ಐದೂ ಪಂದ್ಯಗಳಲ್ಲಿ ಆಡಿದ 31 ವರ್ಷ ವಯಸ್ಸಿನ ಸಿರಾಜ್ 185.3 ಓವರುಗಳನ್ನು ಮಾಡಿದ್ದರು. 23 ವಿಕೆಟ್ಗಳನ್ನು ಕಬಳಿಸಿದ್ದರು.</p>.<p>ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಜೊತೆ ಲಂಡನ್ನಿಂದ ಮೊದಲು ಮುಂಬೈಗೆ ಬಂದಿಳಿದ ಸಿರಾಜ್ ಅವರಿಗೆ ಅಭಿಮಾನಿಗಳ ಸಣ್ಣ ಗುಂಪು ಅವರಿಗೆ ಸಂಭ್ರಮದ ಸ್ವಾಗತ ನೀಡಿತು. ಅಲ್ಲಿಂದ ಅವರು ಕಾರುಹತ್ತಿ ಡೊಮೆಸ್ಟಿಕ್ ಟರ್ಮಿನಲ್ಗೆ ತೆರಳಿ ಅಲ್ಲಿಂದ ಹೈದರಾಬಾದಿಗೆ ತೆರಳಿದರು. ಅಲ್ಲಿ ಅಭಿಮಾನಿಗಳು ನೆರೆದಿದ್ದರು.</p>.<p>‘ನಾವು ಅವರ ಜೊತೆ ಇನ್ನೂ ಮಾತನಾಡಿಲ್ಲ. ಆದರೆ ನಾವು ಅವರಿಗೆ ಅಭಿನಂದಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ದೇಶ ಹೆಮ್ಮೆಪಡುವಂತೆ ಮಾಡಿದ ಸಾಧನೆ ನಮಗೆಲ್ಲಾ ಅಭಿಮಾನದ ವಿಷಯ’ ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಪದಾಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.</p>.ಕ್ರೀಡಾ ಆಡಳಿತ ಮಸೂದೆ: ನಿಯಮಕ್ಕೆ ತಿದ್ದುಪಡಿ; ಬಿಸಿಸಿಐಗೆ ಕೊಂಚ ನೆಮ್ಮದಿ.2027ರ ಏಕದಿನ ವಿಶ್ವಕಪ್ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅನುಮಾನ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>