<p><strong>ನವದೆಹಲಿ:</strong> ಅತಿಥೇಯ ವೆಸ್ಟ್ಇಂಡೀಸ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಬಲಗೈ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಹೊರಗುಳಿಯಲಿದ್ದಾರೆ. </p><p>ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಹಿತಿ ನೀಡಿದೆ. </p><p>ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಸಿರಾಜ್ಗೆ ಮುಂಜಾಗ್ರತಾ ಕ್ರಮವಾಗಿ ವಿಶ್ರಾಂತಿ ಸೂಚಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. </p><p>ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಐದು ವಿಕೆಟ್ ಗಳಿಸಿದ್ದ ಸಿರಾಜ್ ಈಗ ತವರಿಗೆ ಪಯಣಿಸಲಿದ್ದಾರೆ. </p>. <p>ಸಿರಾಜ್ ಬದಲಿ ಆಟಗಾರನನ್ನು ಪ್ರಕಟಿಸಿಲ್ಲ. ಸಿರಾಜ್ ಜೊತೆಗೆ ಟೆಸ್ಟ್ ತಂಡದಲ್ಲಿದ್ದ ರವಿಚಂದ್ರನ್ ಅಶ್ವಿನ್, ಅಜಿಂಕ್ಯ ರಹಾನೆ, ಕೆ.ಎಸ್. ಭರತ್ ಮತ್ತು ನವದೀಪ್ ಸೈನಿ ಕೂಡ ತವರಿಗೆ ಮರಳಲಿದ್ದಾರೆ. </p><p>ಸಿರಾಜ್ ಅನುಪಸ್ಥಿತಿಯಲ್ಲಿ ಭಾರತ ವೇಗದ ಬೌಲಿಂಗ್ ಪಡೆಗೆ ಅನನುಭವ ಕಾಡಲಿದೆ. ಜೈದೇವ್ ಉನಾದ್ಕಟ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್ ಹಾಗೂ ಮುಕೇಶ್ ಕುಮಾರ್ ತಂಡದಲ್ಲಿದ್ದಾರೆ. </p><p>ಭಾರತ ಮತ್ತು ವಿಂಡೀಸ್ ನಡುವಣ ಮೊದಲ ಏಕದಿನ ಪಂದ್ಯ ಇಂದು ರಾತ್ರಿ 7ಕ್ಕೆ ಬಾರ್ಬಡೋಸ್ನಲ್ಲಿ ಆರಂಭವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅತಿಥೇಯ ವೆಸ್ಟ್ಇಂಡೀಸ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಬಲಗೈ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಹೊರಗುಳಿಯಲಿದ್ದಾರೆ. </p><p>ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಹಿತಿ ನೀಡಿದೆ. </p><p>ಹಿಮ್ಮಡಿ ನೋವಿನಿಂದ ಬಳಲುತ್ತಿರುವ ಸಿರಾಜ್ಗೆ ಮುಂಜಾಗ್ರತಾ ಕ್ರಮವಾಗಿ ವಿಶ್ರಾಂತಿ ಸೂಚಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. </p><p>ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಐದು ವಿಕೆಟ್ ಗಳಿಸಿದ್ದ ಸಿರಾಜ್ ಈಗ ತವರಿಗೆ ಪಯಣಿಸಲಿದ್ದಾರೆ. </p>. <p>ಸಿರಾಜ್ ಬದಲಿ ಆಟಗಾರನನ್ನು ಪ್ರಕಟಿಸಿಲ್ಲ. ಸಿರಾಜ್ ಜೊತೆಗೆ ಟೆಸ್ಟ್ ತಂಡದಲ್ಲಿದ್ದ ರವಿಚಂದ್ರನ್ ಅಶ್ವಿನ್, ಅಜಿಂಕ್ಯ ರಹಾನೆ, ಕೆ.ಎಸ್. ಭರತ್ ಮತ್ತು ನವದೀಪ್ ಸೈನಿ ಕೂಡ ತವರಿಗೆ ಮರಳಲಿದ್ದಾರೆ. </p><p>ಸಿರಾಜ್ ಅನುಪಸ್ಥಿತಿಯಲ್ಲಿ ಭಾರತ ವೇಗದ ಬೌಲಿಂಗ್ ಪಡೆಗೆ ಅನನುಭವ ಕಾಡಲಿದೆ. ಜೈದೇವ್ ಉನಾದ್ಕಟ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್ ಹಾಗೂ ಮುಕೇಶ್ ಕುಮಾರ್ ತಂಡದಲ್ಲಿದ್ದಾರೆ. </p><p>ಭಾರತ ಮತ್ತು ವಿಂಡೀಸ್ ನಡುವಣ ಮೊದಲ ಏಕದಿನ ಪಂದ್ಯ ಇಂದು ರಾತ್ರಿ 7ಕ್ಕೆ ಬಾರ್ಬಡೋಸ್ನಲ್ಲಿ ಆರಂಭವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>