ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಕೂಡ ಅನುಭವಿ ವಿಕೆಟ್ಕೀಪರ್. ಈ ತಂಡದಲ್ಲಿಯೂ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಕಲಿಗಳಿದ್ದಾರೆ. ಆ್ಯಂಡ್ರೆ ರಸೆಲ್, ಶುಭಮನ್ ಗಿಲ್, ನಿತೀಶ್ ರಾಣಾ, ಏಯಾನ್ ಆರ್ಗನ್, ಆಲ್ರೌಂಡರ್ ಸುನಿಲ್ ನಾರಾಯಣ್ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಹೋದ ಪಂದ್ಯದಲ್ಲಿ ಶುಭಮನ್ ಗೆಲುವಿನ ರೂವಾರಿಯಾಗಿದ್ದರು. ಈ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ ಕೃಷ್ಣ ಅವರಿಗೆ ಅವಕಾಶ ನೀಡುವರೇ ಕಾದು ನೋಡಬೇಕು. ಕೋಲ್ಕತ್ತ ತಂಡವು ಈ ಟೂರ್ನಿಯಲ್ಲಿ ಆಡಿರುವ ಎರಡು ಪಂದ್ಯಗಳಲ್ಲಿ ಒಂದು ಗೆದ್ದು, ಇನ್ನೊಂದನ್ನು ಸೋತಿದೆ. ಆದರೆ ರಾಜಸ್ಥಾನ ರಾಯಲ್ಸ್ ಆಡಿದ ಎರಡೂ ಪಂದ್ಯಗಳಲ್ಲಿ ವಿಜಯ ಸಾಧಿಸಿದೆ.