<p><strong>ಹೈದರಾಬಾದ್:</strong> ಅನುಭವಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಅಲಭ್ಯತೆಯಿಂದ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ತಂಡದಲ್ಲಿ ಹೆಚ್ಚಿನ ವ್ಯತ್ಯಾಸ ಉಂಟಾಗಿಲ್ಲ ಎಂದು ಸನ್ರೈಸರ್ಸ್ ಹೈದರಾಬಾದ್(ಎಸ್ಆರ್ಎಚ್) ತಂಡದ ವಿಕೆಟ್ ಕೀಪರ್ ಹೆನ್ರಿಚ್ ಕ್ಲಾಸೆನ್ ಹೇಳಿದ್ದಾರೆ. </p><p>ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 19ನೇ ಆವೃತ್ತಿಯ ಮೊದಲ ಎರಡು ಪಂದ್ಯದಲ್ಲಿ ಸಿಎಸ್ಕೆ ತಂಡವು ಸೋಲನುಭವಿಸಿದೆ. ಗಾಯದ ಕಾರಣದಿಂದ ಧೋನಿ, ತಂಡದಲ್ಲಿ ಕಾಣಿಸಿಕೊಂಡಿಲ್ಲ. </p><p>ಸಿಎಸ್ಕೆ ತಂಡದಲ್ಲಿ ಧೋನಿ ಇಲ್ಲದೇ ಇದ್ದರೂ, ಆ ತಂಡವು ಬಲಿಷ್ಠವಾಗಿದೆ. ಅವರ ಅಲಭ್ಯತೆಯಿಂದ ಸಿಎಸ್ಕೆ ತಂಡದ ನಾಯಕತ್ವದಲ್ಲಿ ಸ್ವಲ್ಪ ಬದಲಾವಣೆಯಾಗಿರಬಹುದು, ಆದರೆ ಕಳೆದ ಕೆಲವು ವರ್ಷಗಳಿಂದ ಅವರು ಕೇವಲ 5ರಿಂದ 10 ಎಸೆತಗಳನ್ನು ಎದುರಿಸಲು ಬ್ಯಾಟಿಂಗ್ಗೆ ಬರುತ್ತಾರೆ. ಹಾಗಾಗಿ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನದಲ್ಲಿ ಯಾವುದೇ ವ್ಯತ್ಯಾಸ ಉಂಟಾಗುವುದಿಲ್ಲ ಎಂದು ಹೇಳಿದ್ದಾರೆ. </p><p>ಧೋನಿ ಬದಲು ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದರೆ, ಅವರಿಂದ ನಿರೀಕ್ಷಿತ ಆಟ ಬರುತ್ತಿಲ್ಲ. </p><p>ಏ.18ರಂದು ಎಸ್ಆರ್ಎಚ್ ತಂಡವು ಸಿಎಸ್ಕೆ ವಿರುದ್ಧ ಆಡಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಅನುಭವಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಅಲಭ್ಯತೆಯಿಂದ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ತಂಡದಲ್ಲಿ ಹೆಚ್ಚಿನ ವ್ಯತ್ಯಾಸ ಉಂಟಾಗಿಲ್ಲ ಎಂದು ಸನ್ರೈಸರ್ಸ್ ಹೈದರಾಬಾದ್(ಎಸ್ಆರ್ಎಚ್) ತಂಡದ ವಿಕೆಟ್ ಕೀಪರ್ ಹೆನ್ರಿಚ್ ಕ್ಲಾಸೆನ್ ಹೇಳಿದ್ದಾರೆ. </p><p>ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 19ನೇ ಆವೃತ್ತಿಯ ಮೊದಲ ಎರಡು ಪಂದ್ಯದಲ್ಲಿ ಸಿಎಸ್ಕೆ ತಂಡವು ಸೋಲನುಭವಿಸಿದೆ. ಗಾಯದ ಕಾರಣದಿಂದ ಧೋನಿ, ತಂಡದಲ್ಲಿ ಕಾಣಿಸಿಕೊಂಡಿಲ್ಲ. </p><p>ಸಿಎಸ್ಕೆ ತಂಡದಲ್ಲಿ ಧೋನಿ ಇಲ್ಲದೇ ಇದ್ದರೂ, ಆ ತಂಡವು ಬಲಿಷ್ಠವಾಗಿದೆ. ಅವರ ಅಲಭ್ಯತೆಯಿಂದ ಸಿಎಸ್ಕೆ ತಂಡದ ನಾಯಕತ್ವದಲ್ಲಿ ಸ್ವಲ್ಪ ಬದಲಾವಣೆಯಾಗಿರಬಹುದು, ಆದರೆ ಕಳೆದ ಕೆಲವು ವರ್ಷಗಳಿಂದ ಅವರು ಕೇವಲ 5ರಿಂದ 10 ಎಸೆತಗಳನ್ನು ಎದುರಿಸಲು ಬ್ಯಾಟಿಂಗ್ಗೆ ಬರುತ್ತಾರೆ. ಹಾಗಾಗಿ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನದಲ್ಲಿ ಯಾವುದೇ ವ್ಯತ್ಯಾಸ ಉಂಟಾಗುವುದಿಲ್ಲ ಎಂದು ಹೇಳಿದ್ದಾರೆ. </p><p>ಧೋನಿ ಬದಲು ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದರೆ, ಅವರಿಂದ ನಿರೀಕ್ಷಿತ ಆಟ ಬರುತ್ತಿಲ್ಲ. </p><p>ಏ.18ರಂದು ಎಸ್ಆರ್ಎಚ್ ತಂಡವು ಸಿಎಸ್ಕೆ ವಿರುದ್ಧ ಆಡಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>