ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯಾ ಸಿಮೆಂಟ್ಸ್‌ ಸಭೆಯಲ್ಲಿ ಧೋನಿ

Last Updated 10 ನವೆಂಬರ್ 2018, 20:09 IST
ಅಕ್ಷರ ಗಾತ್ರ

ಚೆನ್ನೈ: ಭಾರತ ಕ್ರಿಕೆಟ್ ತಂಡದ ಆಟಗಾರ ಮಹೇಂದ್ರಸಿಂಗ್ ಧೋನಿ ಶುಕ್ರವಾರ ಇಲ್ಲಿ ನಡೆದ ಇಂಡಿಯಾ ಸಿಮೆಂಟ್ಸ್‌ ಸಂಸ್ಥೆಯ ಬೋರ್ಡ್‌ ಸಭೆಯಲ್ಲಿ ಭಾಗವಹಿಸಿದರು.

ಈ ಕಂಪೆನಿಗೆ ಬಿಸಿಸಿಐನ ಪದಚ್ಯುತ ಅಧ್ಯಕ್ಷ ಎನ್. ಶ್ರೀನಿವಾಸನ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಧೋನಿ ಅವರು ಇಲ್ಲಿ ಉಪಾಧ್ಯಕ್ಷ ಹುದ್ದೆ ಹೊಂದಿದ್ದಾರೆ.

ಸಭೆಯಲ್ಲಿ ಕಂಪೆನಿಯ ಲೆಕ್ಕಪತ್ರ ವ್ಯವಹಾರಗಳು ಮತ್ತು ಭವಿಷ್ಯದ ಯೋಜನೆಗಳ ಕುರಿತು ನಿರ್ದೇಶಕರೊಂದಿಗೆ ಧೋನಿ ಚರ್ಚಿಸಿದರು ಎಂದು ಇಂಟರ್‌ನ್ಯಾಷನಲ್ ಬಿಸಿನೆಸ್ ಟೈಮ್ಸ್‌ ವೆಬ್‌ಸೈಟ್ ವರದಿ ಮಾಡಿದೆ.

ಈಚೆಗೆ ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಯಲ್ಲಿ ಧೋನಿ ಆಡಿ ದ್ದರು. ಆದರೆ ಟ್ವೆಂಟಿ–20 ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT