<p><strong>ಚೆನ್ನೈ:</strong> ನಾವು ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಮುಂದಿನ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಅವರು ಆಡುವ ಸಾಧ್ಯತೆಯಿದೆ ಎಂದು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ತಂಡದ ನಾಯಕ ಋತುರಾಜ್ ಗಾಯಕವಾಡ್ ಹೇಳಿದ್ದಾರೆ.</p><p>ಚೆನ್ನೈನ ಎಂ.ಎ ಚಿದಂಬರಂ ಮೈದಾನದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸಿಎಸ್ಕೆ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.</p><p>ಟಾಸ್ ವೇಳೆ ಧೋನಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಋತುರಾಜ್ ಗಾಯಕವಾಡ್, ‘ಧೊನಿ ಅವರು ಮೈದಾನಕ್ಕೆ ಆಗಮಿಸಿದ್ದಾರೆ. ಸಂಪೂರ್ಣ ಗುಣಮುಖರಾಗಿಲ್ಲದ ಕಾರಣ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಆದರೆ, ಒಂದು ವೇಳೆ ನಾವು ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಕೊನೆಯ ಪಂದ್ಯದಲ್ಲಿ ಅವರು ಆಡಬಹುದು’ ಎಂದು ಹೇಳಿದ್ದಾರೆ. </p><p>ಪಂದ್ಯಕ್ಕೂ ಮುನ್ನ ಧೋನಿ, ಮೈದಾನಕ್ಕೆ ಆಗಮಿಸುತ್ತಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು ಮತ್ತು ಸಿಎಸ್ಕೆಗೆ ಇದು ತವರು ಮೈದಾನದಲ್ಲಿ ಕೊನೆಯ ಪಂದ್ಯವಾಗಿದೆ. ಹಾಗಾಗಿ, ಧೋನಿ ಅವರು ಈ ಪಂದ್ಯದಲ್ಲಿ ಕಣಕ್ಕಿಳಿಯಬಹುದು ಎಂದು ಅಭಿಮಾನಿಗಳು ಭಾವಿಸಿದ್ದರು. </p><p>ಸಿಎಸ್ಕೆ ತಂಡವು ಲೀಗ್ ಹಂತದ ತನ್ನ ಕೊನೆಯ ಪಂದ್ಯವನ್ನು ಗುಜರಾತ್ ಟೈಟನ್ಸ್ ವಿರುದ್ಧ ಆಡಲಿದ್ದು, ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಆ ಪಂದ್ಯ ನಡೆಯಲಿದೆ. </p><p>ಋತುರಾಜ್ ಗಾಯಕವಾಡ್ ನೇತೃತ್ವದ ಸಿಎಸ್ಕೆ ತಂಡವು ಆಡಿರುವ 12 ಪಂದ್ಯಗಳಲ್ಲಿ 6ರಲ್ಲಿ ಗೆಲುವು ದಾಖಲಿಸಿದ್ದು ಒಟ್ಟು 12 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಈ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಪ್ಲೇ–ಆಫ್ ಹಾದಿ ಮತ್ತಷ್ಟು ಕಠಿಣವಾಗಲಿದೆ. </p>.IPL 2026| ಬ್ರೆವಿಸ್, ಕಾರ್ತಿಕ್ ಶರ್ಮಾ ಜವಾಬ್ದಾರಿಯುತ ಆಟ: SRHಗೆ 181 ರನ್ ಗುರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ನಾವು ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಮುಂದಿನ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಅವರು ಆಡುವ ಸಾಧ್ಯತೆಯಿದೆ ಎಂದು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ತಂಡದ ನಾಯಕ ಋತುರಾಜ್ ಗಾಯಕವಾಡ್ ಹೇಳಿದ್ದಾರೆ.</p><p>ಚೆನ್ನೈನ ಎಂ.ಎ ಚಿದಂಬರಂ ಮೈದಾನದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸಿಎಸ್ಕೆ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.</p><p>ಟಾಸ್ ವೇಳೆ ಧೋನಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಋತುರಾಜ್ ಗಾಯಕವಾಡ್, ‘ಧೊನಿ ಅವರು ಮೈದಾನಕ್ಕೆ ಆಗಮಿಸಿದ್ದಾರೆ. ಸಂಪೂರ್ಣ ಗುಣಮುಖರಾಗಿಲ್ಲದ ಕಾರಣ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಆದರೆ, ಒಂದು ವೇಳೆ ನಾವು ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಕೊನೆಯ ಪಂದ್ಯದಲ್ಲಿ ಅವರು ಆಡಬಹುದು’ ಎಂದು ಹೇಳಿದ್ದಾರೆ. </p><p>ಪಂದ್ಯಕ್ಕೂ ಮುನ್ನ ಧೋನಿ, ಮೈದಾನಕ್ಕೆ ಆಗಮಿಸುತ್ತಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು ಮತ್ತು ಸಿಎಸ್ಕೆಗೆ ಇದು ತವರು ಮೈದಾನದಲ್ಲಿ ಕೊನೆಯ ಪಂದ್ಯವಾಗಿದೆ. ಹಾಗಾಗಿ, ಧೋನಿ ಅವರು ಈ ಪಂದ್ಯದಲ್ಲಿ ಕಣಕ್ಕಿಳಿಯಬಹುದು ಎಂದು ಅಭಿಮಾನಿಗಳು ಭಾವಿಸಿದ್ದರು. </p><p>ಸಿಎಸ್ಕೆ ತಂಡವು ಲೀಗ್ ಹಂತದ ತನ್ನ ಕೊನೆಯ ಪಂದ್ಯವನ್ನು ಗುಜರಾತ್ ಟೈಟನ್ಸ್ ವಿರುದ್ಧ ಆಡಲಿದ್ದು, ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಆ ಪಂದ್ಯ ನಡೆಯಲಿದೆ. </p><p>ಋತುರಾಜ್ ಗಾಯಕವಾಡ್ ನೇತೃತ್ವದ ಸಿಎಸ್ಕೆ ತಂಡವು ಆಡಿರುವ 12 ಪಂದ್ಯಗಳಲ್ಲಿ 6ರಲ್ಲಿ ಗೆಲುವು ದಾಖಲಿಸಿದ್ದು ಒಟ್ಟು 12 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಈ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಪ್ಲೇ–ಆಫ್ ಹಾದಿ ಮತ್ತಷ್ಟು ಕಠಿಣವಾಗಲಿದೆ. </p>.IPL 2026| ಬ್ರೆವಿಸ್, ಕಾರ್ತಿಕ್ ಶರ್ಮಾ ಜವಾಬ್ದಾರಿಯುತ ಆಟ: SRHಗೆ 181 ರನ್ ಗುರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>