ಮೊದಲು ಬ್ಯಾಟ್ ಮಾಡಿದ್ದ ಗುಜರಾತ್ ಟೈಟನ್ಸ್ ತಂಡ, 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ನಂತರ ಮಳೆ ಸುರಿದಿದ್ದರಿಂದ ಡಕ್ವರ್ಥ್ ಲೂಯಿಸ್ ನಿಯಮದಂತೆ ಪಂದ್ಯ ಪರಿಷ್ಕತಗೊಂಡಿತ್ತು. ಅದರಂತೆ, ಚೆನ್ನೈಗೆ 15 ಓವರ್ಗಳಲ್ಲಿ 171 ರನ್ಗಳ ಗುರಿ ನಿಗದಿಯಾಯಿತು.
ಸವಾಲಿನ ಮೊತ್ತ ಬೆನ್ನುಹತ್ತಿದ ಚೆನ್ನೈಗೆ ಕಡೇ ಎರಡು ಎಸೆತಗಳಲ್ಲಿ ಹತ್ತು ರನ್ಗಳ ಬೇಕಿತ್ತು. ಆಗ ಬ್ಯಾಟ್ ಬೀಸಿದ ರವೀಂದ್ರ ಜಡೇಜ, ಒಂದು ಸಿಕ್ಸರ್ ಮತ್ತು ಒಂದು ಬೌಂಡರಿ ಭಾರಿಸಿ ಚೆನ್ನೈಗೆ ಗೆಲುವು ತಂದುಕೊಟ್ಟರು.
ತಂಡದ ಗೆಲುವಿಗೆ ಕಾರಣವಾದ ಜಡೇಜ ಅವರನ್ನು ಕ್ರೀಡಾಂಗಣದಲ್ಲೇ ಮೇಲಕ್ಕೆತ್ತಿದ ನಾಯಕ ಮಹೇಂದ್ರ ಸಿಂಗ್ ಧೋನಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಚಿತ್ರವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಫೊಟೊ ಮೆಚ್ಚುಗೆಗೆ ಪಾತ್ರವಾಗಿದೆ.