ನವದೆಹಲಿ (ಪಿಟಿಐ): ಭಾರತ ತಂಡದ ಆಟಗಾರ ಮಹೇಂದ್ರಸಿಂಗ್ ಧೋನಿ ಅವರು ತಮ್ಮ ನಿವೃತ್ತಿಯ ನಿರ್ಧಾರವನ್ನು ಮುಂದಿನ ಐಪಿಎಲ್ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ನಂತರ ತೆಗೆದುಕೊಳ್ಳಲಿದ್ಧಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಇಂಗ್ಲೆಂಡ್ನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಆಡಿದ ಯಾವುದೇ ಸರಣಿಯಲ್ಲಿಯೂ ಧೋನಿ ಆಡಿಲ್ಲ. ಆದ್ದರಿಂದ ಅವರು ನಿಗದಿಯ ಓವರ್ಗಳ ಕ್ರಿಕೆಟ್ನಿಂದ ನಿವೃತ್ತರಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
‘ವದಂತಿಗಳನ್ನು ನಿಯಂತ್ರಿಸಲು ಯಾರಿಂದಲೂ ಸಾಧ್ಯವಿಲ್ಲ. ಧೋನಿ ಶ್ರೇಷ್ಠ ಆಟಗಾರನಾಗಿದ್ದಾರೆ. ಆದ್ದರಿಂದ ಅವರ ಕುರಿತು ಮಾತುಗಳು ಹರಿದಾಡುವುದು ಸಹಜ’ ಎಂದು ಮೂಲಗಳು ಹೇಳಿವೆ.
ಧೋನಿ ಈಚೆಗೆ ರಾಂಚಿಯಲ್ಲಿ ಜಾರ್ಖಂಡ್ನ 23 ವರ್ಷದೊಳಗಿನವರ ತಂಡಕ್ಕೆ ಮಾರ್ಗದರ್ಶನ ನೀಡಿದ್ದರು. ನೆಟ್ಸ್ನಲ್ಲಿ ಕಾಣಿಸಿಕೊಂಡಿದ್ದ ಅವರು ಮತ್ತೆ ಕ್ರಿಕೆಟ್ಗೆ ಮರಳುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಬರೆದಿದ್ದರು.