ಮನೀಷ್ ಪಾಂಡೆ ನಾಯಕತ್ವದ ಕರ್ನಾಟಕ ಮೊದಲ ಪಂದ್ಯದಲ್ಲಿ ಪುದುಚೇರಿ ವಿರುದ್ಧ 236 ರನ್ಗಳ ಜಯ ಗಳಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯದಿಂದಾಗಿ ತಮಿಳುನಾಡಿಗೆ ಮಣಿದಿತ್ತು. ಮುಂಬೈ ಕೂಡ ಒಂದು ಪಂದ್ಯದಲ್ಲಿ ಜಯ ಗಳಿಸಿದ್ದು ಒಂದರಲ್ಲಿ ಸೋತಿದೆ. ಮೊದಲ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಸೋತಿದ್ದ ತಂಡ ನಂತರ ಬರೋಡಾವನ್ನು ಮಣಿಸಿತ್ತು.