<figcaption>""</figcaption>.<p><strong>ಶಾರ್ಜಾ: </strong>ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಸದ್ಯದ ಪರಿಸ್ಥಿತಿಯಲ್ಲಿ ಅಂಕಪಟ್ಟಿಯ ತಳಕ್ಕೆ ಜಾರಿದೆ. ಅವತ್ತು ಸೋತಿದ್ದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಹೊಸ್ತಿಲಿಗೆ ಬಂದು ನಿಂತಿದೆ.</p>.<p>ಈ ಎರಡೂ ತಂಡಗಳು ಶುಕ್ರವಾರ ಮುಖಾಮುಖಿಯಾಗಲಿವೆ. ಒಟ್ಟು ಒಂಬತ್ತು ಪಂದ್ಯಗಳನ್ನು ಆಡಿರುವ ಮುಂಬೈ ಆರರಲ್ಲಿ ಗೆ್ದು, ಮೂರರಲ್ಲಿ ಸೋತಿದೆ. ಆದರೆ ಮಹೇಂದ್ರಸಿಂಗ್ ಧೋನಿ ಬಳಗವು ಹತ್ತು ಪಂದ್ಯಗಳನ್ನು ಆಡಿ ಮೂರು ಗೆದ್ದು, ಏಳರಲ್ಲಿ ಸೋತಿದೆ. ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ.</p>.<p>ಹೋದ ಪಂದ್ಯದ ಸೋಲಿನ ನಂತರದ ಮಾತನಾಡಿದ್ದ ಧೋನಿ, ’ಯುವ ಆಟಗಾರರಲ್ಲಿ ಜಯದ ತುಡಿತ (ಕಿಡಿ) ಕಾಣುತ್ತಿಲ್ಲ. ಮುಂದಿನ ಪಂದ್ಯಗಳಲ್ಲಿ ಹೆಚ್ಚು ಒತ್ತಡ ಇರುವುದಿಲ್ಲ. ಆದ್ದರಿಂದ ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡಲಾಗುವುದು‘ ಎಂದಿದ್ದರು. ಅವರ ಈ ಮಾತು ಬಹಳಷ್ಟು ಜನರಿಂದ ಟೀಕೆಗೆ ಗುರಿಯಾಗಿತ್ತು.</p>.<p>ಆದ್ದರಿಂದ ಈ ಪಂದ್ಯದಲ್ಲಿ ಎನ್. ಜಗದೀಶನ್ ಮತ್ತು ಇತರ ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಕೇದಾರ್ ಜಾಧವ್, ಅಂಬಟಿ ರಾಯುಡು ಅವರಂತಹ ಅನುಭವಿ ಆಟಗಾರರಿಗೆ ವಿಶ್ರಾಂತಿ ನೀಡಬಹುದು.</p>.<p>ಆದರೆ ಬೌಲಿಂಗ್ನಲ್ಲಿ ದೀಪಕ್ ಚಾಹರ್. ಸ್ಯಾಮ್ ಕರನ್, ಕರ್ಣ ಶರ್ಮಾ ಅವರು ಉತ್ತಮ ಲಯದಲ್ಲಿದ್ದಾರೆ. ತಂಡದ ಸಮಾಧಾನಕರ ಗೆಲುವಿಗೆ ಪ್ರಯತ್ನಿಸುವ ಸಾಮರ್ಥ್ಯ ಅವರಿಗೆ ಇದೆ.</p>.<p>ಆದರೆ, ಕಳೆದ ಒಂದು ತಿಂಗಳ ಅವಧಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ತಂಡವು ಎಲ್ಲ ವಿಭಾಗಗಳಲ್ಲಿಯೂ ಬಲಿಷ್ಠವಾಗಿ ಬೆಳೆದಿದೆ. ಬ್ಯಾಟಿಂಗ್ನಲ್ಲಿ ಎಂಟು ಮಂದಿ ರನ್ ಹರಿಸುವ ಸಾಮರ್ಥ್ಯ ಹೊಂದಿದ್ದಾರೆ.ಬೌಲಿಂಗ್ನಲ್ಲಿ ಜಸ್ಪ್ರೀತ್ ಬೂಮ್ರಾ, ಕೃಣಾಲ್ ಪಾಂಡ್ಯ ಅವರ ಮೋಡಿ ಮುಂದುವರಿದಿದೆ.</p>.<p>ಹೋದ ಪಂದ್ಯದಲ್ಲಿ ಮುಂಬೈ ’ಡಬಲ್ ಸೂಪರ್ ಓವರ್‘ನಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಸೋತಿತ್ತು. ಇದು ಮುಂಬೈ ತಂಡದ ಜಿದ್ದಾಜಿದ್ದಿನ ಹೋರಾಟಕ್ಕೊಂದು ನಿದರ್ಶನ. ಆದ್ದರಿಂದ ಚೆನ್ನೈ ಅಂಕಪಟ್ಟಿಯಲ್ಲಿ ತುಸು ಮೇಲೆರಬೇಕಾದರೆ ಮುಂಬೈ ಎದುರು ತನ್ನೆಲ್ಲ ಸಾಮರ್ಥ್ಯವನ್ನು ಪಣಕ್ಕೊಡ್ಡುವ ಸವಾಲು ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಶಾರ್ಜಾ: </strong>ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಸದ್ಯದ ಪರಿಸ್ಥಿತಿಯಲ್ಲಿ ಅಂಕಪಟ್ಟಿಯ ತಳಕ್ಕೆ ಜಾರಿದೆ. ಅವತ್ತು ಸೋತಿದ್ದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಹೊಸ್ತಿಲಿಗೆ ಬಂದು ನಿಂತಿದೆ.</p>.<p>ಈ ಎರಡೂ ತಂಡಗಳು ಶುಕ್ರವಾರ ಮುಖಾಮುಖಿಯಾಗಲಿವೆ. ಒಟ್ಟು ಒಂಬತ್ತು ಪಂದ್ಯಗಳನ್ನು ಆಡಿರುವ ಮುಂಬೈ ಆರರಲ್ಲಿ ಗೆ್ದು, ಮೂರರಲ್ಲಿ ಸೋತಿದೆ. ಆದರೆ ಮಹೇಂದ್ರಸಿಂಗ್ ಧೋನಿ ಬಳಗವು ಹತ್ತು ಪಂದ್ಯಗಳನ್ನು ಆಡಿ ಮೂರು ಗೆದ್ದು, ಏಳರಲ್ಲಿ ಸೋತಿದೆ. ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ.</p>.<p>ಹೋದ ಪಂದ್ಯದ ಸೋಲಿನ ನಂತರದ ಮಾತನಾಡಿದ್ದ ಧೋನಿ, ’ಯುವ ಆಟಗಾರರಲ್ಲಿ ಜಯದ ತುಡಿತ (ಕಿಡಿ) ಕಾಣುತ್ತಿಲ್ಲ. ಮುಂದಿನ ಪಂದ್ಯಗಳಲ್ಲಿ ಹೆಚ್ಚು ಒತ್ತಡ ಇರುವುದಿಲ್ಲ. ಆದ್ದರಿಂದ ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡಲಾಗುವುದು‘ ಎಂದಿದ್ದರು. ಅವರ ಈ ಮಾತು ಬಹಳಷ್ಟು ಜನರಿಂದ ಟೀಕೆಗೆ ಗುರಿಯಾಗಿತ್ತು.</p>.<p>ಆದ್ದರಿಂದ ಈ ಪಂದ್ಯದಲ್ಲಿ ಎನ್. ಜಗದೀಶನ್ ಮತ್ತು ಇತರ ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಕೇದಾರ್ ಜಾಧವ್, ಅಂಬಟಿ ರಾಯುಡು ಅವರಂತಹ ಅನುಭವಿ ಆಟಗಾರರಿಗೆ ವಿಶ್ರಾಂತಿ ನೀಡಬಹುದು.</p>.<p>ಆದರೆ ಬೌಲಿಂಗ್ನಲ್ಲಿ ದೀಪಕ್ ಚಾಹರ್. ಸ್ಯಾಮ್ ಕರನ್, ಕರ್ಣ ಶರ್ಮಾ ಅವರು ಉತ್ತಮ ಲಯದಲ್ಲಿದ್ದಾರೆ. ತಂಡದ ಸಮಾಧಾನಕರ ಗೆಲುವಿಗೆ ಪ್ರಯತ್ನಿಸುವ ಸಾಮರ್ಥ್ಯ ಅವರಿಗೆ ಇದೆ.</p>.<p>ಆದರೆ, ಕಳೆದ ಒಂದು ತಿಂಗಳ ಅವಧಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ತಂಡವು ಎಲ್ಲ ವಿಭಾಗಗಳಲ್ಲಿಯೂ ಬಲಿಷ್ಠವಾಗಿ ಬೆಳೆದಿದೆ. ಬ್ಯಾಟಿಂಗ್ನಲ್ಲಿ ಎಂಟು ಮಂದಿ ರನ್ ಹರಿಸುವ ಸಾಮರ್ಥ್ಯ ಹೊಂದಿದ್ದಾರೆ.ಬೌಲಿಂಗ್ನಲ್ಲಿ ಜಸ್ಪ್ರೀತ್ ಬೂಮ್ರಾ, ಕೃಣಾಲ್ ಪಾಂಡ್ಯ ಅವರ ಮೋಡಿ ಮುಂದುವರಿದಿದೆ.</p>.<p>ಹೋದ ಪಂದ್ಯದಲ್ಲಿ ಮುಂಬೈ ’ಡಬಲ್ ಸೂಪರ್ ಓವರ್‘ನಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಸೋತಿತ್ತು. ಇದು ಮುಂಬೈ ತಂಡದ ಜಿದ್ದಾಜಿದ್ದಿನ ಹೋರಾಟಕ್ಕೊಂದು ನಿದರ್ಶನ. ಆದ್ದರಿಂದ ಚೆನ್ನೈ ಅಂಕಪಟ್ಟಿಯಲ್ಲಿ ತುಸು ಮೇಲೆರಬೇಕಾದರೆ ಮುಂಬೈ ಎದುರು ತನ್ನೆಲ್ಲ ಸಾಮರ್ಥ್ಯವನ್ನು ಪಣಕ್ಕೊಡ್ಡುವ ಸವಾಲು ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>