ನವಸಾರಿ (ಗುಜರಾತ್): 2018 ರ ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿದ್ದ ನರೇಶ್ ತುಮ್ಡಾ ಈಗ ಜೀವನೋಪಾಯಕ್ಕಾಗಿ ನವಸಾರಿ ನಗರದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.
ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ಜೊತೆಗೆ ಮಾತನಾಡಿರುವ ಅವರು, ‘ನಾನು ಕೂಲಿ ಮೂಲಕ ದಿನಕ್ಕೆ ₹250 ಗಳಿಸುತ್ತಿದ್ದೇನೆ. ನನಗೆ ಕೆಲಸ ಕೊಡಿಸುವಂತೆ ಮುಖ್ಯಮಂತ್ರಿ ಅವರಿಗೆ ಮೂರು ಬಾರಿ ಮನವಿ ಮಾಡಿದ್ದೆ. ಆದರೆ, ಉತ್ತರವೇ ಸಿಗಲಿಲ್ಲ. ನನ್ನ ಕುಟುಂಬವನ್ನು ನೋಡಿಕೊಳ್ಳಲು ನನಗೆ ಕೆಲಸ ನೀಡುವಂತೆ ಸರ್ಕಾರವನ್ನು ಕೋರುತ್ತೇನೆ,‘ ಎಂದು ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.