ಬ್ರಿಸ್ಬೇನ್ನಲ್ಲಿ ನಡೆದಿದ್ದ ಅಂತಿಮ ಮತ್ತು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಭೂತಪೂರ್ವ ಜಯ ಗಳಿಸಿತ್ತು. ಟಿ. ನಟರಾಜನ್ಗೆ ಹುಟ್ಟೂರಾದ ತಮಿಳುನಾಡಿದ ಸೇಲಂ ಜಿಲ್ಲೆಯ ಚಿನ್ನಂಪಟ್ಟಿ ಗ್ರಾಮದಲ್ಲಿ ದೊರೆತ ವಿಶೇಷ ಸ್ವಾಗತದ ವಿಡಿಯೋ ತುಣುಕನ್ನು ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದು, ಇಲ್ಲಿ ಕ್ರಿಕೆಟ್ ಎನ್ನುವುದು ಕೇವಲ ಒಂದು ಆಟವಲ್ಲ, ಅದಕ್ಕೂ ಮಿಗಿಲಾದುದು ಎಂದು ಬರೆದುಕೊಂಡಿದ್ದಾರೆ.