<p><strong>ಕಠ್ಮಂಡು</strong>: ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ಅವರ ಮೇಲಿದ್ದ ಅತ್ಯಾಚಾರ ಆರೋಪವು ಸಾಬೀತಾಗಿದೆ. ಅವರು ತಪ್ಪಿತಸ್ಥರು ಎಂದು ನ್ಯಾಯಾಲಯವು ತೀರ್ಮಾನಿಸಿದೆ.</p>.<p>ಹೋದ ವರ್ಷದ ಆಗಸ್ಟ್ನಲ್ಲಿ 18 ವರ್ಷದ ಹುಡುಗಿಯೊಬ್ಬಳ ಮೇಲೆ ಸಂದೀಪ್ ಹೋಟೆಲ್ವೊಂದರಲ್ಲಿ ಅತ್ಯಾಚಾರ ಎಸಗಿದ್ದರೆಂದು ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಅವರನ್ನು ಬಂಧಿಸಲಾಗಿತ್ತು. ಕಳೆದ ಜನವರಿಯವಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.</p>.<p>ನೇಪಾಳದ ಪ್ರಮುಖ ಆಟಗಾರನಾಗಿದ್ದ ಸಂದೀಪ್ 2018ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡಿದ್ದರು.</p>.<p>ಸಂದೀಪ್ ಪ್ರಕರಣದ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶಿಶಿರ್ ರಜ್ ಧಾಕಲ್ ಅವರ ಏಕಸದಸ್ಯ ನ್ಯಾಯಪೀಠವು ನಡೆಸಿತು. ಕಳೆದ ಭಾನುವಾರದಿಂದಲೇ ವಿಚಾರಣೆಗಳು ನಡೆದಿದ್ದವು. ಶುಕ್ರವಾರದಂದು ನ್ಯಾಯಾಧೀಶರು, ಸಂದೀಪ್ ಅವರು ತಪ್ಪೆಸಗಿದ್ದಾರೆಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಕಠ್ಮಂಡು ಪೋಸ್ಟ್ ಪತ್ರಿಕೆಯು ವರದಿ ಮಾಡಿದೆ.</p>.<p>ಅತ್ಯಾಚಾರ ಸಂತ್ರಸ್ತೆಯು ಗೌಶಾಲಾದ ಮೆಟ್ರೊಪಾಲಿಟಿನ್ ಪೊಲೀಸ್ ವೃತ್ತದ ಠಾಣೆಯಲ್ಲಿ 2022ರ ಸೆಪ್ಟೆಂಬರ್ನಲ್ಲಿ ದೂರು ದಾಖಲಿಸಿದ್ದರು.</p>.<p>ನ್ಯಾಯಾಲಯವು ಶೀಘ್ರದಲ್ಲಿಯೇ ಶಿಕ್ಷೆ ಪ್ರಕಟಿಸುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು</strong>: ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ಅವರ ಮೇಲಿದ್ದ ಅತ್ಯಾಚಾರ ಆರೋಪವು ಸಾಬೀತಾಗಿದೆ. ಅವರು ತಪ್ಪಿತಸ್ಥರು ಎಂದು ನ್ಯಾಯಾಲಯವು ತೀರ್ಮಾನಿಸಿದೆ.</p>.<p>ಹೋದ ವರ್ಷದ ಆಗಸ್ಟ್ನಲ್ಲಿ 18 ವರ್ಷದ ಹುಡುಗಿಯೊಬ್ಬಳ ಮೇಲೆ ಸಂದೀಪ್ ಹೋಟೆಲ್ವೊಂದರಲ್ಲಿ ಅತ್ಯಾಚಾರ ಎಸಗಿದ್ದರೆಂದು ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಅವರನ್ನು ಬಂಧಿಸಲಾಗಿತ್ತು. ಕಳೆದ ಜನವರಿಯವಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.</p>.<p>ನೇಪಾಳದ ಪ್ರಮುಖ ಆಟಗಾರನಾಗಿದ್ದ ಸಂದೀಪ್ 2018ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡಿದ್ದರು.</p>.<p>ಸಂದೀಪ್ ಪ್ರಕರಣದ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶಿಶಿರ್ ರಜ್ ಧಾಕಲ್ ಅವರ ಏಕಸದಸ್ಯ ನ್ಯಾಯಪೀಠವು ನಡೆಸಿತು. ಕಳೆದ ಭಾನುವಾರದಿಂದಲೇ ವಿಚಾರಣೆಗಳು ನಡೆದಿದ್ದವು. ಶುಕ್ರವಾರದಂದು ನ್ಯಾಯಾಧೀಶರು, ಸಂದೀಪ್ ಅವರು ತಪ್ಪೆಸಗಿದ್ದಾರೆಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಕಠ್ಮಂಡು ಪೋಸ್ಟ್ ಪತ್ರಿಕೆಯು ವರದಿ ಮಾಡಿದೆ.</p>.<p>ಅತ್ಯಾಚಾರ ಸಂತ್ರಸ್ತೆಯು ಗೌಶಾಲಾದ ಮೆಟ್ರೊಪಾಲಿಟಿನ್ ಪೊಲೀಸ್ ವೃತ್ತದ ಠಾಣೆಯಲ್ಲಿ 2022ರ ಸೆಪ್ಟೆಂಬರ್ನಲ್ಲಿ ದೂರು ದಾಖಲಿಸಿದ್ದರು.</p>.<p>ನ್ಯಾಯಾಲಯವು ಶೀಘ್ರದಲ್ಲಿಯೇ ಶಿಕ್ಷೆ ಪ್ರಕಟಿಸುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>