<p><strong>ಮ್ಯಾಂಚೆಸ್ಟರ್:</strong> ಭಾರತ ತಂಡದ ಪ್ರಮುಖ ಆಲ್ರೌಂಡರ್ ನಿತೀಶ್ ಕುಮಾರ್ ಅವರು ಭಾನುವಾರ ಅಭ್ಯಾಸ ವೇಳೆ ಮೊಣಕಾಲು ಗಾಯಕ್ಕೆ ತುತ್ತಾಗಿದ್ದು, ನಾಲ್ಕನೇ ಟೆಸ್ಟ್ನಲ್ಲಿ ಕಣಕ್ಕಿಳಿಯುವುದು ಅನುಮಾನವಾಗಿದೆ. </p><p>ಇಂಗ್ಲೆಂಡ್ ವಿರುದ್ಧದ ಸರಣಿಯ ನಾಲ್ಕನೇ ಪಂದ್ಯ ಜುಲೈ 23 ರಿಂದ ಆರಂಭವಾಗಲಿದೆ.</p><p>ಮ್ಯಾಂಚೆಸ್ಟರ್ನಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಒಳಾಂಗಣ ಕ್ರೀಡಾಂಗಣದಲ್ಲಿ ಭಾರತೀಯ ಆಟಗಾರರು ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ನಿತೀಶ್ ರೆಡ್ಡಿ ಅವರು ಗಾಯಕ್ಕೆ ತುತ್ತಾಗಿದ್ದಾರೆ.</p><p>ರೆಡ್ಡಿ ಅವರಿಗೆ ಗಂಭೀರ ಪ್ರಮಾಣದ ಗಾಯವಾಗಿದ್ದು, ನಾಲ್ಕನೇ ಪಂದ್ಯದಲ್ಲಿ ಕಾಣಿಸಿಕೊಳ್ಳುವುದು ಅನುಮಾನವಾಗಿದೆ. ಸರಣಿಯಿಂದಲೇ ಹೊರಬೀಳುವ ಸಾಧ್ಯತೆಯಿದೆ. </p><p>ನಾಲ್ಕನೇ ಟೆಸ್ಟ್ಗೂ ಮುನ್ನ ಭಾರತಕ್ಕೆ ಗಾಯಾಳುಗಳ ಚಿಂತೆ ಆರಂಭವಾಗಿದೆ. ತಂಡದ ಪ್ರಮುಖ ವೇಗದ ಬೌಲರ್ ಆಕಾಶ್ ದೀಪ್ ಅವರು ಬೆನ್ನುನೋವಿನ ಸಮಸ್ಯೆಗೆ ತುತ್ತಾಗಿದ್ದು, ನಾಲ್ಕನೇ ಟೆಸ್ಟ್ನಿಂದ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಆರ್ಶದೀಪ್ ಸಿಂಗ್ ಕೂಡ ಸರಣಿಯ ಉಳಿದ ಪಂದ್ಯಗಳಿಗೆ ಅಲಭ್ಯವಾಗಿದ್ದಾರೆ.</p><p>ಈಗಾಗಲೇ ಉಳಿದ ಪಂದ್ಯಗಳಿಗಾಗಿ ವೇಗಿ ಅನ್ಶುಲ್ ಕಾಂಬೋಜ್ ಅವರು ತಂಡ ಸೇರಿಕೊಂಡಿದ್ದಾರೆ. ನಿತೀಶ್ ರೆಡ್ಡಿ ಬದಲಿಗೆ ಶಾರ್ದೂಲ್ ಠಾಕೂರ್ ಅವರು ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. </p><p>ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಭಾರತ 1–2ರ ಹಿನ್ನಡೆಯಲ್ಲಿದೆ. ಸರಣಿ ಗೆಲ್ಲುವ ಕನಸು ಜೀವಂತವಾಗಿರಬೇಕಾದರೆ ಮ್ಯಾಂಚೆಸ್ಟರ್ ಟೆಸ್ಟ್ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮ್ಯಾಂಚೆಸ್ಟರ್:</strong> ಭಾರತ ತಂಡದ ಪ್ರಮುಖ ಆಲ್ರೌಂಡರ್ ನಿತೀಶ್ ಕುಮಾರ್ ಅವರು ಭಾನುವಾರ ಅಭ್ಯಾಸ ವೇಳೆ ಮೊಣಕಾಲು ಗಾಯಕ್ಕೆ ತುತ್ತಾಗಿದ್ದು, ನಾಲ್ಕನೇ ಟೆಸ್ಟ್ನಲ್ಲಿ ಕಣಕ್ಕಿಳಿಯುವುದು ಅನುಮಾನವಾಗಿದೆ. </p><p>ಇಂಗ್ಲೆಂಡ್ ವಿರುದ್ಧದ ಸರಣಿಯ ನಾಲ್ಕನೇ ಪಂದ್ಯ ಜುಲೈ 23 ರಿಂದ ಆರಂಭವಾಗಲಿದೆ.</p><p>ಮ್ಯಾಂಚೆಸ್ಟರ್ನಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಒಳಾಂಗಣ ಕ್ರೀಡಾಂಗಣದಲ್ಲಿ ಭಾರತೀಯ ಆಟಗಾರರು ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ನಿತೀಶ್ ರೆಡ್ಡಿ ಅವರು ಗಾಯಕ್ಕೆ ತುತ್ತಾಗಿದ್ದಾರೆ.</p><p>ರೆಡ್ಡಿ ಅವರಿಗೆ ಗಂಭೀರ ಪ್ರಮಾಣದ ಗಾಯವಾಗಿದ್ದು, ನಾಲ್ಕನೇ ಪಂದ್ಯದಲ್ಲಿ ಕಾಣಿಸಿಕೊಳ್ಳುವುದು ಅನುಮಾನವಾಗಿದೆ. ಸರಣಿಯಿಂದಲೇ ಹೊರಬೀಳುವ ಸಾಧ್ಯತೆಯಿದೆ. </p><p>ನಾಲ್ಕನೇ ಟೆಸ್ಟ್ಗೂ ಮುನ್ನ ಭಾರತಕ್ಕೆ ಗಾಯಾಳುಗಳ ಚಿಂತೆ ಆರಂಭವಾಗಿದೆ. ತಂಡದ ಪ್ರಮುಖ ವೇಗದ ಬೌಲರ್ ಆಕಾಶ್ ದೀಪ್ ಅವರು ಬೆನ್ನುನೋವಿನ ಸಮಸ್ಯೆಗೆ ತುತ್ತಾಗಿದ್ದು, ನಾಲ್ಕನೇ ಟೆಸ್ಟ್ನಿಂದ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಆರ್ಶದೀಪ್ ಸಿಂಗ್ ಕೂಡ ಸರಣಿಯ ಉಳಿದ ಪಂದ್ಯಗಳಿಗೆ ಅಲಭ್ಯವಾಗಿದ್ದಾರೆ.</p><p>ಈಗಾಗಲೇ ಉಳಿದ ಪಂದ್ಯಗಳಿಗಾಗಿ ವೇಗಿ ಅನ್ಶುಲ್ ಕಾಂಬೋಜ್ ಅವರು ತಂಡ ಸೇರಿಕೊಂಡಿದ್ದಾರೆ. ನಿತೀಶ್ ರೆಡ್ಡಿ ಬದಲಿಗೆ ಶಾರ್ದೂಲ್ ಠಾಕೂರ್ ಅವರು ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. </p><p>ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಭಾರತ 1–2ರ ಹಿನ್ನಡೆಯಲ್ಲಿದೆ. ಸರಣಿ ಗೆಲ್ಲುವ ಕನಸು ಜೀವಂತವಾಗಿರಬೇಕಾದರೆ ಮ್ಯಾಂಚೆಸ್ಟರ್ ಟೆಸ್ಟ್ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>