<p><strong>ನವದೆಹಲಿ :</strong> ದಕ್ಷಿಣ ಆಫ್ರಿಕಾಕ್ಕೆ ಆಗಸ್ಟ್ನಲ್ಲಿ ಪ್ರವಾಸ ಮಾಡುವ ಕುರಿತು ನಾವಿನ್ನೂ ಯಾವುದೇ ರೀತಿಯ ವಾಗ್ದಾನ ಮಾಡಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ.</p>.<p>‘ಭಾರತ ತಂಡವು ಆಗಸ್ಟ್ನಲ್ಲಿ ಇಲ್ಲಿಗೆ ಬರಲು ಒಪ್ಪಿದೆ’ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾದ ನಿರ್ದೇಶಕ ಗ್ರೆಮ್ ಸ್ಮಿತ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಾಕಸ್ ಫಾಲ್ ಗುರುವಾರ ಹೇಳಿದ್ದರು.</p>.<p>ಈ ಕುರಿತು ಶುಕ್ರವಾರ ಪ್ರತಿಕ್ರಿಯಿಸಿರುವ ಧುಮಾಲ್, ‘ ಈ ಹಿಂದೆ ದಕ್ಷಿಣ ಆಫ್ರಿಕಾ ತಂಡವು ಭಾರತದಲ್ಲಿ ಆಡುವ ಸರಣಿಯು ರದ್ದುಗೊಂಡಾಗ ಚರ್ಚೆ ನಡೆದಿತ್ತು. ಆಗಸ್ಟ್ನಲ್ಲಿ ನಮ್ಮ ತಂಡವು ಪ್ರವಾಸ ಕೈಗೊಳ್ಳುವ ಬಗ್ಗೆ ಸ್ಥಿತಿಗತಿಯನ್ನು ನೋಡಿಕೊಂಡು ಪ್ರಯತ್ನಿಸಲಾಗುವುದೆಂದು ಹೇಳಿದ್ದೆವು. ಆದರೆ ಇದುವರೆಗೆ ನಾವು ಯಾವುದೇ ರೀತಿಯ ತೀರ್ಮಾನ ಕೈಗೊಂಡಿಲ್ಲ’ ಎಂದಿದ್ದಾರೆ.</p>.<p>‘ಸದ್ಯದ ಪರಿಸ್ಥಿತಿಯಲ್ಲಿ ಏನೂ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಜುಲೈನಲ್ಲಿ ಶ್ರೀಲಂಕಾದಲ್ಲಿ ಟಿ20 ಸರಣಿಗಾಗಿ ಪ್ರವಾಸ ಮತ್ತು ಅದರ ನಂತರ ಜಿಂಬಾಬ್ವೆ ಪ್ರವಾಸದ ಬಗ್ಗೆಯೂ ಖಚಿತ ನಿರ್ಧಾರ ಮಾಡಿಲ್ಲ. ಆದರೆ ಆಗಸ್ಟ್ನ ದಕ್ಷಿಣ ಆಫ್ರಿಕಾ ಪ್ರವಾಸ ಬಗ್ಗೆ ಹೇಗೆ ಹೇಳುವುದು’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ :</strong> ದಕ್ಷಿಣ ಆಫ್ರಿಕಾಕ್ಕೆ ಆಗಸ್ಟ್ನಲ್ಲಿ ಪ್ರವಾಸ ಮಾಡುವ ಕುರಿತು ನಾವಿನ್ನೂ ಯಾವುದೇ ರೀತಿಯ ವಾಗ್ದಾನ ಮಾಡಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ.</p>.<p>‘ಭಾರತ ತಂಡವು ಆಗಸ್ಟ್ನಲ್ಲಿ ಇಲ್ಲಿಗೆ ಬರಲು ಒಪ್ಪಿದೆ’ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾದ ನಿರ್ದೇಶಕ ಗ್ರೆಮ್ ಸ್ಮಿತ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಾಕಸ್ ಫಾಲ್ ಗುರುವಾರ ಹೇಳಿದ್ದರು.</p>.<p>ಈ ಕುರಿತು ಶುಕ್ರವಾರ ಪ್ರತಿಕ್ರಿಯಿಸಿರುವ ಧುಮಾಲ್, ‘ ಈ ಹಿಂದೆ ದಕ್ಷಿಣ ಆಫ್ರಿಕಾ ತಂಡವು ಭಾರತದಲ್ಲಿ ಆಡುವ ಸರಣಿಯು ರದ್ದುಗೊಂಡಾಗ ಚರ್ಚೆ ನಡೆದಿತ್ತು. ಆಗಸ್ಟ್ನಲ್ಲಿ ನಮ್ಮ ತಂಡವು ಪ್ರವಾಸ ಕೈಗೊಳ್ಳುವ ಬಗ್ಗೆ ಸ್ಥಿತಿಗತಿಯನ್ನು ನೋಡಿಕೊಂಡು ಪ್ರಯತ್ನಿಸಲಾಗುವುದೆಂದು ಹೇಳಿದ್ದೆವು. ಆದರೆ ಇದುವರೆಗೆ ನಾವು ಯಾವುದೇ ರೀತಿಯ ತೀರ್ಮಾನ ಕೈಗೊಂಡಿಲ್ಲ’ ಎಂದಿದ್ದಾರೆ.</p>.<p>‘ಸದ್ಯದ ಪರಿಸ್ಥಿತಿಯಲ್ಲಿ ಏನೂ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಜುಲೈನಲ್ಲಿ ಶ್ರೀಲಂಕಾದಲ್ಲಿ ಟಿ20 ಸರಣಿಗಾಗಿ ಪ್ರವಾಸ ಮತ್ತು ಅದರ ನಂತರ ಜಿಂಬಾಬ್ವೆ ಪ್ರವಾಸದ ಬಗ್ಗೆಯೂ ಖಚಿತ ನಿರ್ಧಾರ ಮಾಡಿಲ್ಲ. ಆದರೆ ಆಗಸ್ಟ್ನ ದಕ್ಷಿಣ ಆಫ್ರಿಕಾ ಪ್ರವಾಸ ಬಗ್ಗೆ ಹೇಗೆ ಹೇಳುವುದು’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>