’ಆಲೂರು 1,2 ಮತ್ತು 3ನೇ ಮೈದಾನಗಳಲ್ಲಿ ಎಲೀಟ್ ಎ ಗುಂಪಿನ ಪಂದ್ಯಗಳು ನಡೆಯಲಿವೆ. ಕೋವಿಡ್ ತಡೆ ಮಾರ್ಗಸೂಚಿಯ ಪ್ರಕಾರ ಪಂದ್ಯ ವೀಕ್ಷಿಸಲು ಪ್ರೇಕ್ಷಕರು ಮತ್ತು ವರದಿ ಮಾಡಲು ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಮಾರ್ಗಸೂಚಿ ಸಿದ್ಧಪಡಿಸಿದೆ. ಟೂರ್ನಿಯ ಪಂದ್ಯಗಳು ನಡೆಯುತ್ತಿರುವ ಎಲ್ಲ ನಗರಗಳಲ್ಲಿಯೂ ಇದು ಜಾರಿಯಾಗಿದೆ. ಆಯೋಜಕ ಸಂಸ್ಥೆಯ ಆಯ್ದ ಪ್ರತಿನಿಧಿಗಳು, ನಿಯೋಜಿತ ಸಿಬ್ಬಂದಿ, ಆಟಗಾರರು, ತಂಡದ ಸಿಬ್ಬಂದಿ ಮತ್ತು ಮೈದಾನದ ನಿಯೋಜಿತ ಸಿಬ್ಬಂದಿಗೆ ಮಾತ್ರ ಪ್ರವೇಶ ನೀಡಲಾಗುವುದು. ಜೀವ ಸುರಕ್ಷಾ ವಲಯದ ಕಾರಣ ಬಹಳಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ‘ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.