ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿರುವ ದ್ರಾವಿಡ್, ಅನೇಕ ಯುವ ಪ್ರತಿಭಾವಂತ ಆಟಗಾರರನ್ನು ಬೆಳೆಸಲು ಪ್ರಮುಖ ಪಾತ್ರ ವಹಿಸಿದ್ದಾರೆ. ಐಪಿಎಲ್ ಸಂದರ್ಭದಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಮಾತುಕತೆ ನಡೆಸಿ ದ್ರಾವಿಡ್ ಅವರನ್ನು ಮನವೊಲಿಸಿದ್ದಾರೆ ಎಂದು ವರದಿಯಾಗಿದೆ.