<p><strong>ಮುಂಬೈ:</strong> ಕಳಪೆ ಬ್ಯಾಟಿಂಗ್ ಲಯದಿಂದಾಗಿ ತೀವ್ರ ಟೀಕೆಗೆ ಗುರಿಯಾಗಿರುವ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರಿಗೆ ಮುಂಬೈ ರಣಜಿ ತಂಡದ ನಾಯಕ ಅಜಿಂಕ್ಯ ರಹಾನೆ ಬೆಂಬಲ ಸೂಚಿಸಿದ್ದಾರೆ. </p><p>'ರೋಹಿತ್ಗೆ ಏನು ಮಾಡಬೇಕೆಂದು ಯಾರೂ ಹೇಳಬೇಕಾಗಿಲ್ಲ. ಸದ್ಯದಲ್ಲೇ ದೊಡ್ಡ ಮೊತ್ತ ಪೇರಿಸಲಿದ್ದಾರೆ' ಎಂದು ರಹಾನೆ ಪ್ರತಿಕ್ರಿಯಿಸಿದ್ದಾರೆ. </p><p>ಸರಿ ಸುಮಾರು ಒಂದು ದಶಕದ ಬಳಿಕ ರಣಜಿ ಟ್ರೋಫಿ ಕ್ರಿಕೆಟ್ಗೆ ರೋಹಿತ್ ಮರಳಿದ್ದಾರೆ. ಇದರೊಂದಿಗೆ ಎಲ್ಲರ ದೃಷ್ಟಿ 'ಹಿಟ್ಮ್ಯಾನ್' ಮೇಲೆ ನೆಟ್ಟಿದೆ. </p><p>'ನಮಗೆಲ್ಲರಿಗೂ ರೋಹಿತ್ ಬಗ್ಗೆ ಗೊತ್ತಿದೆ. ಅವರ ವ್ಯಕ್ತಿತ್ವದ ಬಗ್ಗೆಯೂ ತಿಳಿದಿದೆ. ಮುಂಬೈ ಡ್ರೆಸ್ಸಿಂಗ್ ರೂಮ್ಗೆ ರೋಹಿತ್ ಮರಳಿರುವುದು ನಮಗೆಲ್ಲರಿಗೂ ಸಂತಸ ತಂದಿದೆ' ಎಂದು ಅವರು ಹೇಳಿದ್ದಾರೆ. </p><p>'ರೋಹಿತ್ ಯಾವಾಗಲೂ ರಿಲ್ಯಾಕ್ಸ್ ಆಗಿರುತ್ತಾರೆ. ಅಂತರರಾಷ್ಟ್ರೀಯ ದರ್ಜೆಯ ಕ್ರಿಕೆಟ್ನಲ್ಲೂ ಅದೇ ವ್ಯಕ್ತಿತ್ವವನ್ನು ಕಾಪಾಡಿಕೊಂಡಿದ್ದಾರೆ. ಅವರ ಆಟದ ಬಗ್ಗೆಯೂ ನಮಗೆಲ್ಲರಿಗೂ ಗೊತ್ತಿದೆ. ಹಾಗಾಗಿ ಅವರೇನು ಮಾಡಬೇಕೆಂದು ಯಾರೂ ಹೇಳಬೇಕಿಲ್ಲ' ಎಂದು ಹೇಳಿದ್ದಾರೆ. </p><p>'ರೋಹಿತ್ ಶೀಘ್ರದಲ್ಲೇ ಲಯಕ್ಕೆ ಮರಳುವ ನಂಬಿಕೆ ನಮಗಿದೆ. ಅವರು ಯಾವತ್ತೂ ಬದಲಾಗಿಲ್ಲ. ಅದುವೇ ಒಳ್ಳೆಯ ವಿಷಯ' ಎಂದು 37 ವರ್ಷದ ರೋಹಿತ್ ಬಗ್ಗೆ ರಹಾನೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>'ಪ್ರತಿಯೊಬ್ಬ ಆಟಗಾರನೂ ತನ್ನ ವೃತ್ತಿ ಜೀವನದಲ್ಲಿ ಏರಿಳಿತಗಳನ್ನು ಕಾಣುತ್ತಾನೆ. ಅಭ್ಯಾಸದ ಅವಧಿಯಲ್ಲಿ ರೋಹಿತ್ ಉತ್ತಮವಾಗಿ ಕಾಣಿಸಿಕೊಂಡಿದ್ದಾರೆ' ಎಂದು ರಹಾನೆ ತಿಳಿಸಿದ್ದಾರೆ. </p><p>ಮುಂಬೈ ತಂಡದ ಜಮ್ಮು ಮತ್ತು ಕಾಶ್ಮೀರದ ವಿರುದ್ಧದ ರಣಜಿ ಪಂದ್ಯವು ಭಾನುವಾರ (ಜ.23) ಆರಂಭವಾಗಲಿದೆ. </p>.ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ನಾಳೆ: ಶಮಿ ನಿರ್ವಹಣೆಯ ಮೇಲೆ ಗಮನ.ಚಾಂಪಿಯನ್ಸ್ ಟ್ರೋಫಿಗೆ ಕೈಬಿಟ್ಟಿದ್ದರಿಂದ ಬೇಸರವಿಲ್ಲ: ಸೂರ್ಯ ಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕಳಪೆ ಬ್ಯಾಟಿಂಗ್ ಲಯದಿಂದಾಗಿ ತೀವ್ರ ಟೀಕೆಗೆ ಗುರಿಯಾಗಿರುವ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರಿಗೆ ಮುಂಬೈ ರಣಜಿ ತಂಡದ ನಾಯಕ ಅಜಿಂಕ್ಯ ರಹಾನೆ ಬೆಂಬಲ ಸೂಚಿಸಿದ್ದಾರೆ. </p><p>'ರೋಹಿತ್ಗೆ ಏನು ಮಾಡಬೇಕೆಂದು ಯಾರೂ ಹೇಳಬೇಕಾಗಿಲ್ಲ. ಸದ್ಯದಲ್ಲೇ ದೊಡ್ಡ ಮೊತ್ತ ಪೇರಿಸಲಿದ್ದಾರೆ' ಎಂದು ರಹಾನೆ ಪ್ರತಿಕ್ರಿಯಿಸಿದ್ದಾರೆ. </p><p>ಸರಿ ಸುಮಾರು ಒಂದು ದಶಕದ ಬಳಿಕ ರಣಜಿ ಟ್ರೋಫಿ ಕ್ರಿಕೆಟ್ಗೆ ರೋಹಿತ್ ಮರಳಿದ್ದಾರೆ. ಇದರೊಂದಿಗೆ ಎಲ್ಲರ ದೃಷ್ಟಿ 'ಹಿಟ್ಮ್ಯಾನ್' ಮೇಲೆ ನೆಟ್ಟಿದೆ. </p><p>'ನಮಗೆಲ್ಲರಿಗೂ ರೋಹಿತ್ ಬಗ್ಗೆ ಗೊತ್ತಿದೆ. ಅವರ ವ್ಯಕ್ತಿತ್ವದ ಬಗ್ಗೆಯೂ ತಿಳಿದಿದೆ. ಮುಂಬೈ ಡ್ರೆಸ್ಸಿಂಗ್ ರೂಮ್ಗೆ ರೋಹಿತ್ ಮರಳಿರುವುದು ನಮಗೆಲ್ಲರಿಗೂ ಸಂತಸ ತಂದಿದೆ' ಎಂದು ಅವರು ಹೇಳಿದ್ದಾರೆ. </p><p>'ರೋಹಿತ್ ಯಾವಾಗಲೂ ರಿಲ್ಯಾಕ್ಸ್ ಆಗಿರುತ್ತಾರೆ. ಅಂತರರಾಷ್ಟ್ರೀಯ ದರ್ಜೆಯ ಕ್ರಿಕೆಟ್ನಲ್ಲೂ ಅದೇ ವ್ಯಕ್ತಿತ್ವವನ್ನು ಕಾಪಾಡಿಕೊಂಡಿದ್ದಾರೆ. ಅವರ ಆಟದ ಬಗ್ಗೆಯೂ ನಮಗೆಲ್ಲರಿಗೂ ಗೊತ್ತಿದೆ. ಹಾಗಾಗಿ ಅವರೇನು ಮಾಡಬೇಕೆಂದು ಯಾರೂ ಹೇಳಬೇಕಿಲ್ಲ' ಎಂದು ಹೇಳಿದ್ದಾರೆ. </p><p>'ರೋಹಿತ್ ಶೀಘ್ರದಲ್ಲೇ ಲಯಕ್ಕೆ ಮರಳುವ ನಂಬಿಕೆ ನಮಗಿದೆ. ಅವರು ಯಾವತ್ತೂ ಬದಲಾಗಿಲ್ಲ. ಅದುವೇ ಒಳ್ಳೆಯ ವಿಷಯ' ಎಂದು 37 ವರ್ಷದ ರೋಹಿತ್ ಬಗ್ಗೆ ರಹಾನೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p><p>'ಪ್ರತಿಯೊಬ್ಬ ಆಟಗಾರನೂ ತನ್ನ ವೃತ್ತಿ ಜೀವನದಲ್ಲಿ ಏರಿಳಿತಗಳನ್ನು ಕಾಣುತ್ತಾನೆ. ಅಭ್ಯಾಸದ ಅವಧಿಯಲ್ಲಿ ರೋಹಿತ್ ಉತ್ತಮವಾಗಿ ಕಾಣಿಸಿಕೊಂಡಿದ್ದಾರೆ' ಎಂದು ರಹಾನೆ ತಿಳಿಸಿದ್ದಾರೆ. </p><p>ಮುಂಬೈ ತಂಡದ ಜಮ್ಮು ಮತ್ತು ಕಾಶ್ಮೀರದ ವಿರುದ್ಧದ ರಣಜಿ ಪಂದ್ಯವು ಭಾನುವಾರ (ಜ.23) ಆರಂಭವಾಗಲಿದೆ. </p>.ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ನಾಳೆ: ಶಮಿ ನಿರ್ವಹಣೆಯ ಮೇಲೆ ಗಮನ.ಚಾಂಪಿಯನ್ಸ್ ಟ್ರೋಫಿಗೆ ಕೈಬಿಟ್ಟಿದ್ದರಿಂದ ಬೇಸರವಿಲ್ಲ: ಸೂರ್ಯ ಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>