<p><strong>ಬೆಂಗಳೂರು: </strong>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡಕ್ಕೆ ಇಂದು ಸಂಜೆ 5ರಿಂದ 6ರ ವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3ರಿಂದ ರಾತ್ರಿ 8ರ ವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.</p><p>ವಿಧಾನಸೌಧ ಬಳಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಟಗಾರರು ಬಸ್ನಲ್ಲಿ ತೆರಳಲಿದ್ದಾರೆ. ಭದ್ರತಾ ದೃಷ್ಟಿಯಿಂದ ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ, ಸೀಮಿತ ಪಾರ್ಕಿಂಗ್ ವ್ಯವಸ್ಥೆ ಇರುವುದರಿಂದ ಸಾರ್ವಜನಿಕರು ಮೆಟ್ರೊ ಇತರೆ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚನೆ ನೀಡಿದ್ದಾರೆ.</p><p>ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪಾಸ್ ಹಾಗೂ ಟಿಕೆಟ್ ಹೊಂದಿದ್ದವರಿಗೆ ಮಾತ್ರ ಅವಕಾಶ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಅಧಿಕೃತ ಟಿಕೇಟ್, ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶ</strong></p><p>ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ತೆರಳಲು ಅಧಿಕೃತ ಟಿಕೇಟ್, ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶವಿರುತ್ತದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ಹೊರಡಿಸಿದೆ.</p><p>‘ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೇಟ್ ತಂಡವು 2025 ನೇ ಸಾಲಿನ ಐ.ಪಿ.ಎಲ್ ಟ್ರೋಫಿಯನ್ನು ಜಯಗಳಿಸಿ, ಟೊಫಿಯೊಂದಿಗೆ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಕೆ.ಎಸ್.ಸಿ.ಎ. ವತಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ದಿನ ಸಂಜೆ 05-00 ಗಂಟೆಗೆ ಆರ್.ಸಿ.ಬಿ ತಂಡದ ಎಲ್ಲಾ ಆಟಗಾರರಿಗೆ ವಿಶೇಷ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿರುತ್ತದೆ. ಈ ಸಮಾರಂಭಕ್ಕೆ ಅಧಿಕೃತ ಟಿಕೇಟ್ ಮತ್ತು ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶವನ್ನು ಕಲ್ಪಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಿಯಮಿತ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಇರುವುದರಿಂದ ಸಮಾರಂಭಕ್ಕೆ ಆಗಮಿಸುವವರು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋವನ್ನು ಬಳಸಬಹುದಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡಕ್ಕೆ ಇಂದು ಸಂಜೆ 5ರಿಂದ 6ರ ವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3ರಿಂದ ರಾತ್ರಿ 8ರ ವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.</p><p>ವಿಧಾನಸೌಧ ಬಳಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಟಗಾರರು ಬಸ್ನಲ್ಲಿ ತೆರಳಲಿದ್ದಾರೆ. ಭದ್ರತಾ ದೃಷ್ಟಿಯಿಂದ ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ, ಸೀಮಿತ ಪಾರ್ಕಿಂಗ್ ವ್ಯವಸ್ಥೆ ಇರುವುದರಿಂದ ಸಾರ್ವಜನಿಕರು ಮೆಟ್ರೊ ಇತರೆ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚನೆ ನೀಡಿದ್ದಾರೆ.</p><p>ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪಾಸ್ ಹಾಗೂ ಟಿಕೆಟ್ ಹೊಂದಿದ್ದವರಿಗೆ ಮಾತ್ರ ಅವಕಾಶ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಅಧಿಕೃತ ಟಿಕೇಟ್, ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶ</strong></p><p>ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ತೆರಳಲು ಅಧಿಕೃತ ಟಿಕೇಟ್, ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶವಿರುತ್ತದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ಹೊರಡಿಸಿದೆ.</p><p>‘ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೇಟ್ ತಂಡವು 2025 ನೇ ಸಾಲಿನ ಐ.ಪಿ.ಎಲ್ ಟ್ರೋಫಿಯನ್ನು ಜಯಗಳಿಸಿ, ಟೊಫಿಯೊಂದಿಗೆ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಕೆ.ಎಸ್.ಸಿ.ಎ. ವತಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ದಿನ ಸಂಜೆ 05-00 ಗಂಟೆಗೆ ಆರ್.ಸಿ.ಬಿ ತಂಡದ ಎಲ್ಲಾ ಆಟಗಾರರಿಗೆ ವಿಶೇಷ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿರುತ್ತದೆ. ಈ ಸಮಾರಂಭಕ್ಕೆ ಅಧಿಕೃತ ಟಿಕೇಟ್ ಮತ್ತು ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶವನ್ನು ಕಲ್ಪಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಿಯಮಿತ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಇರುವುದರಿಂದ ಸಮಾರಂಭಕ್ಕೆ ಆಗಮಿಸುವವರು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋವನ್ನು ಬಳಸಬಹುದಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>