ಮುಂಬೈ:ಐಪಿಎಲ್–2020 ಟೂರ್ನಿ ಮುಂದೂಡಿಕೆ ನಂತರ ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ಬೇರೆ ಆಯ್ಕೆಗಳೇ ಇಲ್ಲ ಎಂದು ಹೇಳಿದ್ದಾರೆ. ಈ ಬಾರಿಯ ಟೂರ್ನಿಯು ಇದೇ ತಿಂಗಳು 29ರಿಂದ ಆರಂಭವಾಗಬೇಕಿತ್ತು. ಆದರೆ, ಕೋವಿಡ್–19 ವೈರಸ್ ಭೀತಿಯಿಂದಾಗಿ ಏಪ್ರಿಲ್ 15ರ ವರೆಗೆ ಮುಂದೂಡಲಾಗಿದೆ.