<p><strong>ನವದೆಹಲಿ:</strong> ‘ನಾನು ಹಾರ್ದಿಕ್ ಪಾಂಡ್ಯ ಅವರಿಗೆ ಪ್ರತಿಸ್ಪರ್ಧಿ ಅಲ್ಲ. ನಾವಿಬ್ಬರೂ ಸೇರಿ ಭಾರತಕ್ಕೆ ಪಂದ್ಯಗಳನ್ನು ಗೆದ್ದುಕೊಡುತ್ತೇವೆ’ ಎಂದು ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ವಿಜಯಶಂಕರ್ ಹೇಳಿದರು.</p>.<p>ಇದೇ 30ರಿಂದ ಇಂಗ್ಲೆಂಡ್ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಭಾರತ ತಂಡದಲ್ಲಿ ತಮಿಳುನಾಡಿನ ವಿಜಯಶಂಕರ್ ಸ್ಥಾನ ಪಡೆದಿದ್ದಾರೆ.</p>.<p>ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಅವರು,‘ಹಾರ್ದಿಕ್ ಉತ್ತಮ ಆಟಗಾರ. ನಾವೆಲ್ಲರೂ ಆಲ್ರೌಂಡರ್ಗಳು. ಆದರೆ ಪ್ರತಿಯೊಬ್ಬರೂ ವಿಭಿನ್ನ ಶೈಲಿ ಮತ್ತು ಸಾಮರ್ಥ್ಯಗಳನ್ನು ಹೊಂದಿದ್ದೇವೆ. ತಂಡದ ಗೆಲುವಿಗೆ ಮಹತ್ವದ ಕಾಣಿಕೆ ನೀಡುವುದು ನಮ್ಮ ಗುರಿ’ ಎಂದರು.</p>.<p>‘ಅವಕಾಶ ಸಿಕ್ಕರೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತೇನೆ. ತಂಡಕ್ಕೆ ಅಗತ್ಯವಿರುವುದನ್ನು ನೀಡುವುದು ನನ್ನ ಕರ್ತವ್ಯ. ಆಡಳಿತದ ಸೂಚನೆಯಂತೆ ನಡೆದುಕೊಳ್ಳುತ್ತೇನೆ’ ಎಂದು ಹೇಳಿದರು.</p>.<p>‘ಚೆನ್ನೈನಲ್ಲಿ ಅಭ್ಯಾಸ ನಡೆಸುತ್ತಿದ್ದೇನೆ. ಐಪಿಎಲ್ನಲ್ಲಿ ಆಡುವಾಗ ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದೆ. ಅಲ್ಲಿ ಹಿರಿಯ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ಉತ್ತಮ ಮಾರ್ಗದರ್ಶನ ನೀಡಿದರು’ ಎಂದರು.</p>.<p>‘ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದ್ದೇನೆ. ಆದರೆ ಆಲ್ಲಿ ಬೌಲಿಂಗ್ ಅಭ್ಯಾಸ ಮಾಡುವುದಿಲ್ಲ. ಹೊರಾಂಗಣದಲ್ಲಿ ಸಂಪೂರ್ಣ ರನ್ ಅಪ್ ತೆಗೆದುಕೊಂಡು ಬೌಲಿಂಗ್ ಮಾಡುತ್ತೇನೆ. ಪ್ರತಿ ಗಂಟೆಗೆ 120 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುತ್ತೇನೆ’ ಎಂದು ಹೇಳಿದರು.</p>.<p>ಎಂಬಿಎ ವಿದ್ಯಾರ್ಥಿಯಾಗಿರುವ ಅವರು, ‘ಓದಲು ಸಮಯ ಸಿಗುತ್ತಿಲ್ಲ. ಕ್ರಿಕೆಟ್ನಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದೇನೆ. ಆದರೆ, ಎಂಬಿಎ ಮುಗಿಸಲು ಹಂಬಲ ಇದೆ. ಟೂರ್ನಿಯ ನಂತರ ಅತ್ತ ಗಮನ ಹರಿಸುವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ನಾನು ಹಾರ್ದಿಕ್ ಪಾಂಡ್ಯ ಅವರಿಗೆ ಪ್ರತಿಸ್ಪರ್ಧಿ ಅಲ್ಲ. ನಾವಿಬ್ಬರೂ ಸೇರಿ ಭಾರತಕ್ಕೆ ಪಂದ್ಯಗಳನ್ನು ಗೆದ್ದುಕೊಡುತ್ತೇವೆ’ ಎಂದು ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ವಿಜಯಶಂಕರ್ ಹೇಳಿದರು.</p>.<p>ಇದೇ 30ರಿಂದ ಇಂಗ್ಲೆಂಡ್ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಭಾರತ ತಂಡದಲ್ಲಿ ತಮಿಳುನಾಡಿನ ವಿಜಯಶಂಕರ್ ಸ್ಥಾನ ಪಡೆದಿದ್ದಾರೆ.</p>.<p>ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಅವರು,‘ಹಾರ್ದಿಕ್ ಉತ್ತಮ ಆಟಗಾರ. ನಾವೆಲ್ಲರೂ ಆಲ್ರೌಂಡರ್ಗಳು. ಆದರೆ ಪ್ರತಿಯೊಬ್ಬರೂ ವಿಭಿನ್ನ ಶೈಲಿ ಮತ್ತು ಸಾಮರ್ಥ್ಯಗಳನ್ನು ಹೊಂದಿದ್ದೇವೆ. ತಂಡದ ಗೆಲುವಿಗೆ ಮಹತ್ವದ ಕಾಣಿಕೆ ನೀಡುವುದು ನಮ್ಮ ಗುರಿ’ ಎಂದರು.</p>.<p>‘ಅವಕಾಶ ಸಿಕ್ಕರೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತೇನೆ. ತಂಡಕ್ಕೆ ಅಗತ್ಯವಿರುವುದನ್ನು ನೀಡುವುದು ನನ್ನ ಕರ್ತವ್ಯ. ಆಡಳಿತದ ಸೂಚನೆಯಂತೆ ನಡೆದುಕೊಳ್ಳುತ್ತೇನೆ’ ಎಂದು ಹೇಳಿದರು.</p>.<p>‘ಚೆನ್ನೈನಲ್ಲಿ ಅಭ್ಯಾಸ ನಡೆಸುತ್ತಿದ್ದೇನೆ. ಐಪಿಎಲ್ನಲ್ಲಿ ಆಡುವಾಗ ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದೆ. ಅಲ್ಲಿ ಹಿರಿಯ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ಉತ್ತಮ ಮಾರ್ಗದರ್ಶನ ನೀಡಿದರು’ ಎಂದರು.</p>.<p>‘ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದ್ದೇನೆ. ಆದರೆ ಆಲ್ಲಿ ಬೌಲಿಂಗ್ ಅಭ್ಯಾಸ ಮಾಡುವುದಿಲ್ಲ. ಹೊರಾಂಗಣದಲ್ಲಿ ಸಂಪೂರ್ಣ ರನ್ ಅಪ್ ತೆಗೆದುಕೊಂಡು ಬೌಲಿಂಗ್ ಮಾಡುತ್ತೇನೆ. ಪ್ರತಿ ಗಂಟೆಗೆ 120 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುತ್ತೇನೆ’ ಎಂದು ಹೇಳಿದರು.</p>.<p>ಎಂಬಿಎ ವಿದ್ಯಾರ್ಥಿಯಾಗಿರುವ ಅವರು, ‘ಓದಲು ಸಮಯ ಸಿಗುತ್ತಿಲ್ಲ. ಕ್ರಿಕೆಟ್ನಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದೇನೆ. ಆದರೆ, ಎಂಬಿಎ ಮುಗಿಸಲು ಹಂಬಲ ಇದೆ. ಟೂರ್ನಿಯ ನಂತರ ಅತ್ತ ಗಮನ ಹರಿಸುವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>