ಈಚೆಗೆ ನಡೆದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಉಭಯ ತಂಡಗಳೂ ನಾಲ್ಕರ ಘಟ್ಟದಲ್ಲಿ ಸೋತಿದ್ದವು. ಈ ಟಿ20 ಸರಣಿಯಲ್ಲಿ ಭಾರತ ತಂಡಕ್ಕೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕರಾಗಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಬಹುತೇಕ ಎಲ್ಲ ಅನುಭವಿ ಆಟಗಾರರು ವಿಶ್ರಾಂತಿ ಪಡೆದಿದ್ದಾರೆ. ಯುವ ಆಟಗಾರರ ಪಡೆಯು ಕಣಕ್ಕಿಳಿಯಲು ಸಿದ್ಧವಾಗಿದೆ.