<p>ಕೋಲ್ಕತ್ತ: ಭಾರತ ಏಕದಿನ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾರಿಂದ ದಿಢೀರನೆ ಶುಭಮನ್ ಗಿಲ್ ಅವರಿಗೆ ಹಸ್ತಾಂತರಿಸಲಾಗಿದೆ. ಈ ನಿರ್ಧಾರದ ಕುರಿತು ಅನೇಕ ಮಾಜಿ ಆಟಗಾರರು, ಕ್ರಿಕೆಟ್ ಪಂಡಿತರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ನಡುವೆ ಮಾಜಿ ನಾಯಕ ಸೌರವ್ ಗಂಗೂಲಿ ಆಯ್ಕೆ ಸಮಿತಿ ನಿರ್ಧಾರ ನ್ಯಾಯಯುತವಾಗಿದೆ ಎಂದು ಹೇಳಿದ್ದಾರೆ.</p><p>ಚಾಂಪಿಯನ್ಸ್ ಟ್ರೋಫಿ ಮತ್ತು ಟಿ20 ವಿಶ್ವಕಪ್ ವಿಜೇತ ನಾಯಕನಾಗಿರುವ ರೋಹಿತ್ ಶರ್ಮಾ ಅವರ ಜೊತೆಗೆ ಚರ್ಚಿಸಿಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗಂಗೂಲಿ ಹೇಳಿದ್ದಾರೆ.</p><p>ನಾಯಕತ್ವ ಬದಲಾವಣೆಯ ಕುರಿತು ಪ್ರತಿಕ್ರಿಯೆ ನೀಡಿರುವ ಗಂಗೂಲಿ, 'ರೋಹಿತ್ ಅವರೊಂದಿಗೆ ಸಮಾಲೋಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಎಂದು ನಾನು ಭಾವಿಸುತ್ತೇನೆ, ಒಳಗೆ ಏನು ನಡೆದಿದೆ ಎಂಬುದು ನನಗೆ ಸ್ಪಷ್ಟವಾಗಿ ತಿಳಿದಿಲ್ಲ' ಎಂದು ಅನ್ನಪೂರ್ಣ ಸ್ನ್ಯಾಕ್ಸ್ನ ರಾಷ್ಟ್ರೀಯ ಬ್ರಾಂಡ್ ರಾಯಭಾರಿಯಾಗಿ ನೇಮಕಗೊಂಡ ಬಳಿಕ ಅವರು ತಿಳಿಸಿದರು.</p><p>'ಎಲ್ಲೋ ಒಂದು ಹಂತದಲ್ಲಿ ಇದು ನ್ಯಾಯಯುತ ಆಯ್ಕೆ ಎಂದು ನಾನು ಭಾವಿಸುತ್ತೇನೆ. ರೋಹಿತ್ ಆಟವಾಡುವುದನ್ನು ಮುಂದುವರಿಸಬಹುದು ಮತ್ತು ಅವರು ತಂಡದಲ್ಲಿ ಇರುವಾಗಲೇ ಹೊಸ ನಾಯಕನನ್ನು ಸಿದ್ಧಪಡಿಸಬಹುದು. ಹಾಗಾಗಿ ಈ ಬದಲಾವಣೆಯಿಂದ ನನಗೆ ಯಾವುದೇ ಸಮಸ್ಯೆ ಕಾಣುತ್ತಿಲ್ಲ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲ್ಕತ್ತ: ಭಾರತ ಏಕದಿನ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾರಿಂದ ದಿಢೀರನೆ ಶುಭಮನ್ ಗಿಲ್ ಅವರಿಗೆ ಹಸ್ತಾಂತರಿಸಲಾಗಿದೆ. ಈ ನಿರ್ಧಾರದ ಕುರಿತು ಅನೇಕ ಮಾಜಿ ಆಟಗಾರರು, ಕ್ರಿಕೆಟ್ ಪಂಡಿತರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ನಡುವೆ ಮಾಜಿ ನಾಯಕ ಸೌರವ್ ಗಂಗೂಲಿ ಆಯ್ಕೆ ಸಮಿತಿ ನಿರ್ಧಾರ ನ್ಯಾಯಯುತವಾಗಿದೆ ಎಂದು ಹೇಳಿದ್ದಾರೆ.</p><p>ಚಾಂಪಿಯನ್ಸ್ ಟ್ರೋಫಿ ಮತ್ತು ಟಿ20 ವಿಶ್ವಕಪ್ ವಿಜೇತ ನಾಯಕನಾಗಿರುವ ರೋಹಿತ್ ಶರ್ಮಾ ಅವರ ಜೊತೆಗೆ ಚರ್ಚಿಸಿಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗಂಗೂಲಿ ಹೇಳಿದ್ದಾರೆ.</p><p>ನಾಯಕತ್ವ ಬದಲಾವಣೆಯ ಕುರಿತು ಪ್ರತಿಕ್ರಿಯೆ ನೀಡಿರುವ ಗಂಗೂಲಿ, 'ರೋಹಿತ್ ಅವರೊಂದಿಗೆ ಸಮಾಲೋಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಎಂದು ನಾನು ಭಾವಿಸುತ್ತೇನೆ, ಒಳಗೆ ಏನು ನಡೆದಿದೆ ಎಂಬುದು ನನಗೆ ಸ್ಪಷ್ಟವಾಗಿ ತಿಳಿದಿಲ್ಲ' ಎಂದು ಅನ್ನಪೂರ್ಣ ಸ್ನ್ಯಾಕ್ಸ್ನ ರಾಷ್ಟ್ರೀಯ ಬ್ರಾಂಡ್ ರಾಯಭಾರಿಯಾಗಿ ನೇಮಕಗೊಂಡ ಬಳಿಕ ಅವರು ತಿಳಿಸಿದರು.</p><p>'ಎಲ್ಲೋ ಒಂದು ಹಂತದಲ್ಲಿ ಇದು ನ್ಯಾಯಯುತ ಆಯ್ಕೆ ಎಂದು ನಾನು ಭಾವಿಸುತ್ತೇನೆ. ರೋಹಿತ್ ಆಟವಾಡುವುದನ್ನು ಮುಂದುವರಿಸಬಹುದು ಮತ್ತು ಅವರು ತಂಡದಲ್ಲಿ ಇರುವಾಗಲೇ ಹೊಸ ನಾಯಕನನ್ನು ಸಿದ್ಧಪಡಿಸಬಹುದು. ಹಾಗಾಗಿ ಈ ಬದಲಾವಣೆಯಿಂದ ನನಗೆ ಯಾವುದೇ ಸಮಸ್ಯೆ ಕಾಣುತ್ತಿಲ್ಲ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>