<p><strong>ನವದೆಹಲಿ:</strong>ಹಿತಾಸಕ್ತಿ ಸಂಘರ್ಷ ಆರೋಪಕ್ಕೆ ಗುರಿಯಾಗಿರುವ ಸೌರವ್ ಗಂಗೂಲಿ ವಿರುದ್ಧ ತಕ್ಷಣಕ್ಕೆ ಯಾವುದೇ ಕ್ರಮ ಕೈಗೊಳ್ಳದಿರಲುಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಒಂಬುಡ್ಸ್ಮನ್ ನಿರ್ಧರಿಸಿದೆ.</p>.<p>ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷರಾಗಿರುವ ಗಂಗೂಲಿ, ಐಪಿಎಲ್ನಲ್ಲಿ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರಾಗಿಯೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಹಿತಾಸಕ್ತಿ ಸಂಘರ್ಷಕ್ಕೆ ಒಳಗಾಗಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋಲ್ಕತ್ತದ ರಂಜೀತ್ ಸೀಲ್, ಅಭಿಜಿತ್ ಮುಖರ್ಜಿ ಮತ್ತು ಭಾಸ್ವತಿ ಶಾಂತುವ ಅವರು ನಿವೃತ್ತ ನ್ಯಾಯಮೂರ್ತಿ ಜೈನ್ ಅವರಿಗೆ ಪ್ರತ್ಯೇಕವಾಗಿ ದೂರು ನೀಡಿದ್ದರು. ಈ ಸಂಬಂಧ ಒಂಬುಡ್ಸ್ಮನ್, ಗಂಗೂಲಿ ಅವರಿಂದ ಸ್ಪಷ್ಟನೆ ಕೇಳಿತ್ತು. ಇದಕ್ಕೆ ಪತ್ರ ಮುಖೇನ ಅವರು ಸ್ಪಷ್ಟನೆಯನ್ನು ನೀಡಿದ್ದರು.</p>.<p>ಈ ವಿಚಾರಕ್ಕೆ ಸಂಬಂಧಿಸಿದಂತೆ, ಬಿಸಿಸಿಐ ಒಂಬುಡ್ಸುಮನ್ ಡಿ.ಕೆ.ಜೈನ್ ಅವರು ಖುದ್ದು ಗಂಗೂಲಿಯ ವಿಚಾರಣೆ ನಡೆಸಿದ ಬಳಿಕವೇ ಕ್ರಮ ಕೈಗೊಳ್ಳುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.</p>.<p>‘ಡೆಲ್ಲಿ ಕ್ಯಾಪಿಟಲ್ಸ್ ಸಲಹೆಗಾರರಾಗಿ ಗಂಗೂಲಿ ಮುಂದುವರಿಯಲಿದ್ದಾರೆ. ಒಂಬುಡ್ಸ್ಮನ್ನಲ್ಲಿ ಇನ್ನಷ್ಟೇ ಈ ವಿಚಾರ ಇತ್ಯರ್ಥವಾಗಬೇಕಿದೆ. ಈ ಕಾರಣದಿಂದ ಈಗಿರುವ ಹುದ್ದೆಯನ್ನು ತಡೆಯಲು ಯಾವುದೇ ಕಾನೂನಿನಿಂದಲೂ ಸಾಧ್ಯವಿಲ್ಲ’ ಎಂದು ಬಿಸಿಸಿಐನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಹಿತಾಸಕ್ತಿ ಸಂಘರ್ಷ ಆರೋಪಕ್ಕೆ ಗುರಿಯಾಗಿರುವ ಸೌರವ್ ಗಂಗೂಲಿ ವಿರುದ್ಧ ತಕ್ಷಣಕ್ಕೆ ಯಾವುದೇ ಕ್ರಮ ಕೈಗೊಳ್ಳದಿರಲುಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಒಂಬುಡ್ಸ್ಮನ್ ನಿರ್ಧರಿಸಿದೆ.</p>.<p>ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷರಾಗಿರುವ ಗಂಗೂಲಿ, ಐಪಿಎಲ್ನಲ್ಲಿ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರಾಗಿಯೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಹಿತಾಸಕ್ತಿ ಸಂಘರ್ಷಕ್ಕೆ ಒಳಗಾಗಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋಲ್ಕತ್ತದ ರಂಜೀತ್ ಸೀಲ್, ಅಭಿಜಿತ್ ಮುಖರ್ಜಿ ಮತ್ತು ಭಾಸ್ವತಿ ಶಾಂತುವ ಅವರು ನಿವೃತ್ತ ನ್ಯಾಯಮೂರ್ತಿ ಜೈನ್ ಅವರಿಗೆ ಪ್ರತ್ಯೇಕವಾಗಿ ದೂರು ನೀಡಿದ್ದರು. ಈ ಸಂಬಂಧ ಒಂಬುಡ್ಸ್ಮನ್, ಗಂಗೂಲಿ ಅವರಿಂದ ಸ್ಪಷ್ಟನೆ ಕೇಳಿತ್ತು. ಇದಕ್ಕೆ ಪತ್ರ ಮುಖೇನ ಅವರು ಸ್ಪಷ್ಟನೆಯನ್ನು ನೀಡಿದ್ದರು.</p>.<p>ಈ ವಿಚಾರಕ್ಕೆ ಸಂಬಂಧಿಸಿದಂತೆ, ಬಿಸಿಸಿಐ ಒಂಬುಡ್ಸುಮನ್ ಡಿ.ಕೆ.ಜೈನ್ ಅವರು ಖುದ್ದು ಗಂಗೂಲಿಯ ವಿಚಾರಣೆ ನಡೆಸಿದ ಬಳಿಕವೇ ಕ್ರಮ ಕೈಗೊಳ್ಳುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.</p>.<p>‘ಡೆಲ್ಲಿ ಕ್ಯಾಪಿಟಲ್ಸ್ ಸಲಹೆಗಾರರಾಗಿ ಗಂಗೂಲಿ ಮುಂದುವರಿಯಲಿದ್ದಾರೆ. ಒಂಬುಡ್ಸ್ಮನ್ನಲ್ಲಿ ಇನ್ನಷ್ಟೇ ಈ ವಿಚಾರ ಇತ್ಯರ್ಥವಾಗಬೇಕಿದೆ. ಈ ಕಾರಣದಿಂದ ಈಗಿರುವ ಹುದ್ದೆಯನ್ನು ತಡೆಯಲು ಯಾವುದೇ ಕಾನೂನಿನಿಂದಲೂ ಸಾಧ್ಯವಿಲ್ಲ’ ಎಂದು ಬಿಸಿಸಿಐನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>