<p><strong>ಬೆಂಗಳೂರು: ‘</strong>ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ನನ್ನ ಆಟವು ಹತಾಶೆ ಮೂಡಿಸಿದ್ದು ನಿಜ. ಆದರೆ, ಒಳ್ಳೆಯ ಆರಂಭವನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸುವ ದೃಢಸಂಕಲ್ಪವನ್ನು ಆ ಸರಣಿಯು ನನ್ನಲ್ಲಿ ಮೂಡಿಸಿದೆ’ ಎಂದು ಭಾರತ ಟೆಸ್ಟ್ ಕ್ರಿಕೆಟ್ ತಂಡದ ಬ್ಯಾಟರ್ ಕರುಣ್ ನಾಯರ್ ಹೇಳಿದ್ದಾರೆ.</p>.<p>‘ಇಂಗ್ಲೆಂಡ್ ಎದುರಿನ ಸರಣಿಯುದ್ದಕ್ಕೂ ಉತ್ತಮವಾಗಿಯೇ ಇನಿಂಗ್ಸ್ ಆರಂಭಿಸಿದ್ದೆ. ಆದರೆ, ಅವುಗಳನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸುವಲ್ಲಿ ಎಡವಿದೆ. 30–40ರನ್ಗಳ ಆಸುಪಾಸಿನಲ್ಲಿ ವಿಕೆಟ್ ಕಳೆದುಕೊಂಡಾಗ ಹತಾಶೆಗೊಳಗಾಗುತ್ತಿದ್ದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಲವರೊಂದಿಗೆ ಚರ್ಚಿಸಿದ್ದೇನೆ. ಮುಂದೆ ದೊರೆಯುವ ಅವಕಾಶಗಳಲ್ಲಿ ನನಗೆ ಅದು ನೆರವಾಗಲಿದೆ’ ಎಂದು ಕರುಣ್ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<p>ಮುಂಬರುವ ಸರಣಿಗಳಿಗೆ ತಂಡಕ್ಕೆ ಆಯ್ಕೆಯಾಗುವ ಬಗ್ಗೆ ಹೆಚ್ಚಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಸದ್ಯ, ಫಿಟ್ನೆಸ್ ಕಾಯ್ದುಕೊಳ್ಳುವುದರ ಜೊತೆಗೆ ಕೌಶಲಗಳನ್ನು ಸುಧಾರಿಸಿಕೊಳ್ಳುವುದರ ಬಗ್ಗೆಯಷ್ಟೇ ಆಲೋಚಿಸುತ್ತಿರುವೆ ಎಂದು 34 ವರ್ಷದ ಕರ್ನಾಟಕದ ಆಟಗಾರ ತಿಳಿಸಿದ್ದಾರೆ.</p>.<p>ದೇಶಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡಕ್ಕೆ ಮರಳುತ್ತಿರುವ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ವೈಯಕ್ತಿಕ ಕಾರಣಗಳಿಂದಾಗಿ ವಿದರ್ಭ ತಂಡವನ್ನು ತೊರೆಯುವ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಯಿತು. ಈ ಬಗ್ಗೆ ಆಡಳಿತ ಮಂಡಳಿಗೆ ಮನವರಿಕೆ ಮಾಡಿಕೊಟ್ಟಿರುವೆ’ ಎಂದರು.</p>.<p>8 ವರ್ಷಗಳ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದ ಕರುಣ್, ಇಂಗ್ಲೆಂಡ್ ಪ್ರವಾಸದಲ್ಲಿ ಏಕೈಕ ಅರ್ಧಶತಕ ಗಳಿಸಿದ್ದರು. ಎಂಟು ಇನಿಂಗ್ಸ್ಗಳಲ್ಲಿ 25.62ರ ಸರಾಸರಿಯಲ್ಲಿ 205 ರನ್ಗಳನ್ನಷ್ಟೇ ಗಳಿಸಿ, ನಿರಾಶೆ ಅನುಭವಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ನನ್ನ ಆಟವು ಹತಾಶೆ ಮೂಡಿಸಿದ್ದು ನಿಜ. ಆದರೆ, ಒಳ್ಳೆಯ ಆರಂಭವನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸುವ ದೃಢಸಂಕಲ್ಪವನ್ನು ಆ ಸರಣಿಯು ನನ್ನಲ್ಲಿ ಮೂಡಿಸಿದೆ’ ಎಂದು ಭಾರತ ಟೆಸ್ಟ್ ಕ್ರಿಕೆಟ್ ತಂಡದ ಬ್ಯಾಟರ್ ಕರುಣ್ ನಾಯರ್ ಹೇಳಿದ್ದಾರೆ.</p>.<p>‘ಇಂಗ್ಲೆಂಡ್ ಎದುರಿನ ಸರಣಿಯುದ್ದಕ್ಕೂ ಉತ್ತಮವಾಗಿಯೇ ಇನಿಂಗ್ಸ್ ಆರಂಭಿಸಿದ್ದೆ. ಆದರೆ, ಅವುಗಳನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸುವಲ್ಲಿ ಎಡವಿದೆ. 30–40ರನ್ಗಳ ಆಸುಪಾಸಿನಲ್ಲಿ ವಿಕೆಟ್ ಕಳೆದುಕೊಂಡಾಗ ಹತಾಶೆಗೊಳಗಾಗುತ್ತಿದ್ದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಲವರೊಂದಿಗೆ ಚರ್ಚಿಸಿದ್ದೇನೆ. ಮುಂದೆ ದೊರೆಯುವ ಅವಕಾಶಗಳಲ್ಲಿ ನನಗೆ ಅದು ನೆರವಾಗಲಿದೆ’ ಎಂದು ಕರುಣ್ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<p>ಮುಂಬರುವ ಸರಣಿಗಳಿಗೆ ತಂಡಕ್ಕೆ ಆಯ್ಕೆಯಾಗುವ ಬಗ್ಗೆ ಹೆಚ್ಚಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಸದ್ಯ, ಫಿಟ್ನೆಸ್ ಕಾಯ್ದುಕೊಳ್ಳುವುದರ ಜೊತೆಗೆ ಕೌಶಲಗಳನ್ನು ಸುಧಾರಿಸಿಕೊಳ್ಳುವುದರ ಬಗ್ಗೆಯಷ್ಟೇ ಆಲೋಚಿಸುತ್ತಿರುವೆ ಎಂದು 34 ವರ್ಷದ ಕರ್ನಾಟಕದ ಆಟಗಾರ ತಿಳಿಸಿದ್ದಾರೆ.</p>.<p>ದೇಶಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡಕ್ಕೆ ಮರಳುತ್ತಿರುವ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ವೈಯಕ್ತಿಕ ಕಾರಣಗಳಿಂದಾಗಿ ವಿದರ್ಭ ತಂಡವನ್ನು ತೊರೆಯುವ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಯಿತು. ಈ ಬಗ್ಗೆ ಆಡಳಿತ ಮಂಡಳಿಗೆ ಮನವರಿಕೆ ಮಾಡಿಕೊಟ್ಟಿರುವೆ’ ಎಂದರು.</p>.<p>8 ವರ್ಷಗಳ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದ ಕರುಣ್, ಇಂಗ್ಲೆಂಡ್ ಪ್ರವಾಸದಲ್ಲಿ ಏಕೈಕ ಅರ್ಧಶತಕ ಗಳಿಸಿದ್ದರು. ಎಂಟು ಇನಿಂಗ್ಸ್ಗಳಲ್ಲಿ 25.62ರ ಸರಾಸರಿಯಲ್ಲಿ 205 ರನ್ಗಳನ್ನಷ್ಟೇ ಗಳಿಸಿ, ನಿರಾಶೆ ಅನುಭವಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>