<p><strong>ಅಹಮದಾಬಾದ್:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ಇತ್ತೀಚಿನ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ವೇಳೆ ಸೇನಾಪಡೆಯ ವೀರೋಚಿತ ಹೋರಾಟಕ್ಕೆ ಗೌರವ ಸಲ್ಲಿಸಲಾಯಿತು. </p><p>ಗಾಯಕ ಶಂಕರ್ ಮಹಾದೇವನ್ ನೇತೃತ್ವದ ತಂಡವು ದೇಶಭಕ್ತಿಯ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಈ ಸಂದರ್ಭದಲ್ಲಿ ಕಲಾವಿದರು ಹೆಜ್ಜೆ ಹಾಕಿದ್ದಾರೆ. </p><p>ಆಕಾಶದಲ್ಲಿ ಭಾರತೀಯ ಸಶಸ್ತ್ರ ಪಡೆಗಳನ್ನು ಪ್ರತಿನಿಧಿಸುತ್ತಾ ಹೆಲಿಕಾಪ್ಟರ್ ಮೂಲಕ ಕವಾಯತು ನಡೆಸಲಾಯಿತು. </p><p>ಇಂದಿನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. </p>. <p>ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರ ಮೇಲೆ ಭಯೋತ್ಪಾದನೆ ದಾಳಿ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಭಾರತ 'ಆಪರೇಷನ್ ಸಿಂಧೂರ' ಹೆಸರಿನಲ್ಲಿ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿತ್ತು.</p><p>ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷದಿಂದಾಗಿ ಐಪಿಎಲ್ ಒಂದು ವಾರದಷ್ಟು ಕಾಲ ಸ್ಥಗಿತಗೊಂಡಿತ್ತು. ಧರ್ಮಶಾಲಾದಲ್ಲಿ 'ಬ್ಲ್ಯಾಕ್ ಔಟ್' ಕ್ರಮದಿಂದಾಗಿ ಪಂದ್ಯವನ್ನು ಅರ್ಧದಲ್ಲೇ ಮೊಟಕುಗೊಳಿಸಲಾಗಿತ್ತು. </p>.IPL 2025 | ಫೈನಲ್ಗೂ ಮುನ್ನ ವಿರಾಟ್ಗೆ ವಿಶೇಷ ಸಂದೇಶ ರವಾನಿಸಿದ ವಿಲಿಯರ್ಸ್.IPL 2025 FINAL |RCB v PBKS: ಈ ಸಲ ಕಪ್ ಆರ್ಸಿಬಿಗೆ; ಐಪಿಎಲ್ಗೆ ಹೊಸ ‘ಕಿಂಗ್’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ಇತ್ತೀಚಿನ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ವೇಳೆ ಸೇನಾಪಡೆಯ ವೀರೋಚಿತ ಹೋರಾಟಕ್ಕೆ ಗೌರವ ಸಲ್ಲಿಸಲಾಯಿತು. </p><p>ಗಾಯಕ ಶಂಕರ್ ಮಹಾದೇವನ್ ನೇತೃತ್ವದ ತಂಡವು ದೇಶಭಕ್ತಿಯ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಈ ಸಂದರ್ಭದಲ್ಲಿ ಕಲಾವಿದರು ಹೆಜ್ಜೆ ಹಾಕಿದ್ದಾರೆ. </p><p>ಆಕಾಶದಲ್ಲಿ ಭಾರತೀಯ ಸಶಸ್ತ್ರ ಪಡೆಗಳನ್ನು ಪ್ರತಿನಿಧಿಸುತ್ತಾ ಹೆಲಿಕಾಪ್ಟರ್ ಮೂಲಕ ಕವಾಯತು ನಡೆಸಲಾಯಿತು. </p><p>ಇಂದಿನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. </p>. <p>ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರ ಮೇಲೆ ಭಯೋತ್ಪಾದನೆ ದಾಳಿ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಭಾರತ 'ಆಪರೇಷನ್ ಸಿಂಧೂರ' ಹೆಸರಿನಲ್ಲಿ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿತ್ತು.</p><p>ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷದಿಂದಾಗಿ ಐಪಿಎಲ್ ಒಂದು ವಾರದಷ್ಟು ಕಾಲ ಸ್ಥಗಿತಗೊಂಡಿತ್ತು. ಧರ್ಮಶಾಲಾದಲ್ಲಿ 'ಬ್ಲ್ಯಾಕ್ ಔಟ್' ಕ್ರಮದಿಂದಾಗಿ ಪಂದ್ಯವನ್ನು ಅರ್ಧದಲ್ಲೇ ಮೊಟಕುಗೊಳಿಸಲಾಗಿತ್ತು. </p>.IPL 2025 | ಫೈನಲ್ಗೂ ಮುನ್ನ ವಿರಾಟ್ಗೆ ವಿಶೇಷ ಸಂದೇಶ ರವಾನಿಸಿದ ವಿಲಿಯರ್ಸ್.IPL 2025 FINAL |RCB v PBKS: ಈ ಸಲ ಕಪ್ ಆರ್ಸಿಬಿಗೆ; ಐಪಿಎಲ್ಗೆ ಹೊಸ ‘ಕಿಂಗ್’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>