<p><strong>ಜೈಪುರ:</strong> ಪಾಕಿಸ್ತಾನದ ಮೇಲೆ ಭಾರತೀಯ ಸಶಸ್ತ್ರ ಪಡೆ ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಬೆನ್ನಲ್ಲೇ ಕೋಲ್ಕತ್ತದ ಪ್ರಸಿದ್ಧ ಈಡನ್ ಗಾರ್ಡನ್ಸ್ ಹಾಗೂ ಜೈಪುರದ ಸವಾಯಿ ಮಾನ್ ಸಿಂಗ್ ಸ್ಟೇಡಿಯಂಗಳಿಗೆ ಬಾಂಬ್ ಬೆದರಿಕೆ ಬಂದಿವೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ. </p><p>ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. </p><p>ಮೇ 16ರಂದು ಪಂಜಾಬ್ ಕಿಂಗ್ಸ್ ವಿರುದ್ದ ನಡೆಯಲಿರುವ ಅಂತಿಮ ಐಪಿಎಲ್ ಪಂದ್ಯಕ್ಕೂ ಮುನ್ನ ಕ್ರೀಡಾಂಗಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ ಎಂದು ರಾಜಸ್ಥಾನ ಕ್ರೀಡಾ ಮಂಡಳಿ ಅಧ್ಯಕ್ಷ ನೀರಜ್ ಕೆ. ಪವನ್ ತಿಳಿಸಿದ್ದಾರೆ. </p><p>ಆಪರೇಷನ್ ಸಿಂಧೂರಕ್ಕೆ ಪ್ರತಿಯಾಗಿ ಬಾಂಬ್ ದಾಳಿ ನಡೆಸುವುದಾಗಿ ಹೇಳಲಾಗಿದೆ. ತಕ್ಷಣವೇ ಸ್ಟೇಡಿಯಂನಲ್ಲಿ ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ. </p><p>ಇದಕ್ಕೂ ಮೊದಲು ಈಡನ್ ಗಾರ್ಡನ್ಸ್ ಮೈದಾನಕ್ಕೂ ಬಾಂಬ್ ಬೆದರಿಕೆ ಬಂದಿತ್ತು. ಬಂಗಾಳ ಕ್ರಿಕೆಟ್ ಸಂಸ್ಥೆಗೆ (ಸಿಎಬಿ) ಮೇಲ್ ಕಳುಹಿಸಲಾಗಿತ್ತು. ಇದರಿಂದಾಗಿ ಬುಧವಾರ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯಕ್ಕೆ ಆತಂಕ ಎದುರಾಗಿತ್ತು. </p> .Operation Sindoor | ಐಪಿಎಲ್ ಮೇಲೂ ಪರಿಣಾಮ; ಧರ್ಮಶಾಲಾದ ಪಂದ್ಯ ಸ್ಥಳಾಂತರ.Operation Sindoor | 100 ಉಗ್ರರು ಹತ, ಕಾರ್ಯಾಚರಣೆ ಜಾರಿಯಲ್ಲಿದೆ: ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಪಾಕಿಸ್ತಾನದ ಮೇಲೆ ಭಾರತೀಯ ಸಶಸ್ತ್ರ ಪಡೆ ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಬೆನ್ನಲ್ಲೇ ಕೋಲ್ಕತ್ತದ ಪ್ರಸಿದ್ಧ ಈಡನ್ ಗಾರ್ಡನ್ಸ್ ಹಾಗೂ ಜೈಪುರದ ಸವಾಯಿ ಮಾನ್ ಸಿಂಗ್ ಸ್ಟೇಡಿಯಂಗಳಿಗೆ ಬಾಂಬ್ ಬೆದರಿಕೆ ಬಂದಿವೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ. </p><p>ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. </p><p>ಮೇ 16ರಂದು ಪಂಜಾಬ್ ಕಿಂಗ್ಸ್ ವಿರುದ್ದ ನಡೆಯಲಿರುವ ಅಂತಿಮ ಐಪಿಎಲ್ ಪಂದ್ಯಕ್ಕೂ ಮುನ್ನ ಕ್ರೀಡಾಂಗಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ ಎಂದು ರಾಜಸ್ಥಾನ ಕ್ರೀಡಾ ಮಂಡಳಿ ಅಧ್ಯಕ್ಷ ನೀರಜ್ ಕೆ. ಪವನ್ ತಿಳಿಸಿದ್ದಾರೆ. </p><p>ಆಪರೇಷನ್ ಸಿಂಧೂರಕ್ಕೆ ಪ್ರತಿಯಾಗಿ ಬಾಂಬ್ ದಾಳಿ ನಡೆಸುವುದಾಗಿ ಹೇಳಲಾಗಿದೆ. ತಕ್ಷಣವೇ ಸ್ಟೇಡಿಯಂನಲ್ಲಿ ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ. </p><p>ಇದಕ್ಕೂ ಮೊದಲು ಈಡನ್ ಗಾರ್ಡನ್ಸ್ ಮೈದಾನಕ್ಕೂ ಬಾಂಬ್ ಬೆದರಿಕೆ ಬಂದಿತ್ತು. ಬಂಗಾಳ ಕ್ರಿಕೆಟ್ ಸಂಸ್ಥೆಗೆ (ಸಿಎಬಿ) ಮೇಲ್ ಕಳುಹಿಸಲಾಗಿತ್ತು. ಇದರಿಂದಾಗಿ ಬುಧವಾರ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯಕ್ಕೆ ಆತಂಕ ಎದುರಾಗಿತ್ತು. </p> .Operation Sindoor | ಐಪಿಎಲ್ ಮೇಲೂ ಪರಿಣಾಮ; ಧರ್ಮಶಾಲಾದ ಪಂದ್ಯ ಸ್ಥಳಾಂತರ.Operation Sindoor | 100 ಉಗ್ರರು ಹತ, ಕಾರ್ಯಾಚರಣೆ ಜಾರಿಯಲ್ಲಿದೆ: ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>