<p>ಅಫ್ಗಾನಿಸ್ತಾನ – ಪಾಕಿಸ್ತಾನ ಸಂಘರ್ಷ ಮುಂದುವರಿದಿದೆ. ಪಾಕಿಸ್ತಾನ ಸೇನೆ ಶನಿವಾರ ನಡೆಸಿರುವ ವೈಮಾನಿಕ ದಾಳಿಯಲ್ಲಿ ಆಫ್ಗನ್ನ ಮೂವರು ಕ್ರಿಕೆಟಿಗರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ, ಅಫ್ಗಾನಿಸ್ತಾನ ಕ್ರಿಕೆಟ್ ತಂಡವು ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಬೇಕಿದ್ದ ತ್ರಿಕೋನ ಟಿ20 ಸರಣಿಯನ್ನು ಬಹಿಷ್ಕರಿಸಿದೆ.</p><p>ನವೆಂಬರ್ 17ರಿಂದ 29ರ ವರೆಗೆ ನಿಗದಿಯಾಗಿರುವ ಈ ಟೂರ್ನಿಯಲ್ಲಿ, ಶ್ರೀಲಂಕಾ ತಂಡವೂ ಭಾಗವಹಿಸಬೇಕಿದೆ. ಆದರೆ, ಆಫ್ಗನ್ ನಿರ್ಧಾರದಿಂದಾಗಿ ಟೂರ್ನಿ ನಡೆಯುವುದು ಅನಿಶ್ಚಿತವಾಗಿದೆ.</p><p>ಏತನ್ಮಧ್ಯೆ, ಅಫ್ಗಾನಿಸ್ತಾನದ ಸ್ಟಾರ್ ಆಟಗಾರ ರಶೀದ್ ಖಾನ್ ಅವರು ಪಾಕಿಸ್ತಾನ ಪ್ರೀಮಿಯರ್ ಲೀಗ್ಗೆ (ಪಿಎಸ್ಎಲ್) ಗುಡ್ಬೈ ಹೇಳಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.</p><p>ಪಿಎಸ್ಎಲ್ನಲ್ಲಿ ಲಾಹೋರ್ ಖಲಂದರ್ಸ್ ಪರ ಆಡುವ ರಶೀದ್, ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್/ಟ್ವಿಟರ್ನಲ್ಲಿ ತಮ್ಮ ಖಾತೆಯ ಬಯೊದಿಂದ ಫ್ರಾಂಚೈಸ್ ಹೆಸರನ್ನು ತೆಗೆದಿದ್ದಾರೆ. ಹೀಗಾಗಿ, ಅವರು ಪಿಎಸ್ಎಲ್ ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.</p><p>2021ರಲ್ಲಿ ಲಾಹೋರ್ ತಂಡ ಸೇರಿರುವ ರಶೀದ್, ಈವರೆಗೆ ಮೂರು ಬಾರಿ ಪ್ರಶಸ್ತಿ ಜಯಿಸಿದ್ದಾರೆ.</p>.ಪಾಕಿಸ್ತಾನದಿಂದ ವೈಮಾನಿಕ ದಾಳಿ: ಅಫ್ಗಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು.ಪಾಕ್ ದಾಳಿ | ಆಟಗಾರರ ಸಾವು: ತ್ರಿಕೋನ ಸರಣಿಯಿಂದ ಸಿಡಿದು ಹೊರಬಂದ ಆಫ್ಗನ್.<p><strong>'ಅಪಾರ ದುಃಖ ತಂದ ದುರಂತ'<br></strong>ಪಾಕಿಸ್ತಾನ ದಾಳಿಯಿಂದ ಆಘಾತಗೊಂಡಿರುವ ರಶೀದ್, 'ನಾಗರಿಕರ ಸಾವು ಅಪಾರ ದುಃಖ ತಂದಿದೆ. ವಿಶ್ವ ವೇದಿಕೆಯಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುವ ಕನಸು ಕಂಡಿದ್ದ ಯುವ ಕ್ರಿಕೆಟಿಗರು, ಮಹಿಳೆಯರು, ಮಕ್ಕಳನ್ನು ಬಲಿತೆಗೆದುಕೊಂಡ ದುರಂತವಿದು' ಎಂಬುದಾಗಿ ಟ್ವಿಟರ್ನಲ್ಲಿ ಕಂಬನಿ ಮಿಡಿದಿದ್ದಾರೆ.</p><p>'ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ಮಾಡುವುದು ಅನಾಗರಿಕ ನಡೆ. ಈ ಅನ್ಯಾಯ ಹಾಗೂ ಕಾನೂನುಬಾಹಿರ ಕ್ರಮವು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ. ತ್ರಿಕೋನ ಸರಣಿಯಿಂದ ಹಿಂದೆ ಸರಿಯುವ ಅಫ್ಗಾನಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಜನರೊಂದಿಗೆ ನಿಲ್ಲುತ್ತೇನೆ. ದೇಶದ ಘನತೆ ಎಲ್ಲಕ್ಕಿಂತಲೂ ಮಿಗಿಲು' ಎಂದು ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಫ್ಗಾನಿಸ್ತಾನ – ಪಾಕಿಸ್ತಾನ ಸಂಘರ್ಷ ಮುಂದುವರಿದಿದೆ. ಪಾಕಿಸ್ತಾನ ಸೇನೆ ಶನಿವಾರ ನಡೆಸಿರುವ ವೈಮಾನಿಕ ದಾಳಿಯಲ್ಲಿ ಆಫ್ಗನ್ನ ಮೂವರು ಕ್ರಿಕೆಟಿಗರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ, ಅಫ್ಗಾನಿಸ್ತಾನ ಕ್ರಿಕೆಟ್ ತಂಡವು ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಬೇಕಿದ್ದ ತ್ರಿಕೋನ ಟಿ20 ಸರಣಿಯನ್ನು ಬಹಿಷ್ಕರಿಸಿದೆ.</p><p>ನವೆಂಬರ್ 17ರಿಂದ 29ರ ವರೆಗೆ ನಿಗದಿಯಾಗಿರುವ ಈ ಟೂರ್ನಿಯಲ್ಲಿ, ಶ್ರೀಲಂಕಾ ತಂಡವೂ ಭಾಗವಹಿಸಬೇಕಿದೆ. ಆದರೆ, ಆಫ್ಗನ್ ನಿರ್ಧಾರದಿಂದಾಗಿ ಟೂರ್ನಿ ನಡೆಯುವುದು ಅನಿಶ್ಚಿತವಾಗಿದೆ.</p><p>ಏತನ್ಮಧ್ಯೆ, ಅಫ್ಗಾನಿಸ್ತಾನದ ಸ್ಟಾರ್ ಆಟಗಾರ ರಶೀದ್ ಖಾನ್ ಅವರು ಪಾಕಿಸ್ತಾನ ಪ್ರೀಮಿಯರ್ ಲೀಗ್ಗೆ (ಪಿಎಸ್ಎಲ್) ಗುಡ್ಬೈ ಹೇಳಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.</p><p>ಪಿಎಸ್ಎಲ್ನಲ್ಲಿ ಲಾಹೋರ್ ಖಲಂದರ್ಸ್ ಪರ ಆಡುವ ರಶೀದ್, ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್/ಟ್ವಿಟರ್ನಲ್ಲಿ ತಮ್ಮ ಖಾತೆಯ ಬಯೊದಿಂದ ಫ್ರಾಂಚೈಸ್ ಹೆಸರನ್ನು ತೆಗೆದಿದ್ದಾರೆ. ಹೀಗಾಗಿ, ಅವರು ಪಿಎಸ್ಎಲ್ ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.</p><p>2021ರಲ್ಲಿ ಲಾಹೋರ್ ತಂಡ ಸೇರಿರುವ ರಶೀದ್, ಈವರೆಗೆ ಮೂರು ಬಾರಿ ಪ್ರಶಸ್ತಿ ಜಯಿಸಿದ್ದಾರೆ.</p>.ಪಾಕಿಸ್ತಾನದಿಂದ ವೈಮಾನಿಕ ದಾಳಿ: ಅಫ್ಗಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು.ಪಾಕ್ ದಾಳಿ | ಆಟಗಾರರ ಸಾವು: ತ್ರಿಕೋನ ಸರಣಿಯಿಂದ ಸಿಡಿದು ಹೊರಬಂದ ಆಫ್ಗನ್.<p><strong>'ಅಪಾರ ದುಃಖ ತಂದ ದುರಂತ'<br></strong>ಪಾಕಿಸ್ತಾನ ದಾಳಿಯಿಂದ ಆಘಾತಗೊಂಡಿರುವ ರಶೀದ್, 'ನಾಗರಿಕರ ಸಾವು ಅಪಾರ ದುಃಖ ತಂದಿದೆ. ವಿಶ್ವ ವೇದಿಕೆಯಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುವ ಕನಸು ಕಂಡಿದ್ದ ಯುವ ಕ್ರಿಕೆಟಿಗರು, ಮಹಿಳೆಯರು, ಮಕ್ಕಳನ್ನು ಬಲಿತೆಗೆದುಕೊಂಡ ದುರಂತವಿದು' ಎಂಬುದಾಗಿ ಟ್ವಿಟರ್ನಲ್ಲಿ ಕಂಬನಿ ಮಿಡಿದಿದ್ದಾರೆ.</p><p>'ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ಮಾಡುವುದು ಅನಾಗರಿಕ ನಡೆ. ಈ ಅನ್ಯಾಯ ಹಾಗೂ ಕಾನೂನುಬಾಹಿರ ಕ್ರಮವು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ. ತ್ರಿಕೋನ ಸರಣಿಯಿಂದ ಹಿಂದೆ ಸರಿಯುವ ಅಫ್ಗಾನಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಜನರೊಂದಿಗೆ ನಿಲ್ಲುತ್ತೇನೆ. ದೇಶದ ಘನತೆ ಎಲ್ಲಕ್ಕಿಂತಲೂ ಮಿಗಿಲು' ಎಂದು ಬರೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>