<p><strong>ನವದೆಹಲಿ:</strong> ಪಾಕಿಸ್ತಾನ ತಂಡವು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರದಿಂದ ‘ಯು-ಟರ್ನ್’ ತೆಗೆದುಕೊಳ್ಳುತ್ತದೆ. ಆದರೆ, ಅದನ್ನು ಲೆಕ್ಕಿಸದೆ ಐಸಿಸಿ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಆಗ್ರಹಿಸಿದ್ದಾರೆ.</p><p>ಫೆಬ್ರುವರಿ 15ರಂದು ಭಾರತ ವಿರುದ್ಧ ನಡೆಯಬೇಕಿದ್ದ ಹೈವೋಲ್ಟೇಜ್ ಪಂದ್ಯವನ್ನು ಆಡದಿರಲು ಪಾಕಿಸ್ತಾನ ತಂಡ ನಿರ್ಧರಿಸಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ. ಆದರೆ, ಈ ನಿರ್ಧಾರಕ್ಕೆ ಪಾಕಿಸ್ತಾನ ಯಾವುದೇ ಅಧಿಕೃತ ಕಾರಣ ನೀಡಿಲ್ಲ. ಪಾಕಿಸ್ತಾನ ತೆಗೆದುಕೊಂಡಿರುವ ಈ ನಿರ್ಧಾರವನ್ನು ಬಾಂಗ್ಲಾದೇಶದ ಜೊತೆ ಒಗ್ಗಟ್ಟು ಪ್ರದರ್ಶಿಸುವ ಸೂಚನೆ ಎಂದು ಅಂದಾಜಿಸಲಾಗುತ್ತಿದೆ.</p><p>ಭದ್ರತಾ ಕಾರಣಗಳನ್ನು ನೀಡಿ ಭಾರತದಲ್ಲಿ ಆಯೋಜನೆಗೊಂಡಿರುವ ಪಂದ್ಯಗಳನ್ನು ಆಡಲು ನಿರಾಕರಿಸಿದ ಬಳಿಕ ಬಾಂಗ್ಲಾದೇಶ ತಂಡವನ್ನು ಟಿ20 ವಿಶ್ವಕಪ್ನಿಂದ ಹೊರಹಾಕಲಾಗಿದೆ.</p><p>‘ಮುಂದಿನ ನಾಲ್ಕೈದು ದಿನಗಳಲ್ಲಿ ವಿಶ್ವದಾದ್ಯಂತ ಮತ್ತು ಅವರದೇ ದೇಶದ ಮಾಜಿ ಆಟಗಾರರಿಂದ ಪ್ರತಿಕ್ರಿಯೆಗಳು ಹರಿದುಬರಲು ಪ್ರಾರಂಭಿಸಿದ ಬಳಿಕ ಪಾಕಿಸ್ತಾನ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸಾಧ್ಯತೆ ಇದೆ’ ಎಂದು ಗವಾಸ್ಕರ್ ವ್ಯಂಗ್ಯವಾಡಿದ್ದಾರೆ.</p>.ಭಾರತ ವಿರುದ್ಧದ ಕ್ರಿಕೆಟ್ ಪಂದ್ಯ ಬಹಿಷ್ಕರಿಸಿದ ಪಾಕ್: ‘ಅವಮಾನಕರ’ ಎಂದ ಶಶಿ ತರೂರ್.ಭಾರತದಲ್ಲಿ ಟಿ20 ವಿಶ್ವಕಪ್ ಆಡಲ್ಲ: ಬಾಂಗ್ಲಾದೇಶ.<p>‘ಇದರಲ್ಲಿ ಹೊಸದೇನಿದೆ? ಪಾಕಿಸ್ತಾನ ಕ್ರಿಕೆಟಿಗರು ಕೂಡ ಮೊದಲು ನಿವೃತ್ತಿ ಘೋಷಿಸುತ್ತಾರೆ. ನಾಲ್ಕು ದಿನಗಳ ನಂತರ, ನಮ್ಮ ಅಭಿಮಾನಿಗಳು ನಮ್ಮನ್ನು ಇನ್ನಷ್ಟು ದಿನ ಮೈದಾನದಲ್ಲಿ ನೋಡಲು ಆಗ್ರಹಿಸುತ್ತಿದ್ದಾರೆ ಎಂದು ಕಾರಣ ನೀಡಿ ನಿವೃತ್ತಿ ಹಿಂಪಡೆಯುತ್ತಾರೆ. ಅದರಂತೆ ಈ ಇದು ಕೂಡ ಸಂಭವಿಸಬಹುದು’ ಎಂದರು.</p><p>‘ಭಾರತ ವಿರುದ್ಧದ ಹೈವೋಲ್ಟೇಜ್ ಪಂದ್ಯದಿಂದ ಹಿಂದೆ ಸರಿದಿರುವುದಕ್ಕೆ ಪಾಕಿಸ್ತಾನ ಸರಿಯಾದ ಕಾರಣ ನೀಡದಿದ್ದರೆ ಅಥವಾ ಐಸಿಸಿ ಜೊತೆಗಿನ ಒಪ್ಪಂದವನ್ನು ಉಲ್ಲಂಘಿಸುವ ಕಾರಣಗಳನ್ನು ನೀಡಲು ಮುಂದಾದರೆ ಐಸಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ’ ಎಂದಿದ್ದಾರೆ.</p><p>‘ಐಸಿಸಿಯು ಪಾಕಿಸ್ತಾನದ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂದು ನನಗೆ ತಿಳಿದಿಲ್ಲ. ಆದರೆ, ಐಸಿಸಿ ತೆಗೆದುಕೊಳ್ಳುವ ಕ್ರಮದಿಂದ ವಿಶ್ವ ಕ್ರಿಕೆಟ್ನಲ್ಲಿ ಯಾವುದೇ ತಂಡ ಆ ರೀತಿಯ ನಿರ್ಧಾರ ತೆಗೆದುಕೊಳ್ಳಲು ಯೋಚಿಸಬಾರದು’ ಎಂದಿದ್ದಾರೆ.</p><p>ಇನ್ನೂ ಪಾಕಿಸ್ತಾನದ ನಿರ್ಧಾರದ ಕುರಿತು ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿದ ಹರ್ಭಜನ್ ಸಿಂಗ್ ಅವರು, ಕೊನೆ ಕ್ಷಣದಲ್ಲಿ ಈ ರೀತಿ ನಿರ್ಧಾರ ತೆಗೆದುಕೊಂಡಿರುವ ಪಾಕಿಸ್ತಾನ ತಂಡವನ್ನು ಐಸಿಸಿ ಸುಮ್ಮನೆ ಬಿಡಬಾರದು ಎಂದಿದ್ದಾರೆ.</p><p>‘ಪಾಕಿಸ್ತಾನಕ್ಕೆ ಆರಂಭದಲ್ಲಿ ಭಾರತದ ವಿರುದ್ಧ ಆಡಲು ಯಾವುದೇ ಸಮಸ್ಯೆ ಇರಲಿಲ್ಲ. ಈಗ ಅವರು ಬಾಂಗ್ಲಾದೇಶದ ಸಮಸ್ಯೆಯಲ್ಲಿ ಮೂಗು ತೂರಿಸಿದ್ದಾರೆ. ಈ ನಿರ್ಧಾರವು ಐಸಿಸಿ ಹಾಗೂ ವಿಶ್ವಕಪ್ ಪಂದ್ಯಾವಳಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ ಐಸಿಸಿ ಕಾನೂನು ಕ್ರಮ ಕೈಗೊಳ್ಳುವ ಎಲ್ಲ ಹಕ್ಕನ್ನು ಹೊಂದಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಕಿಸ್ತಾನ ತಂಡವು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರದಿಂದ ‘ಯು-ಟರ್ನ್’ ತೆಗೆದುಕೊಳ್ಳುತ್ತದೆ. ಆದರೆ, ಅದನ್ನು ಲೆಕ್ಕಿಸದೆ ಐಸಿಸಿ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಆಗ್ರಹಿಸಿದ್ದಾರೆ.</p><p>ಫೆಬ್ರುವರಿ 15ರಂದು ಭಾರತ ವಿರುದ್ಧ ನಡೆಯಬೇಕಿದ್ದ ಹೈವೋಲ್ಟೇಜ್ ಪಂದ್ಯವನ್ನು ಆಡದಿರಲು ಪಾಕಿಸ್ತಾನ ತಂಡ ನಿರ್ಧರಿಸಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ. ಆದರೆ, ಈ ನಿರ್ಧಾರಕ್ಕೆ ಪಾಕಿಸ್ತಾನ ಯಾವುದೇ ಅಧಿಕೃತ ಕಾರಣ ನೀಡಿಲ್ಲ. ಪಾಕಿಸ್ತಾನ ತೆಗೆದುಕೊಂಡಿರುವ ಈ ನಿರ್ಧಾರವನ್ನು ಬಾಂಗ್ಲಾದೇಶದ ಜೊತೆ ಒಗ್ಗಟ್ಟು ಪ್ರದರ್ಶಿಸುವ ಸೂಚನೆ ಎಂದು ಅಂದಾಜಿಸಲಾಗುತ್ತಿದೆ.</p><p>ಭದ್ರತಾ ಕಾರಣಗಳನ್ನು ನೀಡಿ ಭಾರತದಲ್ಲಿ ಆಯೋಜನೆಗೊಂಡಿರುವ ಪಂದ್ಯಗಳನ್ನು ಆಡಲು ನಿರಾಕರಿಸಿದ ಬಳಿಕ ಬಾಂಗ್ಲಾದೇಶ ತಂಡವನ್ನು ಟಿ20 ವಿಶ್ವಕಪ್ನಿಂದ ಹೊರಹಾಕಲಾಗಿದೆ.</p><p>‘ಮುಂದಿನ ನಾಲ್ಕೈದು ದಿನಗಳಲ್ಲಿ ವಿಶ್ವದಾದ್ಯಂತ ಮತ್ತು ಅವರದೇ ದೇಶದ ಮಾಜಿ ಆಟಗಾರರಿಂದ ಪ್ರತಿಕ್ರಿಯೆಗಳು ಹರಿದುಬರಲು ಪ್ರಾರಂಭಿಸಿದ ಬಳಿಕ ಪಾಕಿಸ್ತಾನ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸಾಧ್ಯತೆ ಇದೆ’ ಎಂದು ಗವಾಸ್ಕರ್ ವ್ಯಂಗ್ಯವಾಡಿದ್ದಾರೆ.</p>.ಭಾರತ ವಿರುದ್ಧದ ಕ್ರಿಕೆಟ್ ಪಂದ್ಯ ಬಹಿಷ್ಕರಿಸಿದ ಪಾಕ್: ‘ಅವಮಾನಕರ’ ಎಂದ ಶಶಿ ತರೂರ್.ಭಾರತದಲ್ಲಿ ಟಿ20 ವಿಶ್ವಕಪ್ ಆಡಲ್ಲ: ಬಾಂಗ್ಲಾದೇಶ.<p>‘ಇದರಲ್ಲಿ ಹೊಸದೇನಿದೆ? ಪಾಕಿಸ್ತಾನ ಕ್ರಿಕೆಟಿಗರು ಕೂಡ ಮೊದಲು ನಿವೃತ್ತಿ ಘೋಷಿಸುತ್ತಾರೆ. ನಾಲ್ಕು ದಿನಗಳ ನಂತರ, ನಮ್ಮ ಅಭಿಮಾನಿಗಳು ನಮ್ಮನ್ನು ಇನ್ನಷ್ಟು ದಿನ ಮೈದಾನದಲ್ಲಿ ನೋಡಲು ಆಗ್ರಹಿಸುತ್ತಿದ್ದಾರೆ ಎಂದು ಕಾರಣ ನೀಡಿ ನಿವೃತ್ತಿ ಹಿಂಪಡೆಯುತ್ತಾರೆ. ಅದರಂತೆ ಈ ಇದು ಕೂಡ ಸಂಭವಿಸಬಹುದು’ ಎಂದರು.</p><p>‘ಭಾರತ ವಿರುದ್ಧದ ಹೈವೋಲ್ಟೇಜ್ ಪಂದ್ಯದಿಂದ ಹಿಂದೆ ಸರಿದಿರುವುದಕ್ಕೆ ಪಾಕಿಸ್ತಾನ ಸರಿಯಾದ ಕಾರಣ ನೀಡದಿದ್ದರೆ ಅಥವಾ ಐಸಿಸಿ ಜೊತೆಗಿನ ಒಪ್ಪಂದವನ್ನು ಉಲ್ಲಂಘಿಸುವ ಕಾರಣಗಳನ್ನು ನೀಡಲು ಮುಂದಾದರೆ ಐಸಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ’ ಎಂದಿದ್ದಾರೆ.</p><p>‘ಐಸಿಸಿಯು ಪಾಕಿಸ್ತಾನದ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂದು ನನಗೆ ತಿಳಿದಿಲ್ಲ. ಆದರೆ, ಐಸಿಸಿ ತೆಗೆದುಕೊಳ್ಳುವ ಕ್ರಮದಿಂದ ವಿಶ್ವ ಕ್ರಿಕೆಟ್ನಲ್ಲಿ ಯಾವುದೇ ತಂಡ ಆ ರೀತಿಯ ನಿರ್ಧಾರ ತೆಗೆದುಕೊಳ್ಳಲು ಯೋಚಿಸಬಾರದು’ ಎಂದಿದ್ದಾರೆ.</p><p>ಇನ್ನೂ ಪಾಕಿಸ್ತಾನದ ನಿರ್ಧಾರದ ಕುರಿತು ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿದ ಹರ್ಭಜನ್ ಸಿಂಗ್ ಅವರು, ಕೊನೆ ಕ್ಷಣದಲ್ಲಿ ಈ ರೀತಿ ನಿರ್ಧಾರ ತೆಗೆದುಕೊಂಡಿರುವ ಪಾಕಿಸ್ತಾನ ತಂಡವನ್ನು ಐಸಿಸಿ ಸುಮ್ಮನೆ ಬಿಡಬಾರದು ಎಂದಿದ್ದಾರೆ.</p><p>‘ಪಾಕಿಸ್ತಾನಕ್ಕೆ ಆರಂಭದಲ್ಲಿ ಭಾರತದ ವಿರುದ್ಧ ಆಡಲು ಯಾವುದೇ ಸಮಸ್ಯೆ ಇರಲಿಲ್ಲ. ಈಗ ಅವರು ಬಾಂಗ್ಲಾದೇಶದ ಸಮಸ್ಯೆಯಲ್ಲಿ ಮೂಗು ತೂರಿಸಿದ್ದಾರೆ. ಈ ನಿರ್ಧಾರವು ಐಸಿಸಿ ಹಾಗೂ ವಿಶ್ವಕಪ್ ಪಂದ್ಯಾವಳಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ ಐಸಿಸಿ ಕಾನೂನು ಕ್ರಮ ಕೈಗೊಳ್ಳುವ ಎಲ್ಲ ಹಕ್ಕನ್ನು ಹೊಂದಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>