<p><strong>ನವದೆಹಲಿ:</strong> ಭಾರತದಲ್ಲಿ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಪಾಕಿಸ್ತಾನ ತಂಡದ ಆಟಗಾರರಿಗೆ ವೀಸಾ ನೀಡಲು ಸರ್ಕಾರ ಒಪ್ಪಿಕೊಂಡಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.</p>.<p>ಶುಕ್ರವಾರ ನಡೆದ ಅಪೆಕ್ಸ್ ಸಮಿತಿ ಸಭೆಯಲ್ಲಿ ಮಂಡಳಿಯ ಕಾರ್ಯದರ್ಶಿ ಜಯ ಶಾ ಈ ವಿಷಯವನ್ನು ಘೋಷಿಸಿದ್ದಾರೆ. ದೇಶದ ಒಂಬತ್ತು ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿದ್ದು ಅಹಮದಾಬಾದ್ನ ನರೇಂದ್ರ ಮೋದಿ ಅಂಗಣ ಫೈನಲ್ ಹಣಾಹಣಿಗೆ ಆತಿಥ್ಯ ವಹಿಸಲಿದೆ ಎಂದು ಶಾ ತಿಳಿಸಿದ್ದಾರೆ.</p>.<p>ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತ, ಹೈದರಾಬಾದ್, ಧರ್ಮಶಾಲಾ ಮತ್ತು ಲಖನೌದಲ್ಲಿ ಪಂದ್ಯಗಳು ನಡೆಯಲಿವೆ.</p>.<p>ರಾಜತಾಂತ್ರಿಕ ಕಾರಣಗಳಿಂದಾಗಿ ಭಾರತ ಮತ್ತು ಪಾಕಿಸ್ತಾನ ಒಂದು ದಶಕದಿಂದ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯಗಳನ್ನು ಆಡಿಲ್ಲ. ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಗೆ ವೀಸಾ ನೀಡುವಂತೆ ಪಾಕಿಸ್ತಾನ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯನ್ನು ಸತತವಾಗಿ ಒತ್ತಾಯಿಸುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದಲ್ಲಿ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಪಾಕಿಸ್ತಾನ ತಂಡದ ಆಟಗಾರರಿಗೆ ವೀಸಾ ನೀಡಲು ಸರ್ಕಾರ ಒಪ್ಪಿಕೊಂಡಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.</p>.<p>ಶುಕ್ರವಾರ ನಡೆದ ಅಪೆಕ್ಸ್ ಸಮಿತಿ ಸಭೆಯಲ್ಲಿ ಮಂಡಳಿಯ ಕಾರ್ಯದರ್ಶಿ ಜಯ ಶಾ ಈ ವಿಷಯವನ್ನು ಘೋಷಿಸಿದ್ದಾರೆ. ದೇಶದ ಒಂಬತ್ತು ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿದ್ದು ಅಹಮದಾಬಾದ್ನ ನರೇಂದ್ರ ಮೋದಿ ಅಂಗಣ ಫೈನಲ್ ಹಣಾಹಣಿಗೆ ಆತಿಥ್ಯ ವಹಿಸಲಿದೆ ಎಂದು ಶಾ ತಿಳಿಸಿದ್ದಾರೆ.</p>.<p>ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತ, ಹೈದರಾಬಾದ್, ಧರ್ಮಶಾಲಾ ಮತ್ತು ಲಖನೌದಲ್ಲಿ ಪಂದ್ಯಗಳು ನಡೆಯಲಿವೆ.</p>.<p>ರಾಜತಾಂತ್ರಿಕ ಕಾರಣಗಳಿಂದಾಗಿ ಭಾರತ ಮತ್ತು ಪಾಕಿಸ್ತಾನ ಒಂದು ದಶಕದಿಂದ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯಗಳನ್ನು ಆಡಿಲ್ಲ. ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಗೆ ವೀಸಾ ನೀಡುವಂತೆ ಪಾಕಿಸ್ತಾನ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯನ್ನು ಸತತವಾಗಿ ಒತ್ತಾಯಿಸುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>