<p><strong>ಕರಾಚಿ</strong>: ಪಾಕಿಸ್ತಾನ ಕ್ರಿಕೆಟಿಗ ನಸೀಮ್ ಶಾ ಅವರ ಪೂರ್ವಜರ ಮನೆಯ ಮೇಲಿನ ಗುಂಡಿನ ದಾಳಿಗೆ ಆಸ್ತಿ ವಿವಾದ ಕಾರಣವಾಗಿರಬಹುದು ಎಂದು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ.</p><p>ಖೈಬರ್ ಪಖ್ತುಂಖ್ವಾದ ಲೋವರ್ ದಿರ್ ಜಿಲ್ಲೆಯಲ್ಲಿರುವ ನಸೀಮ್ ಅವರ ಪೂರ್ವಜರ ಮನೆಯನ್ನು ಗುರಿಯಾಗಿರಿಸಿಕೊಂಡು ಅಪರಿಚಿತ ದಾಳಿಕೋರರು ಗುಂಡು ಹಾರಿಸಿದ್ದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಹಾಗಾಗಿ ಶ್ರೀಲಂಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗಾಗಿ ಪಾಕಿಸ್ತಾನ ತಂಡದ ಜೊತೆಗಿರುವ ನಸೀಮ್ ಮನೆಗೆ ವಾಪಾಸ್ಸಾಲ್ಲ.</p><p>ಘಟನೆ ಕುರಿತು ಲೋವರ್ ದಿರ್ನ ಜಿಲ್ಲಾ ಪೊಲೀಸ್ ಅಧಿಕಾರಿ (ಡಿಪಿಒ) ತೈಮೂರ್ ಖಾನ್ ಮಾತನಾಡಿ, ‘ಆಸ್ತಿ ವಿವಾದ ಅಥವಾ ಸ್ಥಳೀಯ ದ್ವೇಷದ ಕಾರಣದಿಂದ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಘಟನೆಯಿಂದಾಗಿ ಈ ಪ್ರದೇಶದ ಶಾಂತಿಯುತ ವಾತಾವರಣ ಹದಗೆಡುವ ಸಾಧ್ಯತೆ ಇದೆ’ ಎಂದು ಹೇಳಿದ್ದಾರೆ.</p><p>ತೈಮೂರ್ ಖಾನ್ ಅವರು ನಸೀಮ್ ಶಾ ತಂದೆ ಮತ್ತು ಅವರ ಇತರ ಸಂಬಂಧಿಕರನ್ನು ಭೇಟಿಯಾಗಿ ಘಟನೆ ಕುರಿತು ತನಿಖೆ ನಡೆಸಲು ತಂಡ ರಚಿಸಿರುವುದಾಗಿ ತಿಳಿಸಿದ್ದಾರೆ. ಮಾತ್ರವಲ್ಲ, ಮನೆಗೆ ಹೆಚ್ಚುವರಿ ಭದ್ರತೆ ಒದಗಿಸಿರುವುದಾಗಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ</strong>: ಪಾಕಿಸ್ತಾನ ಕ್ರಿಕೆಟಿಗ ನಸೀಮ್ ಶಾ ಅವರ ಪೂರ್ವಜರ ಮನೆಯ ಮೇಲಿನ ಗುಂಡಿನ ದಾಳಿಗೆ ಆಸ್ತಿ ವಿವಾದ ಕಾರಣವಾಗಿರಬಹುದು ಎಂದು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ.</p><p>ಖೈಬರ್ ಪಖ್ತುಂಖ್ವಾದ ಲೋವರ್ ದಿರ್ ಜಿಲ್ಲೆಯಲ್ಲಿರುವ ನಸೀಮ್ ಅವರ ಪೂರ್ವಜರ ಮನೆಯನ್ನು ಗುರಿಯಾಗಿರಿಸಿಕೊಂಡು ಅಪರಿಚಿತ ದಾಳಿಕೋರರು ಗುಂಡು ಹಾರಿಸಿದ್ದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಹಾಗಾಗಿ ಶ್ರೀಲಂಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗಾಗಿ ಪಾಕಿಸ್ತಾನ ತಂಡದ ಜೊತೆಗಿರುವ ನಸೀಮ್ ಮನೆಗೆ ವಾಪಾಸ್ಸಾಲ್ಲ.</p><p>ಘಟನೆ ಕುರಿತು ಲೋವರ್ ದಿರ್ನ ಜಿಲ್ಲಾ ಪೊಲೀಸ್ ಅಧಿಕಾರಿ (ಡಿಪಿಒ) ತೈಮೂರ್ ಖಾನ್ ಮಾತನಾಡಿ, ‘ಆಸ್ತಿ ವಿವಾದ ಅಥವಾ ಸ್ಥಳೀಯ ದ್ವೇಷದ ಕಾರಣದಿಂದ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಘಟನೆಯಿಂದಾಗಿ ಈ ಪ್ರದೇಶದ ಶಾಂತಿಯುತ ವಾತಾವರಣ ಹದಗೆಡುವ ಸಾಧ್ಯತೆ ಇದೆ’ ಎಂದು ಹೇಳಿದ್ದಾರೆ.</p><p>ತೈಮೂರ್ ಖಾನ್ ಅವರು ನಸೀಮ್ ಶಾ ತಂದೆ ಮತ್ತು ಅವರ ಇತರ ಸಂಬಂಧಿಕರನ್ನು ಭೇಟಿಯಾಗಿ ಘಟನೆ ಕುರಿತು ತನಿಖೆ ನಡೆಸಲು ತಂಡ ರಚಿಸಿರುವುದಾಗಿ ತಿಳಿಸಿದ್ದಾರೆ. ಮಾತ್ರವಲ್ಲ, ಮನೆಗೆ ಹೆಚ್ಚುವರಿ ಭದ್ರತೆ ಒದಗಿಸಿರುವುದಾಗಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>