‘ನಾವು ಕಳುಹಿಸಿದ್ದ ಶೋಕಾಸ್ ನೋಟಿಸ್ಗೆ ಇಬ್ಬರೂ ಉತ್ತರಿಸಿದ್ದಾರೆ. ತಮ್ಮಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸುವಂತೆ ಆಡಳಿತಾಧಿಕಾರಿಗಳ ಸಮಿತಿಯ (ಸಿಒಎ) ಮುಖ್ಯಸ್ಥ ವಿನೋದ್ ರಾಯ್ ಅವರು ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ ಅವರಿಗೆ ತಿಳಿಸಿದ್ದಾರೆ. ಉಭಯ ಆಟಗಾರರ ಕ್ರೀಡಾ ಬದುಕಿಗೆ ಯಾವುದೇ ತೊಂದರೆ ಮಾಡದೆ, ಬುದ್ಧಿ ಹೇಳುವಂತೆಯೂ ಸಿಇಒಗೆ ಸೂಚಿಸಿದ್ದಾರೆ’ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.