<p><strong>ಕ್ರೈಸ್ಟ್ಚರ್ಚ್:</strong> ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಸೋಲನ್ನು ಅನುಭವಿಸಿದೆ.</p>.<p>ಸತತ ವೈಫಲ್ಯದ ಹೊರತಾಗಿಯೂ ರಿಷಭ್ ಪಂತ್ಗೆ ಅವಕಾಶ ನೀಡಲಾಗಿದೆ. ಮತ್ತೊಂದೆಡೆ ಸಂಜು ಸ್ಯಾಮ್ಸನ್ಗೆ ಅವಕಾಶ ನಿರಾಕರಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಈ ಕುರಿತು ಪಂದ್ಯದ ಬಳಿಕ ಪ್ರತಿಕ್ರಿಯೆ ನೀಡಿರುವ ನಾಯಕ ಶಿಖರ್ ಧವನ್, ರಿಷಭ್ ಪಂತ್ ಮ್ಯಾಚ್ ವಿನ್ನರ್ ಆಗಿದ್ದು, ಸಂಜು ತಮ್ಮ ಅವಕಾಶಕ್ಕಾಗಿ ಕಾಯಬೇಕಾಗಿದೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ind-vs-nz-3rd-odi-called-off-due-to-rain-new-zealand-win-series-993131.html" itemprop="url">IND vs NZ: ಅಂತಿಮ ಏಕದಿನ ಮಳೆಯಿಂದಾಗಿ ರದ್ದು; ನ್ಯೂಜಿಲೆಂಡ್ಗೆ ಸರಣಿ ಗೆಲುವು </a></p>.<p>ರಿಷಭ್ ಪಂತ್ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತು ಮಾಡಿದ್ದಾರೆ. ಕಳಪೆ ಫಾರ್ಮ್ನಿಂದಾಗಿ ಕಠಿಣ ಸಮಯ ಎದುರಾದಾಗ ಅಂತಹ ಆಟಗಾರನನ್ನು ಬೆಂಬಲಿಸಬೇಕಾಗುತ್ತದೆ ಎಂದು ಹೇಳಿದರು.</p>.<p>ನಿಸ್ಸಂಶಯವಾಗಿಯೂ ಅವಕಾಶ ಸಿಕ್ಕಾಗೆಲ್ಲಾ ಸಂಜು ಅತ್ಯುತ್ತಮವಾಗಿ ಆಡುತ್ತಿದ್ದಾರೆ. ಆದರೆ ಕೆಲವೊಮ್ಮೆ ಅವಕಾಶಕ್ಕಾಗಿ ಕಾಯಬೇಕಾಗಿದೆ. ಏಕೆಂದರೆ ಮತ್ತೊಬ್ಬ ಆಟಗಾರ (ಪಂತ್) ಕೂಡ ಮ್ಯಾಚ್ ವಿನ್ನರ್ ಆಗಿದ್ದು, ಕಠಿಣ ಸಮಯದಲ್ಲಿ ಅವರನ್ನು ಬೆಂಬಲಿಸಬೇಕಾಗುತ್ತದೆ ಎಂದು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು.</p>.<p>ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಪಂತ್ ಸತತ ವೈಫಲ್ಯ ಅನುಭವಿಸಿದ್ದಾರೆ. ಕೊನೆಯ ಒಂಬತ್ತು ಇನ್ನಿಂಗ್ಸ್ಗಳಲ್ಲಿ (10, 15, 11, 6, 6, 3, 9, 9 27) ನಿರಾಸೆ ಮೂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ರೈಸ್ಟ್ಚರ್ಚ್:</strong> ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಸೋಲನ್ನು ಅನುಭವಿಸಿದೆ.</p>.<p>ಸತತ ವೈಫಲ್ಯದ ಹೊರತಾಗಿಯೂ ರಿಷಭ್ ಪಂತ್ಗೆ ಅವಕಾಶ ನೀಡಲಾಗಿದೆ. ಮತ್ತೊಂದೆಡೆ ಸಂಜು ಸ್ಯಾಮ್ಸನ್ಗೆ ಅವಕಾಶ ನಿರಾಕರಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಈ ಕುರಿತು ಪಂದ್ಯದ ಬಳಿಕ ಪ್ರತಿಕ್ರಿಯೆ ನೀಡಿರುವ ನಾಯಕ ಶಿಖರ್ ಧವನ್, ರಿಷಭ್ ಪಂತ್ ಮ್ಯಾಚ್ ವಿನ್ನರ್ ಆಗಿದ್ದು, ಸಂಜು ತಮ್ಮ ಅವಕಾಶಕ್ಕಾಗಿ ಕಾಯಬೇಕಾಗಿದೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ind-vs-nz-3rd-odi-called-off-due-to-rain-new-zealand-win-series-993131.html" itemprop="url">IND vs NZ: ಅಂತಿಮ ಏಕದಿನ ಮಳೆಯಿಂದಾಗಿ ರದ್ದು; ನ್ಯೂಜಿಲೆಂಡ್ಗೆ ಸರಣಿ ಗೆಲುವು </a></p>.<p>ರಿಷಭ್ ಪಂತ್ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತು ಮಾಡಿದ್ದಾರೆ. ಕಳಪೆ ಫಾರ್ಮ್ನಿಂದಾಗಿ ಕಠಿಣ ಸಮಯ ಎದುರಾದಾಗ ಅಂತಹ ಆಟಗಾರನನ್ನು ಬೆಂಬಲಿಸಬೇಕಾಗುತ್ತದೆ ಎಂದು ಹೇಳಿದರು.</p>.<p>ನಿಸ್ಸಂಶಯವಾಗಿಯೂ ಅವಕಾಶ ಸಿಕ್ಕಾಗೆಲ್ಲಾ ಸಂಜು ಅತ್ಯುತ್ತಮವಾಗಿ ಆಡುತ್ತಿದ್ದಾರೆ. ಆದರೆ ಕೆಲವೊಮ್ಮೆ ಅವಕಾಶಕ್ಕಾಗಿ ಕಾಯಬೇಕಾಗಿದೆ. ಏಕೆಂದರೆ ಮತ್ತೊಬ್ಬ ಆಟಗಾರ (ಪಂತ್) ಕೂಡ ಮ್ಯಾಚ್ ವಿನ್ನರ್ ಆಗಿದ್ದು, ಕಠಿಣ ಸಮಯದಲ್ಲಿ ಅವರನ್ನು ಬೆಂಬಲಿಸಬೇಕಾಗುತ್ತದೆ ಎಂದು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು.</p>.<p>ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಪಂತ್ ಸತತ ವೈಫಲ್ಯ ಅನುಭವಿಸಿದ್ದಾರೆ. ಕೊನೆಯ ಒಂಬತ್ತು ಇನ್ನಿಂಗ್ಸ್ಗಳಲ್ಲಿ (10, 15, 11, 6, 6, 3, 9, 9 27) ನಿರಾಸೆ ಮೂಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>