<p><strong>ಕರಾಚಿ</strong>: ಕೋವಿಡ್–19 ಪಿಡುಗಿನಿಂದಾಗಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಇದರ ನಡುವೆಯೂ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚಿದೆ.</p>.<p>ಕೊರೊನಾ ಬಿಕ್ಕಟ್ಟಿನಿಂದಾಗಿ ಕಷ್ಟದ ದಿನಗಳನ್ನು ದೂಡುತ್ತಿರುವ ಪ್ರಥಮ ದರ್ಜೆ ಕ್ರಿಕೆಟಿಗರು, ಸ್ಕೋರರ್ಗಳು, ಅಂಪೈರ್ಗಳು ಹಾಗೂ ಮೈದಾನ ಸಿಬ್ಬಂದಿಗೆ ಹಣಕಾಸಿನ ಸಹಾಯ ಮಾಡಲು ಮುಂದಾಗಿದೆ.</p>.<p>‘ಪ್ರಥಮ ದರ್ಜೆ ಕ್ರಿಕೆಟಿಗರಿಗೆ ₹25 ಸಾವಿರ, ಪಂದ್ಯದ ಅಧಿಕಾರಿಗಳಿಗೆ ₹15 ಸಾವಿರ ಹಾಗೂ ಮೈದಾನ ಸಿಬ್ಬಂದಿಗೆ ₹10 ಸಾವಿರ ನೀಡಲು ನಿರ್ಧರಿಸಿದ್ದೇವೆ. ಫಲಾನುಭವಿಗಳ ಮಾಹಿತಿಯನ್ನು ಗೋಪ್ಯವಾಗಿ ಇಡಲಾಗುವುದು. ರಂಜಾನ್ ಹಬ್ಬದ ರಜೆಗೂ ಮುನ್ನವೇ ಈ ಮೊತ್ತವನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದೇವೆ’ ಎಂದು ಪಿಸಿಬಿ, ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಶಾಹೀದ್ ಅಫ್ರಿದಿ, ಅಜರ್ ಅಲಿ, ರುಮಾನ್ ರಯೀಸ್, ಸರ್ಫರಾಜ್ ಅಹ್ಮದ್ ಸೇರಿದಂತೆ ಹಲವು ಹಿರಿಯ ಕ್ರಿಕೆಟಿಗರು ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವು ಒದಗಿಸುತ್ತಿದ್ದಾರೆ. ಅವರ ಕಾರ್ಯಕ್ಕೆಪಿಸಿಬಿ ಮುಖ್ಯಸ್ಥ ಎಹಸಾನ್ ಮಣಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>‘ಕೆಲ ಹಿರಿಯ ಆಟಗಾರರು ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಕಷ್ಟದಲ್ಲಿರುವವರ ಕಣ್ಣೀರು ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಕಾರ್ಯವು ಶ್ಲಾಘನೀಯವಾದುದು’ ಎಂದು ಮಣಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ</strong>: ಕೋವಿಡ್–19 ಪಿಡುಗಿನಿಂದಾಗಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಇದರ ನಡುವೆಯೂ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚಿದೆ.</p>.<p>ಕೊರೊನಾ ಬಿಕ್ಕಟ್ಟಿನಿಂದಾಗಿ ಕಷ್ಟದ ದಿನಗಳನ್ನು ದೂಡುತ್ತಿರುವ ಪ್ರಥಮ ದರ್ಜೆ ಕ್ರಿಕೆಟಿಗರು, ಸ್ಕೋರರ್ಗಳು, ಅಂಪೈರ್ಗಳು ಹಾಗೂ ಮೈದಾನ ಸಿಬ್ಬಂದಿಗೆ ಹಣಕಾಸಿನ ಸಹಾಯ ಮಾಡಲು ಮುಂದಾಗಿದೆ.</p>.<p>‘ಪ್ರಥಮ ದರ್ಜೆ ಕ್ರಿಕೆಟಿಗರಿಗೆ ₹25 ಸಾವಿರ, ಪಂದ್ಯದ ಅಧಿಕಾರಿಗಳಿಗೆ ₹15 ಸಾವಿರ ಹಾಗೂ ಮೈದಾನ ಸಿಬ್ಬಂದಿಗೆ ₹10 ಸಾವಿರ ನೀಡಲು ನಿರ್ಧರಿಸಿದ್ದೇವೆ. ಫಲಾನುಭವಿಗಳ ಮಾಹಿತಿಯನ್ನು ಗೋಪ್ಯವಾಗಿ ಇಡಲಾಗುವುದು. ರಂಜಾನ್ ಹಬ್ಬದ ರಜೆಗೂ ಮುನ್ನವೇ ಈ ಮೊತ್ತವನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದೇವೆ’ ಎಂದು ಪಿಸಿಬಿ, ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಶಾಹೀದ್ ಅಫ್ರಿದಿ, ಅಜರ್ ಅಲಿ, ರುಮಾನ್ ರಯೀಸ್, ಸರ್ಫರಾಜ್ ಅಹ್ಮದ್ ಸೇರಿದಂತೆ ಹಲವು ಹಿರಿಯ ಕ್ರಿಕೆಟಿಗರು ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವು ಒದಗಿಸುತ್ತಿದ್ದಾರೆ. ಅವರ ಕಾರ್ಯಕ್ಕೆಪಿಸಿಬಿ ಮುಖ್ಯಸ್ಥ ಎಹಸಾನ್ ಮಣಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>‘ಕೆಲ ಹಿರಿಯ ಆಟಗಾರರು ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಕಷ್ಟದಲ್ಲಿರುವವರ ಕಣ್ಣೀರು ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಕಾರ್ಯವು ಶ್ಲಾಘನೀಯವಾದುದು’ ಎಂದು ಮಣಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>