ಕೊಲಂಬೊ: ಶ್ರೀಲಂಕಾದ ಮಧ್ಯಮ ಕ್ರಮಾಂಕದ ಆಟಗಾರ ಕುಶಾಲ್ ಪೆರೇರಾ, ಇಂಗ್ಲೆಂಡ್ ಎದುರಿನ ಏಕದಿನ ಕ್ರಿಕೆಟ್ ಸರಣಿಯ ಅಂತಿಮ ಮೂರು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.
ಶನಿವಾರ ನಡೆದಿದ್ದ ಎರಡನೇ ಪಂದ್ಯದ ವೇಳೆ ಪೆರೇರಾ ಅವರ ಮಂಡಿಗೆ ಗಂಭೀರ ಗಾಯವಾಗಿತ್ತು. ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಪೆರೇರಾ ಬದಲು ಸದೀರ ಸಮರವಿಕ್ರಮ ತಂಡ ಸೇರಿಕೊಳ್ಳಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ನ (ಎಸ್ಎಲ್ಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂಗ್ಲೆಂಡ್ನ ಆಲ್ರೌಂಡರ್ ಲಿಯಾಮ್ ಡಾಸನ್ ಕೂಡಾ ಗಾಯದ ಕಾರಣ ಸರಣಿಯ ಉಳಿದ ಪಂದ್ಯಗಳಲ್ಲಿ ಆಡುತ್ತಿಲ್ಲ. ಅವರ ಬದಲು ಜೋ ಡೆನ್ಲಿ ತಂಡ ಸೇರಿಕೊಂಡಿದ್ದಾರೆ.
ಶ್ರೀಲಂಕಾ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ ಬುಧವಾರ ಕ್ಯಾಂಡಿಯಲ್ಲಿ ಜರುಗಲಿದೆ.
ಏಕದಿನ ಸರಣಿಯ ಬಳಿಕ ಇಂಗ್ಲೆಂಡ್ ತಂಡ ಮೂರು ಪಂದ್ಯಗಳ ಟೆಸ್ಟ್ ಸರಣಿ ಮತ್ತು ಏಕೈಕ ಟ್ವೆಂಟಿ–20 ಪಂದ್ಯ ಆಡಲಿದೆ.