ಶನಿವಾರ ಇಲ್ಲಿ ಮುಕ್ತಾಯವಾದ ಸೌರಾಷ್ಟ್ರ ಎದುರಿನ ಪಂದ್ಯದಲ್ಲಿ ಕರ್ನಾಟಕ ತಂಡವು 87 ರನ್ಗಳಿಂದ ಸೋತಿತು. ವಿನಯಕುಮಾರ್ ಬಳಗವು ಶುಕ್ರವಾರ ಮೊದಲ ಇನಿಂಗ್ಸ್ನಲ್ಲಿ 100 ರನ್ಗಳ ಹಿನ್ನಡೆ ಅನುಭವಿಸಿತ್ತು. ಶನಿವಾರ ಎರಡನೇ ಇನಿಂಗ್ಸ್ನಲ್ಲಿ ಆತಿಥೇಯ ತಂಡವು ಕೇವಲ 79 ರನ್ ಗಳಿಸಿ ಆಲೌಟ್ ಆಯಿತು. 179 ರನ್ಗಳ ಗುರಿ ಬೆನ್ನತ್ತಿದ್ದ ಕರ್ನಾಟಕ ತಂಡವು 91 ರನ್ಗಳಿಗೆ ಸರ್ವಪತನವಾಯಿತು. ಇದಕ್ಕೆ ಪಿಚ್ನ ಕಳಪೆ ಗುಣಮಟ್ಟವೇ ಕಾರಣ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ದೂರಿದೆ. ಈ ಕುರಿತು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ರಾವ್ ಅವರು ಬಿಸಿಸಿಐಗೆ ದೂರು ನೀಡಿದ್ದಾರೆ.