<p><strong>ಠಾಣೆ:</strong> ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅವರು ಇಲ್ಲಿಯ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಇದೀಗ ಅವರು ಅದೇ ಆಸ್ಪತ್ರೆಯಲ್ಲಿ ಲವಲವಿಕೆಯಿಂದ ನೃತ್ಯ ಮಾಡುತ್ತಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. </p>.<p>ಕಾಂಬ್ಳಿ ಅವರನ್ನು ಮೊದಲಿಗೆ ಮೂತ್ರನಾಳದ ಸೋಂಕು ಮತ್ತು ಸ್ನಾಯುಸೆಳೆತದ ಚಿಕಿತ್ಸೆಗಾಗಿ ಡಿಸೆಂಬರ್ 21ರಂದು ಭಿವಂಡಿಯ ಆಕೃತಿ ಆಸ್ಪತ್ರೆಯಲ್ಲಿ ಸೇರಿಸಲಾಗಿತ್ತು. ಎಲ್ಲ ವೈದ್ಯಕೀಯ ತಪಾಸಣೆಗಳನ್ನು ನಡೆಸಿದ ನಂತರ ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿತ್ತು. </p>.<p>ಇದೀಗ ಅವರು ಜನಪ್ರಿಯ ಗೀತೆಯೊಂದಕ್ಕೆ ನರ್ತಿಸುವ ವಿಡಿಯೊ ಜನರ ಗಮನ ಸೆಳೆಯುತ್ತಿದೆ. ಅವರ ಲವಲವಿಕೆಯಿಂದ ಹುರುಪುಗೊಂಡ ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರ ರೋಗಿಗಳೂ ಹೆಜ್ಜೆ ಹಾಕಿದರು. ಒಬ್ಬ ನರ್ಸ್ ಮತ್ತು ಸಿಬ್ಬಂದಿ ಕೂಡ ಅವರೊಂದಿಗೆ ನರ್ತಿಸಿದ್ದಾರೆ. </p>.<p>‘ನಾನು ತಮ್ಮೆಲ್ಲರ ಪ್ರೀತಿ ವಿಶ್ವಾಸದಿಂದಾಗಿ ಇಷ್ಟು ದೂರ ಬಂದಿದ್ದೇನೆ’ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ. ಅವರು ಆಸ್ಪತ್ರೆಯ ನಿರ್ದೇಶಕ ಶೈಲೇಶ್ ಠಾಕೂರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. </p>.<p>ಕಾಂಬ್ಳಿ ಅವರು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ:</strong> ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅವರು ಇಲ್ಲಿಯ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಇದೀಗ ಅವರು ಅದೇ ಆಸ್ಪತ್ರೆಯಲ್ಲಿ ಲವಲವಿಕೆಯಿಂದ ನೃತ್ಯ ಮಾಡುತ್ತಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. </p>.<p>ಕಾಂಬ್ಳಿ ಅವರನ್ನು ಮೊದಲಿಗೆ ಮೂತ್ರನಾಳದ ಸೋಂಕು ಮತ್ತು ಸ್ನಾಯುಸೆಳೆತದ ಚಿಕಿತ್ಸೆಗಾಗಿ ಡಿಸೆಂಬರ್ 21ರಂದು ಭಿವಂಡಿಯ ಆಕೃತಿ ಆಸ್ಪತ್ರೆಯಲ್ಲಿ ಸೇರಿಸಲಾಗಿತ್ತು. ಎಲ್ಲ ವೈದ್ಯಕೀಯ ತಪಾಸಣೆಗಳನ್ನು ನಡೆಸಿದ ನಂತರ ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿತ್ತು. </p>.<p>ಇದೀಗ ಅವರು ಜನಪ್ರಿಯ ಗೀತೆಯೊಂದಕ್ಕೆ ನರ್ತಿಸುವ ವಿಡಿಯೊ ಜನರ ಗಮನ ಸೆಳೆಯುತ್ತಿದೆ. ಅವರ ಲವಲವಿಕೆಯಿಂದ ಹುರುಪುಗೊಂಡ ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರ ರೋಗಿಗಳೂ ಹೆಜ್ಜೆ ಹಾಕಿದರು. ಒಬ್ಬ ನರ್ಸ್ ಮತ್ತು ಸಿಬ್ಬಂದಿ ಕೂಡ ಅವರೊಂದಿಗೆ ನರ್ತಿಸಿದ್ದಾರೆ. </p>.<p>‘ನಾನು ತಮ್ಮೆಲ್ಲರ ಪ್ರೀತಿ ವಿಶ್ವಾಸದಿಂದಾಗಿ ಇಷ್ಟು ದೂರ ಬಂದಿದ್ದೇನೆ’ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ. ಅವರು ಆಸ್ಪತ್ರೆಯ ನಿರ್ದೇಶಕ ಶೈಲೇಶ್ ಠಾಕೂರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. </p>.<p>ಕಾಂಬ್ಳಿ ಅವರು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>