<p><strong>ಬೆಂಗಳೂರು</strong>: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ನಡುವಣ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ.</p><p>ರಾತ್ರಿ 7ಕ್ಕೆ ಟಾಸ್ ಆಗಬೇಕಿತ್ತು. ಆದರೆ, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿಳಂಬವಾಗಿದೆ.</p><p>ಆರ್ಸಿಬಿ, ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳಲ್ಲಿ 8ರಲ್ಲಿ ಜಯ ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಬಾಕಿ ಮೂರು ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದರೂ, ಪ್ಲೇ ಆಫ್ ಸ್ಥಾನ ಖಾತ್ರಿಯಾಗಲಿದೆ. ಆದರೆ, ಕೆಕೆಆರ್ ಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ.</p><p>ಸ್ಥಿರ ಪ್ರದರ್ಶನ ನೀಡಲು ವಿಫಲವಾಗುತ್ತಿರುವ ಈ ತಂಡ ಆಡಿರುವ 12 ಪಂದ್ಯಗಳಲ್ಲಿ ತಲಾ ಐದು ಜಯ, ಸೋಲು ಕಂಡಿದೆ. ಉಳಿದೊಂದು ಪಂದ್ಯ ರದ್ದಾಗಿದ್ದು, ಒಟ್ಟು 11 ಪಾಯಿಂಟ್ಗಳನ್ನಷ್ಟೇ ಹೊಂದಿದೆ. ಹೀಗಾಗಿ, ಬಾಕಿ ಎರಡೂ ಪಂದ್ಯಗಳಲ್ಲಿ ಗೆದ್ದರಷ್ಟೇ, ಮುಂದಿನ ಹಂತಕ್ಕೇರಲು ಸಾಧ್ಯ.</p><p>ಒಂದು ವೇಳೆ, ಇಂದು ಪಂದ್ಯ ರದ್ದಾದರೆ, ರಜತ್ ಪಾಟೀದಾರ್ ನೇತೃತ್ವದ ಆರ್ಸಿಬಿ ಪ್ಲೇ ಆಫ್ಗೇರುವುದು ಬಹುತೇಕ ಖಚಿತವಾಗಲಿದೆ. ಆದರೆ, ಅಜಿಂಕ್ಯ ರಹಾನೆ ಬಳಗಕ್ಕೆ ಮುಂದಿನ ಹಂತದ ಬಾಗಿಲು ಬಂದ್ ಆಗಲಿದೆ.</p><p>ಭಾರತ–ಪಾಕಿಸ್ತಾನ ಸೇನಾ ಸಂಘರ್ಷದ ಕಾರಣ ಟೂರ್ನಿಯು ಒಂದು ವಾರ ಮುಂದೂಡಿಕೆಯಾಗಿತ್ತು. ಕದನ ವಿರಾಮ ಘೋಷಣೆ ಬಳಿಕ ಪುನರಾರಂಭಗೊಳ್ಳುತ್ತಿರುವ ಟೂರ್ನಿಯ ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವ ಈ ತಂಡಗಳೇ, ಉದ್ಘಾಟನಾ ಪಂದ್ಯದಲ್ಲೂ ಸೆಣಸಾಡಿದ್ದವು ಎಂಬುದು ವಿಶೇಷ.</p>.IPL 2025 | ಐಪಿಎಲ್ ಟಿ20 ಪಂದ್ಯದ ವೇಳೆ ಕೊಹ್ಲಿಯ 'ಟೆಸ್ಟ್ ಜೆರ್ಸಿ' ಮಾರಾಟ ಜೋರು!.IPL 2025 | ಆರ್ಸಿಬಿಗೆ ಪ್ಲೇಆಫ್ನತ್ತ ಚಿತ್ತ; ವಿರಾಟ್ ಮೇಲೆ ಅಭಿಮಾನಿಗಳ ಕಣ್ಣು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ನಡುವಣ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ.</p><p>ರಾತ್ರಿ 7ಕ್ಕೆ ಟಾಸ್ ಆಗಬೇಕಿತ್ತು. ಆದರೆ, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿಳಂಬವಾಗಿದೆ.</p><p>ಆರ್ಸಿಬಿ, ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳಲ್ಲಿ 8ರಲ್ಲಿ ಜಯ ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಬಾಕಿ ಮೂರು ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದರೂ, ಪ್ಲೇ ಆಫ್ ಸ್ಥಾನ ಖಾತ್ರಿಯಾಗಲಿದೆ. ಆದರೆ, ಕೆಕೆಆರ್ ಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ.</p><p>ಸ್ಥಿರ ಪ್ರದರ್ಶನ ನೀಡಲು ವಿಫಲವಾಗುತ್ತಿರುವ ಈ ತಂಡ ಆಡಿರುವ 12 ಪಂದ್ಯಗಳಲ್ಲಿ ತಲಾ ಐದು ಜಯ, ಸೋಲು ಕಂಡಿದೆ. ಉಳಿದೊಂದು ಪಂದ್ಯ ರದ್ದಾಗಿದ್ದು, ಒಟ್ಟು 11 ಪಾಯಿಂಟ್ಗಳನ್ನಷ್ಟೇ ಹೊಂದಿದೆ. ಹೀಗಾಗಿ, ಬಾಕಿ ಎರಡೂ ಪಂದ್ಯಗಳಲ್ಲಿ ಗೆದ್ದರಷ್ಟೇ, ಮುಂದಿನ ಹಂತಕ್ಕೇರಲು ಸಾಧ್ಯ.</p><p>ಒಂದು ವೇಳೆ, ಇಂದು ಪಂದ್ಯ ರದ್ದಾದರೆ, ರಜತ್ ಪಾಟೀದಾರ್ ನೇತೃತ್ವದ ಆರ್ಸಿಬಿ ಪ್ಲೇ ಆಫ್ಗೇರುವುದು ಬಹುತೇಕ ಖಚಿತವಾಗಲಿದೆ. ಆದರೆ, ಅಜಿಂಕ್ಯ ರಹಾನೆ ಬಳಗಕ್ಕೆ ಮುಂದಿನ ಹಂತದ ಬಾಗಿಲು ಬಂದ್ ಆಗಲಿದೆ.</p><p>ಭಾರತ–ಪಾಕಿಸ್ತಾನ ಸೇನಾ ಸಂಘರ್ಷದ ಕಾರಣ ಟೂರ್ನಿಯು ಒಂದು ವಾರ ಮುಂದೂಡಿಕೆಯಾಗಿತ್ತು. ಕದನ ವಿರಾಮ ಘೋಷಣೆ ಬಳಿಕ ಪುನರಾರಂಭಗೊಳ್ಳುತ್ತಿರುವ ಟೂರ್ನಿಯ ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವ ಈ ತಂಡಗಳೇ, ಉದ್ಘಾಟನಾ ಪಂದ್ಯದಲ್ಲೂ ಸೆಣಸಾಡಿದ್ದವು ಎಂಬುದು ವಿಶೇಷ.</p>.IPL 2025 | ಐಪಿಎಲ್ ಟಿ20 ಪಂದ್ಯದ ವೇಳೆ ಕೊಹ್ಲಿಯ 'ಟೆಸ್ಟ್ ಜೆರ್ಸಿ' ಮಾರಾಟ ಜೋರು!.IPL 2025 | ಆರ್ಸಿಬಿಗೆ ಪ್ಲೇಆಫ್ನತ್ತ ಚಿತ್ತ; ವಿರಾಟ್ ಮೇಲೆ ಅಭಿಮಾನಿಗಳ ಕಣ್ಣು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>