<p><strong>ನವದೆಹಲಿ:</strong> ತಮ್ಮನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡದ ಹಿನ್ನೆಲೆಯಲ್ಲಿ ಭಾರತ ಬ್ಯಾಡ್ಮಿಂಟನ್ ಅಸೋಸಿಯೇಷನ್ (ಬಿಎಐ) ವಿರುದ್ಧ ಕಿಡಿ ಕಾರಿದ್ದ ಆಟಗಾರ ಎಚ್.ಎಸ್.ಪ್ರಣಯ್ ಮಂಗಳವಾರ ಕ್ಷಮೆ ಯಾಚಿಸಿದ್ದಾರೆ. ಪ್ರಣಯ್ ಅವರ ಟೀಕೆಯನ್ನು ಅಶಿಸ್ತು ಎಂದು ಪರಿಗಣಿಸಿ ಬಿಎಐ, ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿತ್ತು.</p>.<p>ಆದರೆ ರಾಷ್ಟ್ರೀಯ ಬ್ಯಾಡ್ಮಿಂಟನ್ ತಂಡದ ಕೋಚ್ ಪುಲ್ಲೇಲ ಗೋಪಿಚಂದ್ ಅವರು ಅರ್ಜುನ ಪ್ರಶಸ್ತಿಗೆ ಪ್ರಣಯ್ ಅವರ ಹೆಸರು ಶಿಫಾರಸು ಮಾಡಿದ್ದರು.</p>.<p>ವಿಶ್ವದ 28ನೇ ಕ್ರಮಾಂಕದ ಆಟಗಾರ ಪ್ರಣಯ್, ಬಿಎಐ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕಾರಣಕ್ಕಾಗಿ ಹಾಗೂ ಹಿಂದಿನ ಕೆಲವು ಅಶಿಸ್ತಿನ ವರ್ತನೆಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಂಡಳಿ 15 ದಿನಗಳೊಳಗೆ ಉತ್ತರಿಸುವಂತೆ ಅವರಿಗೆ ನೋಟಿಸ್ ನೀಡಿತ್ತು.</p>.<p>ಬಿಎಐ ಅಧ್ಯಕ್ಷ ಹಿಮಂತ್ ಬಿಸ್ವಾಸ್ ಅವರು ಪ್ರಣಯ್ ಅವರ ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದಾರೆ.</p>.<p>‘ಇಂಥ ಘಟನೆ ನಡೆಯಬಾರದಿತ್ತು. ಪ್ರಣಯ್ ನಮ್ಮನ್ನು ಸಂಪರ್ಕಿಸಿ ಕ್ಷಮೆ ಕೋರಿದ್ದಾರೆ. ಆಟಗಾರರಿಗೆ ಯಾವುದೇ ವಿಷಯದ ಕುರಿತು ತಕರಾರುಗಳಿದ್ದರೆ ಇನ್ನು ಮುಂದೆ ಮಂಡಳಿಯ ಗಮನಕ್ಕೆ ತರುವ ವಿಶ್ವಾಸವಿದೆ’ ಎಂದು ಬಿಎಐ ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ತಿಳಿಸಿದ್ದಾರೆ.</p>.<p>ಜೂನ್ 2ರಂದು ಬಿಎಐ, ಆಟಗಾರರಾದ ಸಾತ್ವಿಕ್ ಸಾಯಿರಾಜ್ ರಣಕಿ ರೆಡ್ಡಿ, ಚಿರಾಗ್ ಶೆಟ್ಟಿ ಹಾಗೂ ಸಮೀರ್ ವರ್ಮಾ ಅವರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಮ್ಮನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡದ ಹಿನ್ನೆಲೆಯಲ್ಲಿ ಭಾರತ ಬ್ಯಾಡ್ಮಿಂಟನ್ ಅಸೋಸಿಯೇಷನ್ (ಬಿಎಐ) ವಿರುದ್ಧ ಕಿಡಿ ಕಾರಿದ್ದ ಆಟಗಾರ ಎಚ್.ಎಸ್.ಪ್ರಣಯ್ ಮಂಗಳವಾರ ಕ್ಷಮೆ ಯಾಚಿಸಿದ್ದಾರೆ. ಪ್ರಣಯ್ ಅವರ ಟೀಕೆಯನ್ನು ಅಶಿಸ್ತು ಎಂದು ಪರಿಗಣಿಸಿ ಬಿಎಐ, ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿತ್ತು.</p>.<p>ಆದರೆ ರಾಷ್ಟ್ರೀಯ ಬ್ಯಾಡ್ಮಿಂಟನ್ ತಂಡದ ಕೋಚ್ ಪುಲ್ಲೇಲ ಗೋಪಿಚಂದ್ ಅವರು ಅರ್ಜುನ ಪ್ರಶಸ್ತಿಗೆ ಪ್ರಣಯ್ ಅವರ ಹೆಸರು ಶಿಫಾರಸು ಮಾಡಿದ್ದರು.</p>.<p>ವಿಶ್ವದ 28ನೇ ಕ್ರಮಾಂಕದ ಆಟಗಾರ ಪ್ರಣಯ್, ಬಿಎಐ ಕ್ರಮದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕಾರಣಕ್ಕಾಗಿ ಹಾಗೂ ಹಿಂದಿನ ಕೆಲವು ಅಶಿಸ್ತಿನ ವರ್ತನೆಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಂಡಳಿ 15 ದಿನಗಳೊಳಗೆ ಉತ್ತರಿಸುವಂತೆ ಅವರಿಗೆ ನೋಟಿಸ್ ನೀಡಿತ್ತು.</p>.<p>ಬಿಎಐ ಅಧ್ಯಕ್ಷ ಹಿಮಂತ್ ಬಿಸ್ವಾಸ್ ಅವರು ಪ್ರಣಯ್ ಅವರ ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದಾರೆ.</p>.<p>‘ಇಂಥ ಘಟನೆ ನಡೆಯಬಾರದಿತ್ತು. ಪ್ರಣಯ್ ನಮ್ಮನ್ನು ಸಂಪರ್ಕಿಸಿ ಕ್ಷಮೆ ಕೋರಿದ್ದಾರೆ. ಆಟಗಾರರಿಗೆ ಯಾವುದೇ ವಿಷಯದ ಕುರಿತು ತಕರಾರುಗಳಿದ್ದರೆ ಇನ್ನು ಮುಂದೆ ಮಂಡಳಿಯ ಗಮನಕ್ಕೆ ತರುವ ವಿಶ್ವಾಸವಿದೆ’ ಎಂದು ಬಿಎಐ ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ತಿಳಿಸಿದ್ದಾರೆ.</p>.<p>ಜೂನ್ 2ರಂದು ಬಿಎಐ, ಆಟಗಾರರಾದ ಸಾತ್ವಿಕ್ ಸಾಯಿರಾಜ್ ರಣಕಿ ರೆಡ್ಡಿ, ಚಿರಾಗ್ ಶೆಟ್ಟಿ ಹಾಗೂ ಸಮೀರ್ ವರ್ಮಾ ಅವರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>