ನವದೆಹಲಿ: ತಮ್ಮನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡದ ಹಿನ್ನೆಲೆಯಲ್ಲಿ ಭಾರತ ಬ್ಯಾಡ್ಮಿಂಟನ್ ಅಸೋಸಿಯೇಷನ್ (ಬಿಎಐ) ವಿರುದ್ಧ ಕಿಡಿ ಕಾರಿದ್ದ ಆಟಗಾರ ಎಚ್.ಎಸ್.ಪ್ರಣಯ್ ಮಂಗಳವಾರ ಕ್ಷಮೆ ಯಾಚಿಸಿದ್ದಾರೆ. ಪ್ರಣಯ್ ಅವರ ಟೀಕೆಯನ್ನು ಅಶಿಸ್ತು ಎಂದು ಪರಿಗಣಿಸಿ ಬಿಎಐ, ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿತ್ತು.