ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದಲ್ಲಿ ಪ್ರಸಿದ್ಧ ಕೃಷ್ಣ ಅವರನ್ನು ಕಾಯ್ದಿರಿಸಿದ ಆಟಗಾರನನ್ನಾಗಿ ಸೇರಿಸಿಕೊಳ್ಳಲಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಂದರ್ಭದಲ್ಲಿ ಪ್ರಸಿದ್ಧ ಮತ್ತು ಮಿಶ್ರಾಗೆ ಕೋವಿಡ್ ಸೋಂಕು ಉಂಟಾಗಿತ್ತು. ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ಮೇ ನಾಲ್ಕರಂದು ಅಮಿತ್ ಮಿಶ್ರಾ ಅವರಿಗೆ ಕೋವಿಡ್ ಇರುವುದು ಗೊತ್ತಾಗಿತ್ತು. ಮೇ ಎಂಟರಂದು ಪ್ರಸಿದ್ಧ ಕೃಷ್ಣ ಅವರ ವರದಿ ಪಾಸಿಟಿವ್ ಬಂದಿತ್ತು.