<p><strong>ಲಂಡನ್:</strong> ಕನ್ನಡಿಗ ಪ್ರಸಿದ್ಧ ಕೃಷ್ಣ 'ಮ್ಯಾಜಿಕ್ ಬಾಲ್' ಎಸೆಯುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಪ್ರಶಂಶಿಸಿದ್ದಾರೆ.</p><p>ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಪಂದ್ಯ ಭಾರತದ ಕೈಯಿಂದ ಜಾರಿತ್ತು ಎನ್ನುವಷ್ಟರಲ್ಲಿ ಎರಡು ಪ್ರಮುಖ ವಿಕೆಟ್ಗಳನ್ನು ಕಬಳಿಸಿದ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ ಪಂದ್ಯಕ್ಕೆ ಮಹತ್ವದ ತಿರುವು ನೀಡುವಲ್ಲಿ ಯಶಸ್ವಿಯಾಗಿದ್ದರು. </p><p>ಮೊದಲು ಜೇಕಬ್ ಬೆಥೆಲ್ ಕ್ಲೀನ್ ಬೌಲ್ಡ್ ಮಾಡಿದ ಪ್ರಸಿದ್ಧ ಬಳಿಕ ಶತಕ ಗಳಿಸಿ ಕ್ರೀಸಿನಲ್ಲಿ ನೆಲೆಯೂರಿ ನಿಂತಿದ್ದ ಜೋ ರೂಟ್ ಅವರನ್ನು ಅದ್ಭುತ ಎಸೆತದ ಮೂಲಕ ಪೆವಿಲಿಯನ್ಗೆ ಅಟ್ಟಿದರು. ಇದಕ್ಕೂ ಮೊದಲು ಬೆನ್ ಡಕೆಟ್ ವಿಕೆಟ್ ಸಹ ಪಡೆದಿದ್ದರು. </p>.<p>ಇಂಗ್ಲೆಂಡ್ ಗೆಲುವಿಗೆ ಇನ್ನು ನಾಲ್ಕು ವಿಕೆಟ್ ಇರುವಂತೆಯೇ 35 ರನ್ ಮಾತ್ರ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸಿದ್ಧ ಮಗದೊಮ್ಮೆ ಮೋಡಿ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಮೊದಲ ಇನಿಂಗ್ಸ್ನಲ್ಲಿ ಪ್ರಸಿದ್ಧ 62 ರನ್ನಿಗೆ ನಾಲ್ಕು ವಿಕೆಟ್ ಪಡೆದಿದ್ದರು. </p><p>'ಸಿರಾಜ್ ಅವರಂತೆಯೇ ಪ್ರಸಿದ್ಧ ಕೂಡ ಈ ಪ್ರವಾಸದಲ್ಲಿ ಆತ್ಮವಿಶ್ವಾಸವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಥಮ ಟೆಸ್ಟ್ನಿಂದ ಇಲ್ಲಿಯವರೆಗೆ ಅವರ ಲೈನ್, ಲೆನ್ತ್ ಹಾಗೂ ಸ್ಥಿರತೆ ಗಮನಿಸಿದರೆ ಬಹಳಷ್ಟು ಸುಧಾರಣೆ ಕಂಡುಬಂದಿದೆ. ಅವರು ಭಾರತಕ್ಕೆ ಉತ್ತಮ ಟೆಸ್ಟ್ ಬೌಲರ್ ಆಗಬಲ್ಲರು ಎಂದು ನಾನು ಭಾವಿಸುತ್ತೇನೆ' ಎಂದು ಮಾರ್ಕೆಲ್ ಹೇಳಿದ್ದಾರೆ. </p><p>'ಪ್ರಸಿದ್ಧ ಅವರಿಗೆ ಹೆಚ್ಚಿನ ಆತ್ಮವಿಶ್ವಾಸ ತುಂಬಬೇಕಿದೆ. ಹೆಚ್ಚುವರಿ ಬೌನ್ಸ್ ಹಾಗೂ ವೇಗದೊಂದಿಗೆ ಮ್ಯಾಜಿಕ್ ಬಾಲ್ ಎಸೆಯುವ ಸಾಮರ್ಥ್ಯ ಹೊಂದಿದ್ದಾರೆ' ಎಂದು ಅವರು ಉಲ್ಲೇಖಿಸಿದ್ದಾರೆ. </p>. <p>ಮತ್ತೊಂದೆಡೆ ಎಲ್ಲ ಐದು ಟೆಸ್ಟ್ ಪಂದ್ಯಗಳಲ್ಲಿ ಭಾರತದ ಬೌಲಿಂಗ್ ವಿಭಾಗವನ್ನು ಮುನ್ನಡೆಸಿರುವ ಮೊಹಮ್ಮದ್ ಸಿರಾಜ್ ಬಗ್ಗೆಯೂ ಮಾರ್ಕೆಲ್ ಗುಣಗಾನ ಮಾಡಿದ್ದಾರೆ. 'ಸಿರಾಜ್ ಭಾರತಕ್ಕಾಗಿ ಆಡುವುದನ್ನು ಇಷ್ಟಪಡುತ್ತಾರೆ. ಸಿರಾಜ್ ಪ್ರದರ್ಶನವು ನನ್ನಲ್ಲಿ ಅಚ್ಚರಿಯನ್ನುಂಟು ಮಾಡಿಲ್ಲ' ಎಂದು ಹೇಳಿದ್ದಾರೆ. </p><p>ಕೆಲಸದೊತ್ತಡ ಕುರಿತು ಪ್ರತಿಕ್ರಿಯಿಸಿದ ಮಾರ್ಕೆಲ್, 'ಐದನೇ ಪಂದ್ಯದ ಆರಂಭಕ್ಕೂ ಮುನ್ನ ಬೌಲರ್ಗಳ ದೈಹಿಕ ಹಾಗೂ ಮಾನಸಿಕ ಒತ್ತಡದ ಕುರಿತು ಕೇಳಲಾಗಿತ್ತು. ಆಗ ಸ್ವತಃ ಸಿರಾಜ್ ಅವರೇ ನಾನು ಈ ಪಂದ್ಯವನ್ನು ಆಡಲು ಬಯಸುತ್ತೇನೆ. ಅವರ ಮನೋಭಾವನೆ ನಿಜಕ್ಕೂ ಅದ್ಭುತವಾಗಿದೆ' ಎಂದು ಹೇಳಿದ್ದಾರೆ. </p>.ಮೊಹಮ್ಮದ್ ಸಿರಾಜ್ ನೈಜ ಹೋರಾಟಗಾರ, ತಮ್ಮ ಸರ್ವಸ್ವವನ್ನು ಅರ್ಪಿಸುತ್ತಾರೆ: ರೂಟ್.Joe Root: 39ನೇ ಟೆಸ್ಟ್ ಶತಕ;ಸಂಗಕ್ಕರ ಹಿಂದಿಕ್ಕಿದ ರೂಟ್ 4ನೇ ಸ್ಥಾನಕ್ಕೆ ಬಡ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್:</strong> ಕನ್ನಡಿಗ ಪ್ರಸಿದ್ಧ ಕೃಷ್ಣ 'ಮ್ಯಾಜಿಕ್ ಬಾಲ್' ಎಸೆಯುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಪ್ರಶಂಶಿಸಿದ್ದಾರೆ.</p><p>ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಪಂದ್ಯ ಭಾರತದ ಕೈಯಿಂದ ಜಾರಿತ್ತು ಎನ್ನುವಷ್ಟರಲ್ಲಿ ಎರಡು ಪ್ರಮುಖ ವಿಕೆಟ್ಗಳನ್ನು ಕಬಳಿಸಿದ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ ಪಂದ್ಯಕ್ಕೆ ಮಹತ್ವದ ತಿರುವು ನೀಡುವಲ್ಲಿ ಯಶಸ್ವಿಯಾಗಿದ್ದರು. </p><p>ಮೊದಲು ಜೇಕಬ್ ಬೆಥೆಲ್ ಕ್ಲೀನ್ ಬೌಲ್ಡ್ ಮಾಡಿದ ಪ್ರಸಿದ್ಧ ಬಳಿಕ ಶತಕ ಗಳಿಸಿ ಕ್ರೀಸಿನಲ್ಲಿ ನೆಲೆಯೂರಿ ನಿಂತಿದ್ದ ಜೋ ರೂಟ್ ಅವರನ್ನು ಅದ್ಭುತ ಎಸೆತದ ಮೂಲಕ ಪೆವಿಲಿಯನ್ಗೆ ಅಟ್ಟಿದರು. ಇದಕ್ಕೂ ಮೊದಲು ಬೆನ್ ಡಕೆಟ್ ವಿಕೆಟ್ ಸಹ ಪಡೆದಿದ್ದರು. </p>.<p>ಇಂಗ್ಲೆಂಡ್ ಗೆಲುವಿಗೆ ಇನ್ನು ನಾಲ್ಕು ವಿಕೆಟ್ ಇರುವಂತೆಯೇ 35 ರನ್ ಮಾತ್ರ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸಿದ್ಧ ಮಗದೊಮ್ಮೆ ಮೋಡಿ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಮೊದಲ ಇನಿಂಗ್ಸ್ನಲ್ಲಿ ಪ್ರಸಿದ್ಧ 62 ರನ್ನಿಗೆ ನಾಲ್ಕು ವಿಕೆಟ್ ಪಡೆದಿದ್ದರು. </p><p>'ಸಿರಾಜ್ ಅವರಂತೆಯೇ ಪ್ರಸಿದ್ಧ ಕೂಡ ಈ ಪ್ರವಾಸದಲ್ಲಿ ಆತ್ಮವಿಶ್ವಾಸವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಥಮ ಟೆಸ್ಟ್ನಿಂದ ಇಲ್ಲಿಯವರೆಗೆ ಅವರ ಲೈನ್, ಲೆನ್ತ್ ಹಾಗೂ ಸ್ಥಿರತೆ ಗಮನಿಸಿದರೆ ಬಹಳಷ್ಟು ಸುಧಾರಣೆ ಕಂಡುಬಂದಿದೆ. ಅವರು ಭಾರತಕ್ಕೆ ಉತ್ತಮ ಟೆಸ್ಟ್ ಬೌಲರ್ ಆಗಬಲ್ಲರು ಎಂದು ನಾನು ಭಾವಿಸುತ್ತೇನೆ' ಎಂದು ಮಾರ್ಕೆಲ್ ಹೇಳಿದ್ದಾರೆ. </p><p>'ಪ್ರಸಿದ್ಧ ಅವರಿಗೆ ಹೆಚ್ಚಿನ ಆತ್ಮವಿಶ್ವಾಸ ತುಂಬಬೇಕಿದೆ. ಹೆಚ್ಚುವರಿ ಬೌನ್ಸ್ ಹಾಗೂ ವೇಗದೊಂದಿಗೆ ಮ್ಯಾಜಿಕ್ ಬಾಲ್ ಎಸೆಯುವ ಸಾಮರ್ಥ್ಯ ಹೊಂದಿದ್ದಾರೆ' ಎಂದು ಅವರು ಉಲ್ಲೇಖಿಸಿದ್ದಾರೆ. </p>. <p>ಮತ್ತೊಂದೆಡೆ ಎಲ್ಲ ಐದು ಟೆಸ್ಟ್ ಪಂದ್ಯಗಳಲ್ಲಿ ಭಾರತದ ಬೌಲಿಂಗ್ ವಿಭಾಗವನ್ನು ಮುನ್ನಡೆಸಿರುವ ಮೊಹಮ್ಮದ್ ಸಿರಾಜ್ ಬಗ್ಗೆಯೂ ಮಾರ್ಕೆಲ್ ಗುಣಗಾನ ಮಾಡಿದ್ದಾರೆ. 'ಸಿರಾಜ್ ಭಾರತಕ್ಕಾಗಿ ಆಡುವುದನ್ನು ಇಷ್ಟಪಡುತ್ತಾರೆ. ಸಿರಾಜ್ ಪ್ರದರ್ಶನವು ನನ್ನಲ್ಲಿ ಅಚ್ಚರಿಯನ್ನುಂಟು ಮಾಡಿಲ್ಲ' ಎಂದು ಹೇಳಿದ್ದಾರೆ. </p><p>ಕೆಲಸದೊತ್ತಡ ಕುರಿತು ಪ್ರತಿಕ್ರಿಯಿಸಿದ ಮಾರ್ಕೆಲ್, 'ಐದನೇ ಪಂದ್ಯದ ಆರಂಭಕ್ಕೂ ಮುನ್ನ ಬೌಲರ್ಗಳ ದೈಹಿಕ ಹಾಗೂ ಮಾನಸಿಕ ಒತ್ತಡದ ಕುರಿತು ಕೇಳಲಾಗಿತ್ತು. ಆಗ ಸ್ವತಃ ಸಿರಾಜ್ ಅವರೇ ನಾನು ಈ ಪಂದ್ಯವನ್ನು ಆಡಲು ಬಯಸುತ್ತೇನೆ. ಅವರ ಮನೋಭಾವನೆ ನಿಜಕ್ಕೂ ಅದ್ಭುತವಾಗಿದೆ' ಎಂದು ಹೇಳಿದ್ದಾರೆ. </p>.ಮೊಹಮ್ಮದ್ ಸಿರಾಜ್ ನೈಜ ಹೋರಾಟಗಾರ, ತಮ್ಮ ಸರ್ವಸ್ವವನ್ನು ಅರ್ಪಿಸುತ್ತಾರೆ: ರೂಟ್.Joe Root: 39ನೇ ಟೆಸ್ಟ್ ಶತಕ;ಸಂಗಕ್ಕರ ಹಿಂದಿಕ್ಕಿದ ರೂಟ್ 4ನೇ ಸ್ಥಾನಕ್ಕೆ ಬಡ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>