<p><strong>ಮುಲ್ಲನಪುರ:</strong> ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಬ್ಯಾಟರ್ ಪ್ರಿಯಾಂಶ್ ಆರ್ಯ ಅವರು ಸಿಕ್ಸರ್ ಬಾರಿಸಿದ ಚೆಂಡು ಹಣೆಗೆ ಬಿದ್ದು ಅಭಿಮಾನಿಯೊಬ್ಬ ಗಾಯಗೊಂಡಿದ್ದರು. ಇದೀಗ ಪಂಜಾಬ್ ಕಿಂಗ್ಸ್ ತಂಡವು ಗಾಯಗೊಂಡ ಅಭಿಮಾನಿಯ ಯೋಗ ಕ್ಷೇಮವನ್ನು ವಿಡಿಯೊ ಕರೆ ಮೂಲಕ ವಿಚಾರಿಸಿದೆ.</p><p>ಪಂಜಾಬ್ ಕಿಂಗ್ಸ್ ತಂಡವು ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೊವನ್ನು ಹಂಚಿಕೊಂಡಿದೆ. ವಿಡಿಯೊದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸಹ ಮಾಲೀಕರಾದ ಪ್ರೀತಿ ಜಿಂಟಾ ಹಾಗೂ ಪ್ರಿಯಾಂಶ್ ಆರ್ಯ ಗಾಯಗೊಂಡಿದ್ದ ಅಭಿಮಾನಿ ಕ್ರಿಶನ್ ಚಂದ್ ಅವರಿಗೆ ಕ್ಷಮೆಯಾಚಿಸಿದ್ದಾರೆ.</p>.<p>ಇದೀಗ ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದೆ. ಬ್ಯಾಟಿಂಗ್ ವೇಳೆ ಚೆಂಡು ವೇಗವಾಗಿ ಕ್ರಿಶನ್ ಚಂದ್ ಅವರ ಹಣೆಗೆ ಬಡಿಯಿತು. ಇದರ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಕ್ರೀಡಾಂಗಣದ ಸಿಬ್ಬಂದಿ ವೈದ್ಯಕೀಯ ನೆರವನ್ನು ನೀಡಿದ್ದರು.</p><p>ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಕ್ರಿಶನ್ ಚಂದ್ ಅವರ ಆರೋಗ್ಯವನ್ನು ವಿಚಾರಿಸಿರುವುದಲ್ಲದೆ, ಅವರನ್ನು ಮುಂದಿನ ಪಂದ್ಯಕ್ಕೆ ಅತಿಥಿಯಾಗಿ ಆಹ್ವಾನಿಸಿದೆ. ವಿವಿಐಪಿ ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುವುದು ಎಂದು ತಂಡದ ಸಹ ಮಾಲೀಕರಾದ ಪ್ರೀತಿ ಜಿಂಟಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಲ್ಲನಪುರ:</strong> ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಬ್ಯಾಟರ್ ಪ್ರಿಯಾಂಶ್ ಆರ್ಯ ಅವರು ಸಿಕ್ಸರ್ ಬಾರಿಸಿದ ಚೆಂಡು ಹಣೆಗೆ ಬಿದ್ದು ಅಭಿಮಾನಿಯೊಬ್ಬ ಗಾಯಗೊಂಡಿದ್ದರು. ಇದೀಗ ಪಂಜಾಬ್ ಕಿಂಗ್ಸ್ ತಂಡವು ಗಾಯಗೊಂಡ ಅಭಿಮಾನಿಯ ಯೋಗ ಕ್ಷೇಮವನ್ನು ವಿಡಿಯೊ ಕರೆ ಮೂಲಕ ವಿಚಾರಿಸಿದೆ.</p><p>ಪಂಜಾಬ್ ಕಿಂಗ್ಸ್ ತಂಡವು ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೊವನ್ನು ಹಂಚಿಕೊಂಡಿದೆ. ವಿಡಿಯೊದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸಹ ಮಾಲೀಕರಾದ ಪ್ರೀತಿ ಜಿಂಟಾ ಹಾಗೂ ಪ್ರಿಯಾಂಶ್ ಆರ್ಯ ಗಾಯಗೊಂಡಿದ್ದ ಅಭಿಮಾನಿ ಕ್ರಿಶನ್ ಚಂದ್ ಅವರಿಗೆ ಕ್ಷಮೆಯಾಚಿಸಿದ್ದಾರೆ.</p>.<p>ಇದೀಗ ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದೆ. ಬ್ಯಾಟಿಂಗ್ ವೇಳೆ ಚೆಂಡು ವೇಗವಾಗಿ ಕ್ರಿಶನ್ ಚಂದ್ ಅವರ ಹಣೆಗೆ ಬಡಿಯಿತು. ಇದರ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಕ್ರೀಡಾಂಗಣದ ಸಿಬ್ಬಂದಿ ವೈದ್ಯಕೀಯ ನೆರವನ್ನು ನೀಡಿದ್ದರು.</p><p>ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಕ್ರಿಶನ್ ಚಂದ್ ಅವರ ಆರೋಗ್ಯವನ್ನು ವಿಚಾರಿಸಿರುವುದಲ್ಲದೆ, ಅವರನ್ನು ಮುಂದಿನ ಪಂದ್ಯಕ್ಕೆ ಅತಿಥಿಯಾಗಿ ಆಹ್ವಾನಿಸಿದೆ. ವಿವಿಐಪಿ ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುವುದು ಎಂದು ತಂಡದ ಸಹ ಮಾಲೀಕರಾದ ಪ್ರೀತಿ ಜಿಂಟಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>