ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ: ಇಬ್ಬರು ಬೈಕ್ ಸವಾರರ ಸಾವು

Last Updated 31 ಮಾರ್ಚ್ 2018, 19:16 IST
ಅಕ್ಷರ ಗಾತ್ರ

ಹೊಸಕೋಟೆ: ಪಟ್ಟಣ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಸೂಲಿಬೆಲೆ ರಸ್ತೆಯ ಆಲಪ್ಪನಹಳ್ಳಿ ಬಳಿ ಬೈಕ್‌ಗೆ ಟೆಂಪೊ ಗುದ್ದಿದ್ದರಿಂದ ಸವಾರ ಚನ್ನಕೇಶವ (30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಲ್ಲಿನ ಲಕ್ಕೊಂಡಹಳ್ಳಿ ನಿವಾಸಿಯಾದ ಅವರು ಕೋಳಿ ಅಂಗಡಿ ಇಟ್ಟುಕೊಂಡಿದ್ದರು. ಉಪ್ಪಾರಹಳ್ಳಿ ಬಳಿಯ ದೇವಸ್ಥಾನಕ್ಕೆ ಹೋಗಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ ಎಂದು ಹೊಸಕೋಟೆ ಪೊಲೀಸರು ತಿಳಿಸಿದರು.

ಕೋಲಾರ ರಸ್ತೆಯ ದಂಡುಪಾಳ್ಯ ಗೇಟ್ ಬಳಿ ಲಾರಿಗೆ ಬೈಕ್ ಗುದ್ದಿದ್ದರಿಂದ ಸವಾರ ವಹಾಬ್ ಹುಸೇನ್ (25) ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಜಿಯಾ ವುಲ್ಲಾಖಾನ್ ತಲೆಗೆ ತೀವ್ರ ಪೆಟ್ಟು ಬಿದ್ದು, ನಗರದ ನಿಮ್ಹಾಣ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀನಿವಾಸಪುರದ ನಿವಾಸಿಗಳಾದ ಅವರು ಕೆಲಸದ ನಿಮಿತ್ತ ಬೆಂಗಳೂರಿಗೆ ಬೈಕ್‌ನಲ್ಲಿ ಬರುತ್ತಿದ್ದರು. ಲಾರಿ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT