ಮುಂಬೈ: ಪಾಸ್ ಇಲ್ಲದೆ ಮಹಾರಾಷ್ಟ್ರದಿಂದ ಗೋವಾಗೆ ಕಾರಿನಲ್ಲಿ ಪಯಣಿಸಿದ ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್ಮನ್ ಪೃಥ್ವಿ ಶಾ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬುಧವಾರ ಅಂಬೋಲಿಯಲ್ಲಿ ಅವರು ಪೊಲೀಸರ ಕಣ್ಣಿಗೆ ಬಿದ್ದಿದ್ದು ಸಮರ್ಪಕ ಪಾಸ್ ಪಡೆದ ನಂತರ ಪ್ರಯಾಣ ಮುಂದುವರಿಸಿದ್ದಾರೆ.