<p><strong>ಪುಣೆ:</strong> ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡವು ಕಪ್ ಗೆದ್ದಿದ್ದಕ್ಕೆ ಪಟಾಕಿ ಸಿಡಿಸಿ ವಿಜಯೋತ್ಸವ ಮಾಡಿದ ನಲವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ.</p><p>ಮಂಗಳವಾರ ರಾತ್ರಿ ಐಪಿಎಲ್ ಫೈನಲ್ ಫಲಿತಾಂಶದ ನಂತರ ಪುಣೆಯ ಡೆಕ್ಕನ್ ಪೊಲೀಸ್ ಠಾಣೆಯ ವ್ಯಾಪ್ತಿಯ ನಾಮಧಾರ್ ಗೋಪಾಲ ಕೃಷ್ಣ ಗೋಕಲೆ ಚೌಕ್ ಬಳಿ ಕೆಲವರು ಅನುಮತಿ ಪಡೆಯದೇ ವಿಜಯೋತ್ಸವ ಆಚರಿಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.</p>.<p>ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಪಟಾಕಿ ಸಿಡಿಸಿ ಮಾಲಿನ್ಯಕ್ಕೆ ಕಾರಣವಾಗಿದ್ದು ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಆರೋಪಗಳನ್ನು ಮಹಾರಾಷ್ಟ್ರ ಪೊಲೀಸ್ ಕಾಯ್ದೆ ಅಡಿ ಆರ್ಸಿಬಿ ಅಭಿಮಾನಿಗಳ ವಿರುದ್ಧ ಹೊರಿಸಲಾಗಿದೆ.</p><p>ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು ಅನುಮತಿ ಪಡೆಯದೇ ವಿಜಯೋತ್ಸವ ಆಚರಿಸಿರುವ ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಜೂನ್ 3ರಂದು ನಡೆದಿದ್ದ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡವು, ಪಿಬಿಕೆಎಸ್ ವಿರುದ್ಧ ಆರು ರನ್ಗಳಿಂದ ಜಯಿಸಿ ಕಪ್ ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದಿದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದರು.</p>.ನಿನ್ನೆ ನಮ್ಮ ಮೆಟ್ರೊದಲ್ಲಿ ಭಾರಿ ಜನ ಸಂಚಾರ! ‘RCB ಸಂಭ್ರಮ’ಕ್ಕೆ ಬಂದವರೇ ಹೆಚ್ಚು.ಏನು ಭದ್ರತೆ ಕೈಗೊಂಡಿದ್ರಿ? 'RCB ಕಾಲ್ತುಳಿತ'ದ ಬಗ್ಗೆ ಹೈಕೋರ್ಟ್ ಪಿಐಎಲ್ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡವು ಕಪ್ ಗೆದ್ದಿದ್ದಕ್ಕೆ ಪಟಾಕಿ ಸಿಡಿಸಿ ವಿಜಯೋತ್ಸವ ಮಾಡಿದ ನಲವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ.</p><p>ಮಂಗಳವಾರ ರಾತ್ರಿ ಐಪಿಎಲ್ ಫೈನಲ್ ಫಲಿತಾಂಶದ ನಂತರ ಪುಣೆಯ ಡೆಕ್ಕನ್ ಪೊಲೀಸ್ ಠಾಣೆಯ ವ್ಯಾಪ್ತಿಯ ನಾಮಧಾರ್ ಗೋಪಾಲ ಕೃಷ್ಣ ಗೋಕಲೆ ಚೌಕ್ ಬಳಿ ಕೆಲವರು ಅನುಮತಿ ಪಡೆಯದೇ ವಿಜಯೋತ್ಸವ ಆಚರಿಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.</p>.<p>ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಪಟಾಕಿ ಸಿಡಿಸಿ ಮಾಲಿನ್ಯಕ್ಕೆ ಕಾರಣವಾಗಿದ್ದು ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಆರೋಪಗಳನ್ನು ಮಹಾರಾಷ್ಟ್ರ ಪೊಲೀಸ್ ಕಾಯ್ದೆ ಅಡಿ ಆರ್ಸಿಬಿ ಅಭಿಮಾನಿಗಳ ವಿರುದ್ಧ ಹೊರಿಸಲಾಗಿದೆ.</p><p>ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು ಅನುಮತಿ ಪಡೆಯದೇ ವಿಜಯೋತ್ಸವ ಆಚರಿಸಿರುವ ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಜೂನ್ 3ರಂದು ನಡೆದಿದ್ದ ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡವು, ಪಿಬಿಕೆಎಸ್ ವಿರುದ್ಧ ಆರು ರನ್ಗಳಿಂದ ಜಯಿಸಿ ಕಪ್ ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದಿದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದರು.</p>.ನಿನ್ನೆ ನಮ್ಮ ಮೆಟ್ರೊದಲ್ಲಿ ಭಾರಿ ಜನ ಸಂಚಾರ! ‘RCB ಸಂಭ್ರಮ’ಕ್ಕೆ ಬಂದವರೇ ಹೆಚ್ಚು.ಏನು ಭದ್ರತೆ ಕೈಗೊಂಡಿದ್ರಿ? 'RCB ಕಾಲ್ತುಳಿತ'ದ ಬಗ್ಗೆ ಹೈಕೋರ್ಟ್ ಪಿಐಎಲ್ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>