<p><strong>ಮೊಹಾಲಿ (ಪಿಟಿಐ): </strong>ಆಟಗಾರರ ಗಾಯದ ಸಮಸ್ಯೆ ಮತ್ತು ಪ್ರಮುಖ ವಿದೇಶಿ ಆಟಗಾರರ ಅಲಭ್ಯತೆಯಿಂದ ಹಿನ್ನಡೆ ಅನುಭವಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಶನಿವಾರ ಎದುರಾಗಲಿವೆ.</p>.<p>ಇವೆರಡು ತಂಡಗಳು ಈಚೆಗಿನ ಕೆಲ ಟೂರ್ನಿಗಳಲ್ಲಿ ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದ್ದವು. ಕಳೆದ ಆವೃತ್ತಿಯಲ್ಲಿ ಪಂಜಾಬ್ ಆರನೇ ಸ್ಥಾನ ಪಡೆದುಕೊಂಡಿದ್ದರೆ, ಕೆಕೆಆರ್ ಏಳನೇ ಸ್ಥಾನ ಗಳಿಸಿತ್ತು.</p>.<p>ಈ ಬಾರಿ ಎರಡೂ ತಂಡಗಳು ನೂತನ ನಾಯಕರ ನೇತೃತ್ವದಲ್ಲಿ ಆಡಲಿವೆ. ಪಂಜಾಬ್ ತಂಡವನ್ನು ಶಿಖರ್ ಧವನ್ ಹಾಗೂ ಕೋಲ್ಕತ್ತ ತಂಡವನ್ನು ನಿತೀಶ್ ರಾಣಾ ಮುನ್ನಡೆಸಲಿದ್ದಾರೆ. ಶ್ರೇಯಸ್ ಅಯ್ಯರ್ ಗಾಯಗೊಂಡಿರುವ ಕಾರಣ ನಿತೀಶ್ಗೆ ನಾಯಕತ್ವದ ಹೊಣೆ ದೊರೆತಿದೆ.</p>.<p>ಜಾನಿ ಬೆಸ್ಟೊ ಅವರು ಗಾಯದ ಕಾರಣ ಟೂರ್ನಿಯಿಂದ ಹೊರಬಿದ್ದಿರುವುದು ಪಂಜಾಬ್ಗೆ ದೊಡ್ಡ ಹಿನ್ನಡೆ ಉಂಟುಮಾಡಿದೆ. ಲಿಯಾಮ್ ಲಿವಿಂಗ್ಸ್ಟೋನ್, ಕಗಿಸೊ ರಬಾಡ ಅವರ ಅನುಪಸ್ಥಿತಿ ಕೂಡಾ ಮೊದಲ ಪಂದ್ಯದಲ್ಲಿ ಕಾಡಲಿದೆ.</p>.<p>ಇದರಿಂದ ಆಲ್ರೌಂಡರ್ ಸ್ಯಾಮ್ ಕರನ್ ಮೇಲಿನ ಹೊರೆ ಹೆಚ್ಚಿದೆ. ಬೆಸ್ಟೊ ಬದಲು ತಂಡವನ್ನು ಸೇರಿರುವ ಮ್ಯಾಥ್ಯೂ ಶಾರ್ಟ್ ಅವರು ಧವನ್ ಜತೆ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.</p>.<p>ಕೆಕೆಆರ್ ತಂಡಕ್ಕೂ ಪ್ರಮುಖ ಆಟಗಾರರ ಅಲಭ್ಯತೆ ಕಾಡುತ್ತಿದೆ. ಬೆನ್ನುನೋವಿನ ಕಾರಣ ಶ್ರೇಯಸ್ ಅವರು ಇಡೀ ಟೂರ್ನಿಯಲ್ಲಿ ಆಡುವುದು ಅನುಮಾನ. ಬಾಂಗ್ಲಾದೇಶದ ಶಕೀಲ್ ಅಲ್ ಹಸನ್ ಮತ್ತು ಲಿಟನ್ ದಾಸ್ ಕೂಡಾ ಶನಿವಾರದ ಪಂದ್ಯದಲ್ಲಿ ಆಡುತ್ತಿಲ್ಲ.</p>.<p>ಪಂದ್ಯ ಆರಂಭ: ಮಧ್ಯಾಹ್ನ 3.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಹಾಲಿ (ಪಿಟಿಐ): </strong>ಆಟಗಾರರ ಗಾಯದ ಸಮಸ್ಯೆ ಮತ್ತು ಪ್ರಮುಖ ವಿದೇಶಿ ಆಟಗಾರರ ಅಲಭ್ಯತೆಯಿಂದ ಹಿನ್ನಡೆ ಅನುಭವಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಶನಿವಾರ ಎದುರಾಗಲಿವೆ.</p>.<p>ಇವೆರಡು ತಂಡಗಳು ಈಚೆಗಿನ ಕೆಲ ಟೂರ್ನಿಗಳಲ್ಲಿ ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದ್ದವು. ಕಳೆದ ಆವೃತ್ತಿಯಲ್ಲಿ ಪಂಜಾಬ್ ಆರನೇ ಸ್ಥಾನ ಪಡೆದುಕೊಂಡಿದ್ದರೆ, ಕೆಕೆಆರ್ ಏಳನೇ ಸ್ಥಾನ ಗಳಿಸಿತ್ತು.</p>.<p>ಈ ಬಾರಿ ಎರಡೂ ತಂಡಗಳು ನೂತನ ನಾಯಕರ ನೇತೃತ್ವದಲ್ಲಿ ಆಡಲಿವೆ. ಪಂಜಾಬ್ ತಂಡವನ್ನು ಶಿಖರ್ ಧವನ್ ಹಾಗೂ ಕೋಲ್ಕತ್ತ ತಂಡವನ್ನು ನಿತೀಶ್ ರಾಣಾ ಮುನ್ನಡೆಸಲಿದ್ದಾರೆ. ಶ್ರೇಯಸ್ ಅಯ್ಯರ್ ಗಾಯಗೊಂಡಿರುವ ಕಾರಣ ನಿತೀಶ್ಗೆ ನಾಯಕತ್ವದ ಹೊಣೆ ದೊರೆತಿದೆ.</p>.<p>ಜಾನಿ ಬೆಸ್ಟೊ ಅವರು ಗಾಯದ ಕಾರಣ ಟೂರ್ನಿಯಿಂದ ಹೊರಬಿದ್ದಿರುವುದು ಪಂಜಾಬ್ಗೆ ದೊಡ್ಡ ಹಿನ್ನಡೆ ಉಂಟುಮಾಡಿದೆ. ಲಿಯಾಮ್ ಲಿವಿಂಗ್ಸ್ಟೋನ್, ಕಗಿಸೊ ರಬಾಡ ಅವರ ಅನುಪಸ್ಥಿತಿ ಕೂಡಾ ಮೊದಲ ಪಂದ್ಯದಲ್ಲಿ ಕಾಡಲಿದೆ.</p>.<p>ಇದರಿಂದ ಆಲ್ರೌಂಡರ್ ಸ್ಯಾಮ್ ಕರನ್ ಮೇಲಿನ ಹೊರೆ ಹೆಚ್ಚಿದೆ. ಬೆಸ್ಟೊ ಬದಲು ತಂಡವನ್ನು ಸೇರಿರುವ ಮ್ಯಾಥ್ಯೂ ಶಾರ್ಟ್ ಅವರು ಧವನ್ ಜತೆ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.</p>.<p>ಕೆಕೆಆರ್ ತಂಡಕ್ಕೂ ಪ್ರಮುಖ ಆಟಗಾರರ ಅಲಭ್ಯತೆ ಕಾಡುತ್ತಿದೆ. ಬೆನ್ನುನೋವಿನ ಕಾರಣ ಶ್ರೇಯಸ್ ಅವರು ಇಡೀ ಟೂರ್ನಿಯಲ್ಲಿ ಆಡುವುದು ಅನುಮಾನ. ಬಾಂಗ್ಲಾದೇಶದ ಶಕೀಲ್ ಅಲ್ ಹಸನ್ ಮತ್ತು ಲಿಟನ್ ದಾಸ್ ಕೂಡಾ ಶನಿವಾರದ ಪಂದ್ಯದಲ್ಲಿ ಆಡುತ್ತಿಲ್ಲ.</p>.<p>ಪಂದ್ಯ ಆರಂಭ: ಮಧ್ಯಾಹ್ನ 3.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>