<p><strong>ಮುಂಬೈ: </strong>ಇಲ್ಲಿನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ಮುಕ್ತಾಯವಾದ ಇಂಡಿಯನ್ ಪ್ರೀಮಿಯರ್ ಲೀಗ್ನ 47ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಲಖನೌ ಸೂಪರ್ಜೈಂಟ್ಸ್ ತಂಡವನ್ನು ಸೋಲಿಸುವ ಮೂಲಕ ಗೆಲುವಿನ ಹಳಿಗೆ ಮರಳಿತು. ಈ ಪಂದ್ಯದಲ್ಲಿ ಮುಂಬೈ ಬೌಲರ್ ರಘು ಶರ್ಮಾ ಅವರ ಸಂಭ್ರಮದ ವಿಡಿಯೊ ಒಂದು ವ್ಯಾಪಕವಾಗಿ ಹರಿದಾಡುತ್ತಿದೆ.</p><p>ಸೋಮವಾರ ನಡೆದ ಪಂದ್ಯದಲ್ಲಿ ತಮ್ಮ ಚೊಚ್ಚಲ ಐಪಿಎಲ್ ವಿಕೆಟ್ ಪಡೆದ ಮುಂಬೈ ಇಂಡಿಯನ್ಸ್ ಸ್ಪಿನ್ನರ್ ರಘು ಶರ್ಮಾ ಪತ್ರವೊಂದನ್ನು ತೆಗೆದು ವಿಭಿನ್ನವಾಗಿ ಸಂಭ್ರಮಾಚರಣೆ ಮಾಡಿದ್ದಾರೆ. </p><p>ಲಖನೌ ಸೂಪರ್ಜೈಂಟ್ಸ್ ವಿರುದ್ಧದ ಪಂದ್ಯದ ಮೂಲಕ ಐಪಿಎಲ್ಗೆ ಪದಾರ್ಪಣೆ ಮಾಡಿದ ಅವರು, ಎಲ್ಎಸ್ಜಿ ಇನಿಂಗ್ಸ್ನ 13 ನೇ ಓವರ್ನಲ್ಲಿ ಅಕ್ಷತ್ ರಘುವಂಶಿ ಅವರನ್ನು ಕ್ಯಾಚ್ ಅಂಡ್ ಬೌಲ್ಡ್ ಮಾಡುವ ಮೂಲಕ ವಿಕೆಟ್ ಪಡೆದುಕೊಂಡರು. ಈ ಸಂದರ್ಭದಲ್ಲಿ ಅವರು ತಮ್ಮ ಜೇಬಿನಲ್ಲಿದ್ದ ಒಂದು ಪತ್ರವನ್ನು ತೆಗೆದು ಅದನ್ನು ಸ್ಟ್ಯಾಂಡ್ ಕಡೆ ತೋರಿಸಿ ಸಂಭ್ರಮಿಸಿದರು.</p>.<p>ಅವರು ತೆಗೆದು ತೋರಿಸಿದ ಪತ್ರದಲ್ಲಿ, ‘ರಾಧೆ ರಾಧೆ. ಗುರುದೇವರ ಆಶೀರ್ವಾದದೊಂದಿಗೆ 15 ವರ್ಷಗಳ ನೋವು ಇಂದಿಗೆ ಕೊನೆಗೊಂಡಿತು. ಈ ಅವಕಾಶವನ್ನು ನನಗೆ ನೀಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ಗೆ ಧನ್ಯವಾದಗಳು. ಎಂದೆಂದಿಗೂ ನಿಮಗೆ ಕೃತಜ್ಞರಾಗಿರುತ್ತೇನೆ. ಜೈ ಶ್ರೀ ರಾಮ್’ ಎಂಬ ಪತ್ರವನ್ನು ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಇಲ್ಲಿನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ಮುಕ್ತಾಯವಾದ ಇಂಡಿಯನ್ ಪ್ರೀಮಿಯರ್ ಲೀಗ್ನ 47ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಲಖನೌ ಸೂಪರ್ಜೈಂಟ್ಸ್ ತಂಡವನ್ನು ಸೋಲಿಸುವ ಮೂಲಕ ಗೆಲುವಿನ ಹಳಿಗೆ ಮರಳಿತು. ಈ ಪಂದ್ಯದಲ್ಲಿ ಮುಂಬೈ ಬೌಲರ್ ರಘು ಶರ್ಮಾ ಅವರ ಸಂಭ್ರಮದ ವಿಡಿಯೊ ಒಂದು ವ್ಯಾಪಕವಾಗಿ ಹರಿದಾಡುತ್ತಿದೆ.</p><p>ಸೋಮವಾರ ನಡೆದ ಪಂದ್ಯದಲ್ಲಿ ತಮ್ಮ ಚೊಚ್ಚಲ ಐಪಿಎಲ್ ವಿಕೆಟ್ ಪಡೆದ ಮುಂಬೈ ಇಂಡಿಯನ್ಸ್ ಸ್ಪಿನ್ನರ್ ರಘು ಶರ್ಮಾ ಪತ್ರವೊಂದನ್ನು ತೆಗೆದು ವಿಭಿನ್ನವಾಗಿ ಸಂಭ್ರಮಾಚರಣೆ ಮಾಡಿದ್ದಾರೆ. </p><p>ಲಖನೌ ಸೂಪರ್ಜೈಂಟ್ಸ್ ವಿರುದ್ಧದ ಪಂದ್ಯದ ಮೂಲಕ ಐಪಿಎಲ್ಗೆ ಪದಾರ್ಪಣೆ ಮಾಡಿದ ಅವರು, ಎಲ್ಎಸ್ಜಿ ಇನಿಂಗ್ಸ್ನ 13 ನೇ ಓವರ್ನಲ್ಲಿ ಅಕ್ಷತ್ ರಘುವಂಶಿ ಅವರನ್ನು ಕ್ಯಾಚ್ ಅಂಡ್ ಬೌಲ್ಡ್ ಮಾಡುವ ಮೂಲಕ ವಿಕೆಟ್ ಪಡೆದುಕೊಂಡರು. ಈ ಸಂದರ್ಭದಲ್ಲಿ ಅವರು ತಮ್ಮ ಜೇಬಿನಲ್ಲಿದ್ದ ಒಂದು ಪತ್ರವನ್ನು ತೆಗೆದು ಅದನ್ನು ಸ್ಟ್ಯಾಂಡ್ ಕಡೆ ತೋರಿಸಿ ಸಂಭ್ರಮಿಸಿದರು.</p>.<p>ಅವರು ತೆಗೆದು ತೋರಿಸಿದ ಪತ್ರದಲ್ಲಿ, ‘ರಾಧೆ ರಾಧೆ. ಗುರುದೇವರ ಆಶೀರ್ವಾದದೊಂದಿಗೆ 15 ವರ್ಷಗಳ ನೋವು ಇಂದಿಗೆ ಕೊನೆಗೊಂಡಿತು. ಈ ಅವಕಾಶವನ್ನು ನನಗೆ ನೀಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ಗೆ ಧನ್ಯವಾದಗಳು. ಎಂದೆಂದಿಗೂ ನಿಮಗೆ ಕೃತಜ್ಞರಾಗಿರುತ್ತೇನೆ. ಜೈ ಶ್ರೀ ರಾಮ್’ ಎಂಬ ಪತ್ರವನ್ನು ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>